• About us
  • Contact us
  • Disclaimer
Monday, September 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು: ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ

Coastal Times by Coastal Times
July 25, 2022
in ರಾಜ್ಯ
ಬೆಂಗಳೂರು: ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ
85
VIEWS
WhatsappTelegramShare on FacebookShare on Twitter

ಬೆಂಗಳೂರು: ಇಲ್ಲಿಯ ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಸ್ಸಾಂನ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಮನೆಯಲ್ಲಿ ನೆಲೆಸಿದ್ದ. ಆತನ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಶಂಕಿತನ ಬಗ್ಗೆ ಕೇಂದ್ರ ಗುಪ್ತದಳದಿಂದ‌ ಮಾಹಿತಿ ಬಂದಿತ್ತು. ಕಾರ್ಯಾಚರಣೆ ನಡೆಸಿದ ಸಿಸಿಬಿ‌ ಪೊಲೀಸರು, ರಾತ್ರಿ‌ ಮನೆ ಮೇಲೆ ದಾಳಿ‌ ಮಾಡಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ‘ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದ ಅಖ್ತರ್, ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಈತನನ್ನು‌ ವಶಕ್ಕೆ‌ ಪಡೆಯಲಾಗಿದ್ದು, ವಿಚಾರಣೆ ನಡೆಸಿದ ಬಳಿಕವೇ ಮತ್ತಷ್ಟು ಮಾಹಿತಿ ಸಿಗಲಿದೆ’ ಎಂದು‌ ಸಿಸಿಬಿ‌ ಮೂಲಗಳು ಹೇಳಿವೆ. ಕೆಲ‌ ದಿನಗಳ ಹಿಂದೆಯಷ್ಟೇ ಓಕಳಿಪುರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಜೊತೆಗಿದ್ದ ಮೂವರನ್ನು ಕಸ್ಟಡಿ ಪಡೆದುಕೊಂಡಿಲ್ಲ : ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಸ್ಪಷ್ಟನೆ : ನಗರದಲ್ಲಿ ನೆಲೆಯೂರಿದ್ದ ಮನೆ ಮೇಲೆ‌ ದಾಳಿ ಮಾಡಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಜೊತೆಯಲ್ಲಿದ್ದ ಮೂವರನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ‌. ಕೇಂದ್ರ ಹಾಗೂ ರಾಜ್ಯ ತನಿಖಾ‌ ಸಂಸ್ಥೆಗಳ‌ ನೆರವಿನಿಂದ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಿನ್ನೆ ತಿಲಕ್ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ಶಂಕಿತ ಉಗ್ರನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ಜೊತೆಯಲ್ಲಿ ವಾಸವಿದ್ದ ಅಸ್ಸೋಂ ಮೂಲದ ಮೂವರು ಯುವಕರನ್ನ ಪ್ರಶ್ನಿಸಲಾಗುತ್ತಿದೆ.‌ ತನಿಖೆಯಲ್ಲಿ ಇವರ ಪಾತ್ರ ಕಂಡುಬಂದರೆ ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿಯಲ್ಲಿ ವೃದ್ಧೆಯನ್ನು ಕೊಲೆಗೈದು, ಚಿನ್ನಾಭರಣ ಸಹಿತ ನಗದು ದರೋಡೆ: ಆರೋಪಿ ಅರೆಸ್ಟ್​​

Next Post

ಉಳ್ಳಾಲ: ನೇತ್ರಾವತಿ ಸೇತುವೆ ಹೊಂಡಕ್ಕೆ ಬಿದ್ದು ಕೈಮೂಳೆ ಮುರಿತ, ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಉಳ್ಳಾಲ: ನೇತ್ರಾವತಿ ಸೇತುವೆ ಹೊಂಡಕ್ಕೆ ಬಿದ್ದು ಕೈಮೂಳೆ ಮುರಿತ, ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ

ಉಳ್ಳಾಲ: ನೇತ್ರಾವತಿ ಸೇತುವೆ ಹೊಂಡಕ್ಕೆ ಬಿದ್ದು ಕೈಮೂಳೆ ಮುರಿತ, ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ

Discussion about this post

Recent News

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
1
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d