ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್ಗಳು, 1 ಬ್ಲೂಟೂತ್ ಸಾಧನ, 5 ಇಯರ್ಫೋನ್ಗಳು, 1 ಪೆನ್ ಡ್ರೈವ್, 5 ಚಾರ್ಜರ್ಗಳು, 1 ಜೊತೆ ಕತ್ತರಿ, 3 ಕೇಬಲ್ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು ಪತ್ತೆಯಾಗಿವೆ.
ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್ಗಳಲ್ಲಿ ತಪಾಸಣೆ ನಡೆಸಲಾಯಿತು. ದಾಳಿ ನಡೆಸುವ ಕೊನೆಯ ಕ್ಷಣದವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಸಾಕಷ್ಟು ಭದ್ರತೆಯ ನಡುವೆಯೂ ಮೊಬೈಲ್ ಫೋನ್ ಮತ್ತಿತರ ಸಾಮಗ್ರಿಗಳು, ಗಾಂಜಾ ಮತ್ತು ಡ್ರಗ್ಸ್ಗಳನ್ನು ಜೈಲಿನೊಳಗೆ ಹೇಗೆ ಕೊಂಡೊಯ್ಯಲಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್ಗಳಲ್ಲಿ ತಪಾಸಣೆ ನಡೆಸಲಾಯಿತು. ದಾಳಿ ನಡೆಸುವ ಕೊನೆಯ ಕ್ಷಣದವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ. ಜೈಲಿನೊಳಗೆ ಇಷ್ಟೊಂದು ವಸ್ತುಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post