• About us
  • Contact us
  • Disclaimer
Friday, August 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

Coastal Times by Coastal Times
June 25, 2026
in ಕರಾವಳಿ
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ
34
VIEWS
WhatsappTelegramShare on FacebookShare on Twitter

ಮಂಗಳೂರು: ಎಂಸಿಸಿ ಬ್ಯಾಂಕಿನ 22ನೇ ದೇರಳಕಟ್ಟೆ ಶಾಖೆಯನ್ನು ಜೂನ್ 28, 2026 ರಂದು ಹಾಗೂ 23ನೇ ಕಟಪಾಡಿ, ಉಡುಪಿ ಶಾಖೆಯನ್ನು ಆಗಸ್ಟ್ 2, 2026 ರಂದು ಉದ್ಘಾಟಿಸಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ದೇರಳಕಟ್ಟೆ ಶಾಖೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಿಲ್ ಲೋಬೊ ವಹಿಸಲಿದ್ದಾರೆ. ಪಾನೀರ್ ಅವರ್ ಲೇಡಿ ಆಫ್ ಮರ್ಸಿ ಚರ್ಚ್‌ನ ಧರ್ಮಗುರು ವಂ| ವಿಕ್ಟರ್ ಡಿಮೆಲ್ಲೊ ಅವರು ಆಶೀರ್ವದಿಸಲಿದ್ದಾರೆ. ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ಯು.ಟಿ. ಖಾದರ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.

ಆರ್ಸುಲಾಯ್ನ್ ಫ್ರಾನ್ಸಿಸ್ಕನ್ ಸಭೆಯ ಸುಪೀರಿಯರ್ ಜನರಲ್ ಸಿಸ್ಟರ್ ಮಿಲ್ಲಿ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಂ| ನಿಲೇಶ್ ಕ್ರಾಸ್ತಾ, ಆಡಳಿತಾಧಿಕಾರಿ, ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು; ಶ್ರೀಮತಿ ದಿವ್ಯಾ ಸತೀಶ್ ಶೆಟ್ಟಿ, ಅಧ್ಯಕ್ಷರು, ಕೋಟೆಕಾರ್ ಪಟ್ಟಣ ಪಂಚಾಯತ್ ಹಾಗೂ ಸಿ.ಎಂ. ಸತ್ತಾರ್, ಮಾಜಿ ಅಧ್ಯಕ್ಷರು, ಬೆಳ್ಮ ಗ್ರಾಮ ಪಂಚಾಯತ್ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

ದೇರಳಕಟ್ಟೆಯಲ್ಲಿ ಬ್ಯಾಂಕಿನ 16ನೇ ಎಟಿಎಂ ಕೂಡ ಅಂದು ಉದ್ಘಾಟನೆಗೊಳ್ಳಲಿದೆ. ಮೊರ್ಗನ್ಸ್‌ಗೇಟ್ ಶಾಖೆಯನ್ನು ಜುಲೈ 25 ರಂದು, ಮೂಡಬಿದಿರೆ ಶಾಖೆಯನ್ನು ಆಗಸ್ಟ್ 22 ರಂದು ಸ್ಥಳಾಂತರಿಸಿ , ಕಾರ್ಕಳ ಶಾಖೆಯನ್ನು ಆಗಸ್ಟ್ 26, 2026 ರಂದು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಎಂಸಿಸಿ ಬ್ಯಾಂಕ್ ಕಡಿಮೆ ವೆಚ್ಚದ ಲಾಕರ್ ಸೌಲಭ್ಯ, ದೇಶೀ ಹಾಗೂ ವಿದೇಶಿ ಶಿಕ್ಷಣಕ್ಕಾಗಿ ಶಿಕ್ಷಣ ಸಾಲ, ಎಮ್ಎಸ್ಎಮ್ಇ  ಸಾಲ, ವಾಹನ ಸಾಲ, ಗೃಹ ಸಾಲ, ಮನೆ ದುರಸ್ತಿ, ವಿವಾಹ ಹಾಗೂ ಗೃಹೋಪಯೋಗಿ ವಸ್ತುಗಳ ಖರೀದಿ ಸಾಲ ಸೇರಿದಂತೆ ಹಲವು ಹಣಕಾಸು ಸೇವೆಗಳನ್ನು ನೀಡುತ್ತಿದೆ. ಯಾವುದೇ ಪ್ರೊಸೆಸಿಂಗ್ ಶುಲ್ಕವಿಲ್ಲದೆ ಚಿನ್ನದ ಸಾಲ ಸೌಲಭ್ಯ ಹಾಗೂ ಉಚಿತ ಎಟಿಎಂ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಬ್ಯಾಂಕಿನ ಠೇವಣಿಗಳು ಆರ್’ಬಿಐ  ಮಾರ್ಗಸೂಚಿಯಂತೆ ಡಿಐಸಿಜಿಸಿ  ಅಡಿಯಲ್ಲಿ ವಿಮೆಗೊಂಡಿವೆ.

114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.

ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ  ರು. 91.80 ಕೋಟಿಗೆ ಏರಿಕೆಯಾಗಿದ್ದು, ಎನ್‌ಆರ್‌ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಗೆ ಪ್ರಮುಖ ಶಕ್ತಿಯಾಗಿದೆ.

ಪ್ರಸ್ತುತ ಆಡಳಿತ ಮಂಡಳಿಯ ನೇತೃತ್ವದಲ್ಲಿ ಎಂಸಿಸಿ ಬ್ಯಾಂಕಿನ ಕಾರ್ಯವ್ಯಾಪ್ತಿ ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ಬ್ಯಾಂಕ್ ಸಂಪೂರ್ಣ ಕೋರ್ ಬ್ಯಾಂಕಿಂಗ್ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುತ್ತಿದೆ. ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾಗಿ ವಿವಿಧ ಹಣಕಾಸು ಉತ್ಪನ್ನಗಳು ಹಾಗೂ ಸೇವೆಗಳನ್ನು ಒದಗಿಸುತ್ತಿರುವ ಬ್ಯಾಂಕ್, ರಾಜ್ಯಾದ್ಯಂತ ಶಾಖಾ ಜಾಲ ವಿಸ್ತರಣೆಗೆ ಆದ್ಯತೆ ನೀಡುತ್ತಿದೆ.

2018ರಲ್ಲಿ ಸಹಕಾರ ರತ್ನ ಅನಿಲ್ ಲೋಬೊ ಮತ್ತು ಅವರ ತಂಡ ಆಡಳಿತ ವಹಿಸಿಕೊಂಡ ನಂತರ ಬ್ಯಾಂಕ್ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಠೇವಣಿಗಳು ರು. 304 ಕೋಟಿಯಿಂದ ರು. 876 ಕೋಟಿಗೆ ಏರಿಕೆಯಾಗಿದ್ದು, 188% ಬೆಳವಣಿಗೆ ದಾಖಲಿಸಿದೆ. ಸಾಲ ಮತ್ತು ಮುಂಗಡಗಳು ರು. 191 ಕೋಟಿಯಿಂದ ರು. 657 ಕೋಟಿಗೆ ಏರಿಕೆಯಾಗಿದ್ದು, 243% ಪ್ರಗತಿ ಸಾಧಿಸಿದೆ.

ಷೇರು ಬಂಡವಾಳ ರು. 13 ಕೋಟಿಯಿಂದ ರು. 34 ಕೋಟಿಗೆ ಏರಿಕೆಯಾಗಿದ್ದು, 161% ಬೆಳವಣಿಗೆ ಕಂಡಿದೆ. ಮೀಸಲು ನಿಧಿ ರು. 29 ಕೋಟಿಯಿಂದ ರು. 85 ಕೋಟಿಗೆ ಏರಿಕೆಯಾಗಿದೆ. ವ್ಯವಹಾರ ವಹಿವಾಟು ರು. 496 ಕೋಟಿಯಿಂದ ರು. 1,535 ಕೋಟಿಗೆ ತಲುಪಿ 209% ಬೆಳವಣಿಗೆ ದಾಖಲಿಸಿದೆ. ಸಿ ಆರ್ ಎಆರ್  ಅನುಪಾತವು 11.70% ರಿಂದ 16.55% ಕ್ಕೆ ಸುಧಾರಿಸಿದ್ದು, ಆಸ್ತಿಗಳ ಮೇಲಿನ ಆದಾಯ 0.56% ರಿಂದ 1.40% ಕ್ಕೆ ಏರಿಕೆಯಾಗಿದೆ.

ದಕ್ಷ ಆಡಳಿತ ಮಂಡಳಿ, ಸಮರ್ಪಿತ ಸಿಬ್ಬಂದಿ ಮತ್ತು ಸಮರ್ಥ ಕಾರ್ಯತಂತ್ರದ ಯೋಜನೆಯಿಂದ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕ್ ವಿಧಿಸಿರುವ ಎಲ್ಲಾ ನಿಯಮಗಳನ್ನು ಯಶಸ್ವಿಯಾಗಿ ಪೂರೈಸಿದೆ. 22 ವರ್ಷಗಳ ನಂತರ ಬ್ಯಾಂಕ್ ಬ್ರಹ್ಮಾವರ, ಬೆಳ್ತಂಗಡಿ, ಬೆಳ್ಮಣ್, ಬೈಂದೂರು ಮತ್ತು ಸಂತೆಕಟ್ಟೆಯಲ್ಲಿ ಹೊಸ ಶಾಖೆಗಳನ್ನು ಆರಂಭಿಸುವ ಮೂಲಕ ವಿಸ್ತರಣೆಗೆ ಚಾಲನೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕರಾದ ಆ್ಯಂಡ್ರೂ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೋಜಾ, ಎಲ್ರಾಯ್ ಕಿರಣ್ ಕ್ರಾಸ್ಟೊ  , ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಪ್ರಧಾನ ವ್ಯವಸ್ಥಾಪಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

Next Post

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

Related Posts

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ
ಕರಾವಳಿ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಕರಾವಳಿ

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
20
Next Post
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d