• About us
  • Contact us
  • Disclaimer
Tuesday, May 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ. ವಾರಾಂತ್ಯ ರಸ್ತೆಬದಿ ಉತ್ಸವಕ್ಕೆ ಜಿಲ್ಲಾಡಳಿತ ಯೋಜನೆ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

Coastal Times by Coastal Times
September 25, 2021
in ಕರಾವಳಿ
ದ.ಕ. ವಾರಾಂತ್ಯ ರಸ್ತೆಬದಿ ಉತ್ಸವಕ್ಕೆ ಜಿಲ್ಲಾಡಳಿತ ಯೋಜನೆ: ಜಿಲ್ಲಾಧಿಕಾರಿ ಡಾ.ರಾಜೇಂದ್ರ
20
VIEWS
WhatsappTelegramShare on FacebookShare on Twitter

ಮಂಗಳೂರು: ಕೊರೋನ 2ನೆ ಅಲೆ ತಗ್ಗುತ್ತಿರುವಂತೆಯೇ ಜಿಲ್ಲೆಯಲ್ಲಿ ಸ್ಥಳೀಯ ಕಲಾವಿದರು ಹಾಗೂ ವ್ಯಾಪಾರಿಗಳಿಗೆ ವೇದಿಕೆಯ ಜತೆಗೆ ಜಿಲ್ಲೆಯ ಜನರಿಗೆ ವೀಕೆಂಡ್ ಮನರಂಜನೆಗೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ನಗರದ ಪ್ರಮುಖ ರಸ್ತೆಗಳಾದ ಕದ್ರಿ ಪಾರ್ಕ್ ಎದುರು ಹಾಗೂ ಕ್ಲಾಕ್‍ಟವರ್ ನಿಂದ ಎಬಿಶೆಟ್ಟಿ ಸರ್ಕಲ್ ರಸ್ತೆಯಲ್ಲಿ ವಾರಾಂತ್ಯ ರಸ್ತೆಬದಿ ಉತ್ಸವ(ವೀಕೆಂಡ್ ಸ್ಟ್ರೀಟ್ ಫೆಸ್ಟಿವಲ್) ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ವತಿಯಿಂದ ಸೆ.24 ರಂದು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಆಯೋಜಿಸಲಾದ ಜಿಲ್ಲಾಧಿಕಾರಿ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಾರಾಂತ್ಯದ ದಿನಗಳಲ್ಲಿ (ಶನಿವಾರ, ರವಿವಾರ) ನಿಗದಿತ ರಸ್ತೆಯುದ್ದಕ್ಕೂ ಸ್ಥಳೀಯ ಆಹಾರ, ಕರಕುಶಲ ವಸ್ತುಗಳು ಸೇರಿದಂತೆ ತಾತ್ಕಾಲಿಕ ವ್ಯಾಪಾರ ಮಳಿಗೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮಗಳ ಮೂಲಕ ಜನರಿಗೆ ಮನರಂಜನೆಯ ಜತೆಗೆ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಈ ಉತ್ಸವ ವರ್ಷಪೂರ್ತಿ ನಿರಂತರ ವಾರಾಂತ್ಯದಲ್ಲಿ ನಡೆಸಲು ಚಿಂತನೆ ಮಾಡಲಾಗಿದೆ. ಕೊರೋನ ಪಾಸಿಟಿವಿಟಿ ದರ ಇನ್ನಷ್ಟು ಕಡಿಮೆಯಾಗುವ ಜತೆಗೆ ಮೂರನೇ ಅಲೆಯ ಆತಂಕವಿಲ್ಲದಿದ್ದರೆ ಇದನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಬೀಚ್‍ಗಳ ಅಭಿವೃದ್ಧಿ, ಪಿಲಿಕುಳಕ್ಕೆ ಪ್ರವಾಸಿಗರ ಆಕರ್ಷಣೆಗೆ ಕ್ರಮ:
ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ. 27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು.

ಬೆಂಗ್ರೆ ಬೀಚ್‍ನಲ್ಲಿ ಗಾಲ್ಫ್ ಕಾರ್ಸ್ ಗಾಗಿ 2007-08ನೆ ಸಾಲಿನಲ್ಲಿ ಓಪಸ್ ಲಗೂನಾ ಸಂಸ್ಥೆ ಟೆಂಡರ್ ವಹಿಸಿದ್ದು, ಸಂಸ್ಥೆಗೆ ಇದೀಗ ಸಿಆರ್ ಝಡ್ ಅನುಮತಿ ದೊರಕಿದೆ. ಇಲ್ಲಿ ಜಮೀನು ಒತ್ತುವರಿ ಸಮಸ್ಯೆ ಇರುವುದರಿಂದ ಅದಕ್ಕೆ ಸೂಕ್ತ ಕ್ರಮಗಳೊಂದಿಗೆ ರೆಸಾರ್ಟ್ ಮಾದರಿಯಲ್ಲಿ ಅಭಿವೃದ್ದಿ ಪಡಿಸಿದಾಗ ಸ್ಥಳೀಯ ಸುಮಾರು 800 ಮಂದಿಗೆ ಉದ್ಯೋಗವೂ ದೊರಕಲಿದೆ. ಈ ಕುರಿತಂತೆ ಕಳೆದ ಎರಡು ತಿಂಗಳ ಅವಧಿಯಲ್ಲಿ 6 ಸಭೆಗಳನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಬೀಚ್‍ನಲ್ಲಿ ಸರಕಾರಿ ಸರ್ಫಿಂಗ್ ಸ್ಕೂಲ್ ಆರಂಭಿಸುವ ಪ್ರಸ್ತಾವನೆ ಇದೆ. ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಅಲ್ಲಿ ಯಾವುದೇ ರೀತಿಯ ತಾತ್ಕಾಲಿಕ ಮೂಲಭೂತ ಸೌಕರ್ಯಗಳನು ಮಾಡಿದಾಗಲೂ ಕಡಲ್ಕೊರೆತದಿಂದ ಸಮಸ್ಯೆಯಾಗುವ ಕಾರಣ, ಅದನ್ನು ತಡೆಯುವ ನಿಟ್ಟಿನಲ್ಲಿ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ. ಜಂಗಲ್ ಲಾಡ್ಜ್ ಮಾದರಿಯಲ್ಲಿ ಅಲ್ಲಿ ತಾತ್ಕಾಲಿಕ ಸಾಂಪ್ರದಾಯಿಕ ಗುಡಿಸಲುಗಳ ನಿರ್ಮಾಣ, ಮೇಲ್ಛಾವಣಿ ರಹಿತ ರೆಸ್ಟೋರೆಂಟ್‍ಗಳ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಪಿಲಿಕುಳ ಜೈವಿಕ ಉದ್ಯಾನನವಾಗಿದ್ದು, ನೈಸರ್ಗಿಕ ರೀತಿಯಲ್ಲಿ ಇಲ್ಲಿ ಪ್ರಾಣಿ, ಪಕ್ಷಿಗಳ ವಾಸಕ್ಕೆ ಅವಕಾಶವಿದೆ. ಈಗಿರುವ ವನ್ಯಜೀವಿಗಳಿಗೆ ವಿಶೇಷ ಆಕರ್ಷಣೆಯಾಗಿ ಜಿರಾಫೆ, ಜೀಬ್ರಾ ಹಾಗೂ ಆನೆಗಳನ್ನು ಸೇರ್ಪಡೆಗೊಳಿಸಲು ಚಿಂತಿಸಲಾಗಿದೆ. ಇದೇ ವೇಳೆ ಜಿಲ್ಲೆಯ ಪ್ರಮುಖ ಆಕರ್ಷಣೆಯಾದ ಕಂಬಳವನ್ನು ಪಿಲಿಕುಳದಲ್ಲಿ ಮತ್ತೆ ನಡೆಸುವುದು, ನದಿ ಉತ್ಸವವನ್ನು ಆರಂಭಿಸುವ ಬಗ್ಗೆಯೂ ಆಲೋಚನೆ ಇದೆ ಎಂದು ಅವರು ಹೇಳಿದರು.

ಸಂವಾದದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಹರೀಶ್ ಮೋಟುಕಾನ ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ಬಿಪಿ’ ನಿರ್ಲಕ್ಷ್ಯದಿಂದ ದೇಹದಲ್ಲಿ ರೋಗದ ಹೊರೆ ಹೆಚ್ಚಾಗಲಿದೆ

Next Post

ಮಂಗಳೂರು: ಬಂದರು ಎನ್‌ಎಂಪಿಟಿ. ಇಲ್ಲಿ ₹2,300 ಕೋಟಿ ವೆಚ್ಚದಲ್ಲಿ ಗ್ಯಾಸ್‌ ಟರ್ಮಿನಲ್‌ ನಿರ್ಮಾಣ

Related Posts

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ
ಕರಾವಳಿ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
18
ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
84
Next Post
ಮಂಗಳೂರು: ಬಂದರು ಎನ್‌ಎಂಪಿಟಿ. ಇಲ್ಲಿ ₹2,300 ಕೋಟಿ ವೆಚ್ಚದಲ್ಲಿ ಗ್ಯಾಸ್‌ ಟರ್ಮಿನಲ್‌ ನಿರ್ಮಾಣ

ಮಂಗಳೂರು: ಬಂದರು ಎನ್‌ಎಂಪಿಟಿ. ಇಲ್ಲಿ ₹2,300 ಕೋಟಿ ವೆಚ್ಚದಲ್ಲಿ ಗ್ಯಾಸ್‌ ಟರ್ಮಿನಲ್‌ ನಿರ್ಮಾಣ

Discussion about this post

Recent News

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
18
ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

May 12, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರು ಕಾರ್ಮಿಕರ ರಕ್ಷಣೆ

May 12, 2026
ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

ಇಸ್ರೇಲ್‌ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ 42 ವರ್ಷದ ವ್ಯಕ್ತಿ ಆತ್ಮಹತ್ಯೆ

May 12, 2026
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d