• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಯಮತ್ತೂರು ಕಾರು ಸ್ಫೋಟ : ಐವರ ಬಂಧನ, ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳ ವಶ

Coastal Times by Coastal Times
October 25, 2022
in ರಾಷ್ಟ್ರೀಯ ಸುದ್ದಿ
ಕೊಯಮತ್ತೂರು ಕಾರು ಸ್ಫೋಟ : ಐವರ ಬಂಧನ, ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳ ವಶ
90
VIEWS
WhatsappTelegramShare on FacebookShare on Twitter

ಕೊಯಮತ್ತೂರು: ಕೋಮು ಸೂಕ್ಷ್ಮ ಪ್ರದೇಶವಾದ ಕೊಟ್ಟೈಮೇಡುವಿನ ಸಂಗಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಭಾನುವಾರ ಸಂಭವಿಸಿದ ಕಾರು ಸ್ಫೋಟದಲ್ಲಿ 29 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ನಂತರ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಕೊಯಮತ್ತೂರು ನಗರ ಪೊಲೀಸರು ಐವರನ್ನು ಮಂಗಳವಾರ ಬಂಧಿಸಿದ್ದಾರೆ. ಎ. ಜಮೀಶಾ ಮುಬಿನ್ (29) ಸ್ಫೋಟದಲ್ಲಿ ಸುಟ್ಟು ಕರಕಲಾಗಿದ್ದರು. ವಾಹನದಲ್ಲಿ ಮೊಳೆಗಳು, ಬೇರಿಂಗ್ ಬಾಲ್‌ಗಳು, ಗಾಜಿನ ಉಂಡೆಗಳು, ಸ್ಫೋಟಗೊಳ್ಳದ ಎಲ್‌ಜಿಪಿ ಸಿಲಿಂಡರ್ ಮತ್ತು ಇತರ ಕೆಲವು ವಸ್ತುಗಳು ಪತ್ತೆಯಾಗಿವೆ. ಮೊದಲಿಗೆ ಎಲ್‌ಪಿಜಿ ಸಿಲಿಂಡರ್ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮೃತರ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಪೊಟ್ಯಾಸಿಯಮ್ ನೈಟ್ರೇಟ್, ಅಲ್ಯುಮಿನಿಯಂ ಪೌಡರ್, ಸಲ್ಫರ್ ಮತ್ತು ಇದ್ದಿಲು ಸೇರಿದಂತೆ ದೊಡ್ಡ ಪ್ರಮಾಣದ ಕಡಿಮೆ ತೀವ್ರತೆಯ ಸ್ಫೋಟಕಗಳು ಪತ್ತೆಯಾಗಿವೆ.

ಸ್ಫೋಟಕಗಳನ್ನು ತಯಾರಿಸಲು ಬಳಸುವ ಕಡಿಮೆ ತೀವ್ರತೆಯ ಸ್ಫೋಟಕ ವಸ್ತುವನ್ನು ಮುಬಿನ್ ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಅವರ ಮನೆಯಲ್ಲಿನ ವಸ್ತುಗಳನ್ನು ನೋಡಿದರೆ, ಇದು ಭವಿಷ್ಯದಲ್ಲಿ ಸಂಭವನೀಯ ಯೋಜನೆಗೆ ಉದ್ದೇಶಿಸಿರಬಹುದು ಎಂದು ಡಿಜಿಪಿ ಸಿ. ಶೈಲೇಂದ್ರ ಬಾಬು ಭಾನುವಾರ ಹೇಳಿದ್ದಾರೆ. ಕೊಯಮತ್ತೂರು ನಗರ ಪೊಲೀಸರು ಹೆಚ್ಚಿನ ತನಿಖೆಗಾಗಿ ಸೆಕ್ಷನ್ 174 ಸಿಆರ್‌ಪಿಸಿ  ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಗರದಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಮೃತ ವ್ಯಕ್ತಿ ಕೆಲವು ಜನರೊಂದಿಗೆ ಸಂಪರ್ಕ ಹೊಂದಿದ್ದರು. ಅಲ್ಲದೆ, ಕೊಟ್ಟೈಮೇಡುವಿನ ಎಚ್‌ಎಂಪಿಆರ್‌ನಲ್ಲಿರುವ ಮೆಬಿನ್ ಅವರ ಮನೆಯ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಮನೆಯಿಂದ ಶನಿವಾರ ರಾತ್ರಿ 11.25ರ ಸುಮಾರಿಗೆ ಮುಬಿನ್ ಅವರ ಮನೆಯಿಂದ ಐವರು ಗೋಣಿ ಚೀಲವನ್ನು ತೆಗೆದುಕೊಂಡು ಹೋಗುತ್ತಿರುವುದು ಮನೆಯ ಸಮೀಪವಿರುವ ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಬಿನ್ ಜೊತೆಗಿನ ಸಂಪರ್ಕದ ಆಧಾರದ ಮೇಲೆ, ಸೋಮವಾರ ಮತ್ತೆ ಐದು ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್ ಧಾಲ್ಹಾ(25), ಮೊಹಮ್ಮದ್ ರಿಯಾಜ್ (27), ಫಿರೋಜ್ ಇಸ್ಮಾಯಿಲ್ (27), ಜಿಎಂ ನಗರದ ಮೊಹಮ್ಮದ್ ನವಾಸ್ ಇಸ್ಮಾಯಿಲ್, ಉಕ್ಕಡಂನ ಮೊಹಮ್ಮದ್ ಅಜರುದ್ದೀನ್ (23) ಎಂದು ಗುರುತಿಸಲಾಗಿದೆ. ರಾತ್ರಿ ಅವರನ್ನು ಬಂಧಿಸಲಾಗಿದ್ದು, ಇಂದು ರಿಮಾಂಡ್‌ಗೆ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅಜರುದ್ದೀನ್ ಮುಬಿನ್‌ನ ಸೋದರಸಂಬಂಧಿಯಾಗಿದ್ದು, ಆತನೇ ಮುಬಿನ್‌ಗೆ ಸಾಗಣೆಯನ್ನು ಏರ್ಪಡಿಸಿದ್ದನು. ಮೊಹಮ್ಮದ್ ಧಾಲ್ಹಾ ಅವರು ಕಾರ್ ವ್ಯವಸ್ಥೆ ಮಾಡಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಸಿಕ್ಕ ಇತರ ಮೂವರು ರಿಯಾಜ್, ಫಿರೋಜ್ ಮತ್ತು ನವಾಸ್ ಕಾರಿನಲ್ಲಿ ಸಾಮಗ್ರಿಗಳನ್ನು ಲೋಡ್ ಮಾಡಲು ಮುಬಿನ್‌ಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತರು ಈ ಆರೋಪಗಳನ್ನು ನಿರಾಕರಿಸಿದ್ದು, ಮುಬಿನ್ ತನ್ನ ನಿವಾಸವನ್ನು ಬದಲಾಯಿಸಲು ಸಹಾಯ ಮಾಡಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಮೃತ ಮುಬಿನ್ ಬಾಡಿಗೆ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸವಿದ್ದ ಕಾರಣ ಇದಕ್ಕೆ ಅವಕಾಶವಿರಲಿಲ್ಲ ಮತ್ತು ನಾವು ಹುಡುಕಲು ಹೋದಾಗ ಸ್ಫೋಟಕ ವಸ್ತುಗಳ ವಾಸನೆಯು ವಿಪರೀತವಾಗಿತ್ತು. ಕಾರಿನಲ್ಲಿ ಯಾವ ವಸ್ತುಗಳನ್ನು ಲೋಡ್ ಮಾಡಲಾಗಿದೆ ಎಂಬುದು ಅವರಿಗೇ ತಿಳಿದಿರಬೇಕು ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ. ಮನೆಗಳನ್ನು ಬದಲಾಯಿಸುವಾಗ, ಮನೆಯ ಇತರ ವಸ್ತುಗಳನ್ನು ಮೊದಲು ಸ್ಥಳಾಂತರಿಸಲಾಗುತ್ತದೆ. ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ಅಂತಹ ಸ್ಫೋಟಕಗಳನ್ನು ಮೊದಲು ಸ್ಥಳಾಂತರಿಸಲು ಯಾರೂ ಬಯಸುವುದಿಲ್ಲ ಎಂದು ಅಧಿಕಾರಿ ಹೇಳಿದರು.

ಅವರು ಈ ಸ್ಫೋಟಕ ವಸ್ತುಗಳನ್ನು ಎಲ್ಲಿ ಖರೀದಿಸಿದ್ದಾರೆ, ಎಲ್ಲಿಗೆ ಅವುಗಳನ್ನು ಸ್ಥಳಾಂತರಿಸಲು ಪ್ರಯತ್ನಿಸಿದ್ದಾರೆ ಮತ್ತು ಯಾರ ನಿರ್ದೇಶನದ ಮೇರೆಗೆ ಈ ಕೆಲಸ ಮಾಡಿದ್ದಾರೆ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ವಿಚಾರವಾಗಿ ತನಿಖೆ ನಡೆಸಲು ಬಂಧಿತ ಐವರನ್ನು ಮತ್ತೆ ತಮ್ಮ ಕಸ್ಟಡಿಗೆ ತೆಗೆದುಕೊಳ್ಳಲು ಪೊಲೀಸರು ಯೋಜಿಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬಾಲಿವುಡ್ ನಟಿ ಉರ್ಫಿ ಜಾವೇದ್ ‘ದೀಪಾವಳಿ ವಿಶ್ ಗೆ ದಂಗಾದ ಪಡ್ಡೆ ಹುಡುಗರು ! ನೆಟ್ಟಿಗರಿಂದ ಟ್ರೋಲ್

Next Post

ಬೆಳ್ತಂಗಡಿ: ತೀವ್ರ ಜ್ವರದಿಂದ ಒಂದೇ ಮನೆಯ ಪುಟಾಣಿ ಸಹೋದರರಿಬ್ಬರ ಸಾವು

Related Posts

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
51
ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
58
Next Post
ಬೆಳ್ತಂಗಡಿ: ತೀವ್ರ ಜ್ವರದಿಂದ ಒಂದೇ ಮನೆಯ ಪುಟಾಣಿ ಸಹೋದರರಿಬ್ಬರ ಸಾವು

ಬೆಳ್ತಂಗಡಿ: ತೀವ್ರ ಜ್ವರದಿಂದ ಒಂದೇ ಮನೆಯ ಪುಟಾಣಿ ಸಹೋದರರಿಬ್ಬರ ಸಾವು

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
20
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d