• About us
  • Contact us
  • Disclaimer
Wednesday, March 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ನೇತ್ರಾವತಿ ಸೇತುವೆ ಹೊಂಡಕ್ಕೆ ಬಿದ್ದು ಕೈಮೂಳೆ ಮುರಿತ, ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ

Coastal Times by Coastal Times
July 25, 2022
in ಕರಾವಳಿ
ಉಳ್ಳಾಲ: ನೇತ್ರಾವತಿ ಸೇತುವೆ ಹೊಂಡಕ್ಕೆ ಬಿದ್ದು ಕೈಮೂಳೆ ಮುರಿತ, ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ
294
VIEWS
WhatsappTelegramShare on FacebookShare on Twitter

ಮಂಗಳೂರು ,ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯ ಮಧ್ಯಭಾಗದಲ್ಲಿನ ಬೃಹತ್‌ ಗಾತ್ರದ ಹೊಂಡಕ್ಕೆ ಬಿದ್ದು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯ ಬಲಗೈ ಮೂಳೆ ಮುರಿದಿದೆ. ಘಟನೆಯಿಂದ ಮುಂದಿನ ತಿಂಗಳು ನಡೆಯಲಿರುವ ಯುಜಿಸಿ ಪರೀಕ್ಷೆ ಹಾಗೂ ಆಂತರಿಕ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವುದರಿಂದ ವಿದ್ಯಾರ್ಥಿನಿ ಆತಂಕಕ್ಕೆ ಒಳಗಾಗಿದ್ದಾರೆ. ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ಎಂಎಸ್ಸಿ ವಿದ್ಯಾರ್ಥಿನಿ ಕೊಟ್ಟಾರ ನಿವಾಸಿ ನಿಶ್ಮಿತಾ (19) ಗಾಯಗೊಂಡವರು. ಜು.22 ರಂದು ಸಂಜೆ ಕೊಣಾಜೆ ಕಡೆಯಿಂದ ಮಂಗಳೂರಿಗೆ ತಮ್ಮ ಸ್ಕೂಟಿಯಲ್ಲಿ ತೆರಳುವ ಸಂದರ್ಭ ಜೋರಾಗಿ ಮಳೆಯಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಪ್ರಯಾಣಿಸುವ ಸಂದರ್ಭ ಸೇತುವೆ ಮಧ್ಯಭಾಗದಲ್ಲಿ ಬೃಹತ್‌ ಗಾತ್ರದ ಹೊಂಡಕ್ಕೆ ಸ್ಕೂಟಿ ಸಿಲುಕಿ ರಸ್ತೆಗೆ ಉರುಳಿದೆ.

ರಸ್ತೆಯಲ್ಲಿ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಂಡ ರಿಕ್ಷಾ ಚಾಲಕರೊಬ್ಬರು ತಕ್ಷಣ ಆಕೆಯನ್ನು ನಗರದ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಬಲಗೈ ಮೂಳೆ ಮುರಿತಕ್ಕೊಳಗಾಗಿರುವುದು ಎಕ್ಸ್‌-ರೇ ಮೂಲಕ ಗೊತ್ತಾಗಿದೆ. ಅಲ್ಲದೇ ಕೈ ಹಾಗೂ ಮೈ ಪೂರ್ತಿ ಅಲ್ಲಲ್ಲಿ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಲಗೈ ಮೂಳೆ ಜೋಡಿಸಲು ಶಸ್ತ್ರ ಚಿಕಿತ್ಸೆ ನಡೆಸಿ ರಾಡ್​​ ಅಳವಡಿಸಲಾಗಿದೆ. ಮುಂದಿನ ಆರು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಅಂದು ಪ್ರಾಜೆಕ್ಟ್‌ ಕೆಲಸಗಳಿದ್ದುದರಿಂದ ಕಾಲೇಜಿಗೆ ಸ್ಕೂಟರ್​​ ತಂದಿದ್ದೆ. ಮನೆಗೆ ವಾಪಸ್​​ ಮರಳುವ ಸಂದರ್ಭ ನೇತ್ರಾವತಿ ಸೇತುವೆಯಲ್ಲಿನ ಹೊಂಡ ಅರಿವಿಗೆ ಬಾರದೆ ಬಿದ್ದು ಕೈ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದೇನೆ. ಎಂಎಸ್ಸಿ ಅಂತಿಮ ವರ್ಷವಾಗಿರುವುದರಿಂದ ಆಗಸ್ಟ್​​ ತಿಂಗಳಿನಲ್ಲಿ ಆಂತರಿಕ ಪರೀಕ್ಷೆಗಳಿವೆ. ಅದನ್ನು ಎದುರಿಸಲು ಸಾಧ್ಯವಿಲ್ಲ. ಜೊತೆಗೆ ಆ.12 ರಂದು ಯುಜಿಸಿ ಪರೀಕ್ಷೆ ಇರುವುದರಿಂದ ಭವಿಷ್ಯವೇ ಅತಂತ್ರವಾಗಿದೆ. ಶಸ್ತ್ರಚಿಕಿತ್ಸೆಗೆ ಈವರೆಗೆ ರೂ.65,000 ಖರ್ಚನ್ನು ಪೋಷಕರು ಭರಿಸಿದ್ದಾರೆ. ಆಸ್ಪತ್ರೆ ಬಿಲ್‌ ಇನ್ನು ಬರಬೇಕಿದೆ. ಹೆದ್ದಾರಿ ಅವ್ಯವಸ್ಥೆಯೇ ಅಪಘಾತಕ್ಕೆ ಕಾರಣ. ಯಾರ ಮೇಲೆ ಪ್ರಕರಣ ದಾಖಲಿಸುವುದು ಎಂಬ ಗೊಂದಲದಲ್ಲಿ ಇರುವುದರಿಂದ ಅದನ್ನು ಕೈಬಿಟ್ಟಿದ್ದೇವೆ ಎನ್ನುತ್ತಾರೆ ಗಾಯಾಳು ವಿದ್ಯಾರ್ಥಿನಿ ನಿಶ್ಮಿತಾ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು: ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನ ಬಂಧನ

Next Post

ಬಲ್ಮಠ ರಿಸೈಕಲ್ ದಿ ಲಾಂಜ್ ಪಬ್ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಕಾಲೇಜು ವಿದ್ಯಾರ್ಥಿಗಳ ತುಂಡುಡುಗೆ ಪಾರ್ಟಿಗೆ ತಡೆ

Related Posts

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.
ಕರಾವಳಿ

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
7
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್
ಕರಾವಳಿ

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
26
Next Post
ಬಲ್ಮಠ ರಿಸೈಕಲ್ ದಿ ಲಾಂಜ್ ಪಬ್ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಕಾಲೇಜು ವಿದ್ಯಾರ್ಥಿಗಳ ತುಂಡುಡುಗೆ ಪಾರ್ಟಿಗೆ ತಡೆ

ಬಲ್ಮಠ ರಿಸೈಕಲ್ ದಿ ಲಾಂಜ್ ಪಬ್ ಮೇಲೆ‌ ಬಜರಂಗದಳ ಕಾರ್ಯಕರ್ತರಿಂದ ಕಾಲೇಜು ವಿದ್ಯಾರ್ಥಿಗಳ ತುಂಡುಡುಗೆ ಪಾರ್ಟಿಗೆ ತಡೆ

Discussion about this post

Recent News

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
7
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್)ನಲ್ಲಿ ಪ್ರಥಮ ರ‍್ಯಾಂಕ್

March 4, 2026
ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದ ಆರೋಪಿ ಭಟ್ಕಳದಲ್ಲಿ ಬಂಧನ

March 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d