ಮಂಗಳೂರು, ಅ.24 : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನಾ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಸುರತ್ಕಲ್ನ ಕಾನಾ ನಿವಾಸಿ ಸುಶಾಂತ್ ಅಲಿಯಾಸ್ ಕಡವಿ( 29)ಕೆವಿ ಅಲೆಕ್ಸ್,( 27) ಸುರತ್ಕಲ್ ಮೂಲದ ನಿತಿನ್ (26) ಮತ್ತು ಅರುಣ್ ಶೆಟ್ಟಿ (56) ಆರೋಪಿಗಳಿಗೆ ಆ ಬಂಧಿತ ಆರೋಪಿಗಳು.
“ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಎಲ್ಲರೂ ಈ ಹಿಂದೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಗುರುವಾರ ರಾತ್ರಿ ಅವರ ಕೃತ್ಯಗಳು ಅಜಾಗರೂಕ ಮತ್ತು ಹಿಂಸಾತ್ಮಕವಾಗಿದ್ದವು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುರತ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಪಿ ನೇತೃತ್ವದಲ್ಲಿ ಉಪ ಪೊಲೀಸ್ ಆಯುಕ್ತ ರವಿಶಂಕರ್ ಮತ್ತು ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ ಅವರ ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆಯಿತು. ವಿಶೇಷ ತನಿಖಾ ತಂಡದಲ್ಲಿ ಹಲವಾರು ಪಿಎಸ್ಐಗಳು ಮತ್ತು ಎಎಸ್ಐಗಳು, ಅಪರಾಧ ನಿಯಂತ್ರಣ ಶಾಖೆ (ಸಿಸಿಬಿ) ಮತ್ತು ಶ್ವಾನ ದಳದ ಸಿಬ್ಬಂದಿ ಅಪರಾಧಿಗಳನ್ನು ಪತ್ತೆಹಚ್ಚುವಲ್ಲಿ ಭಾಗವಹಿಸಿದ್ದಾರೆ.

Discover more from Coastal Times Kannada
Subscribe to get the latest posts sent to your email.








Discussion about this post