ಪುತ್ತೂರು, ನ.24: ಕಳೆದ ಏಳು ದಿನಗಳಿಂದ ನಾಪತ್ತೆಯಾಗಿದ್ದ ಮೈಸೂರಿನಲ್ಲಿ ಫೋಟೊಗ್ರಾಫರ್ ಆಗಿರುವ ಮೂಲತಃ ಮಂಗಳೂರು ನಿವಾಸಿ ಜಗದೀಶ್ (58) ಅವರ ಮೃತದೇಹ ಬುಧವಾರ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿತ್ತಡಿ ಸಮೀಪದ ಮುಗುಳಿ ಎಂಬಲ್ಲಿನ ಸರಕಾರಿ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ.
ಅವರನ್ನು ಸಂಬಂಧಿಕರೇ ಕೊಲೆ ಮಾಡಿ ಹೂತು ಹಾಕಿದ್ದರು ಎಂದು ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಮಾವ ಬಾಲಕೃಷ್ಣ ರೈ, ಆತನ ಪುತ್ರ ಪ್ರಶಾಂತ್ ರೈ, ಪತ್ನಿ ಜಯಲಕ್ಷ್ಮೀ ಮತ್ತು ಪಕ್ಕದ ಮನೆಯ ನಿವಾಸಿ ಜೀವನ್ ಪ್ರಸಾದ್ ಬಂಧಿತ ಆರೋಪಿಗಳು.
ಜಗದೀಶ (52) ಕೊಲೆಯಾದವರು.
Discussion about this post