• About us
  • Contact us
  • Disclaimer
Monday, May 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ

Coastal Times by Coastal Times
December 25, 2025
in ಕರಾವಳಿ
ಕೆನರಾ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025 – ಹಳೇ ನೆನಪುಗಳಿಗೆ ಸಾಕ್ಷಿಯಾದ ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ
39
VIEWS
WhatsappTelegramShare on FacebookShare on Twitter

ಮಂಗಳೂರು: ಡಿ 24, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರು ಇದರ ಫ್ಯಾಮಿಲಿ ಡೇ ಹಾಗೂ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2025ಮಂಗಳವಾರದಂದು ಕೆನರಾ ಪ್ರೌಢಶಾಲೆ. ಮೈನ್ ಗ್ರೌಂಡ್ ಕೊಡಿಯಾಲ್ ಬೈಲ್ ಇಲ್ಲಿ ಅದ್ದೂರಿಯಾಗಿ ನೆರವೇರಿತು.

ಕಾರ್ಡಿಯೋಥೋರಾಸಿಕ್ ಸರ್ಜನ್ ಡಾ. ಗಣೇಶ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತ ಕೆನರಾ ಶಿಕ್ಷಣ ಸಂಸ್ಥೆಯೊಂದಿಗೆ ನನಗೆ ಮರೆಯಲಾಗದ ನಂಟು ಇದೆ.ಹಲವು ವರ್ಷಗಳ ಹಿಂದೆ ನನ್ನನ್ನು ಸನ್ಮಾನಿಸಿದ ಕ್ಷಣಗಳು ಮರೆಯಲಾಗದ ನೆನಪು. ನನ್ನನ್ನು ಬೆಳೆಸಿದ ಈ ಸಂಸ್ಥೆಯ ಋಣ ತೀರಿಸಲು ಸಾಧ್ಯವಿಲ್ಲ. ಕೆನರಾ ಆಡಳಿತ ಮಂಡಳಿ ಆಶಯದಂತೆ ಸಂಸ್ಥೆಯಲ್ಲಿ ಕಲಿತು ಹೋಗಿರುವ ಬಹು ವಿಧ ಪ್ರತಿಭೆಗಳನ್ನು ಮತ್ತೊಮ್ಮೆ ಈ ಸಂಸ್ಥೆಗೆ ಬರಮಾಡಿಕೊಳ್ಳುವ ಹಾಗೂ ಯುವಶಕ್ತಿಯನ್ನು ಪ್ರಬುದ್ಧ ಮಾನವ ಸಂಪನ್ಮೂಲವನ್ನಾಗಿ ರೂಪಿಸಲು ಈ ಸಮಾವೇಶ ಅತ್ಯುತ್ತಮ ವೇದಿಕೆಯಾಗಿದೆ. ಸೃಜನಶೀಲ ವಿದ್ಯಾರ್ಥಿಗಳನ್ನು ರೂಪಿಸಿ ಸಮಾಜಕ್ಕೆ ಒದಗಿಸುವ ಕೆಲಸವನ್ನು ನಿರ್ವಹಿಸುವ ಪ್ರತಿಭಾನ್ವಿತ ಶಿಕ್ಷಕ ಶಿಕ್ಷಕಿಯರನ್ನು ಹೊಂದಿದಂತಹ ಕೆನರಾ ಶಿಕ್ಷಣ ಸಂಸ್ಥೆ ಎಲ್ಲರ ಮನೆ ಮನಗಳಲ್ಲೂ ನೆಲೆಸಲು ಅದರಲ್ಲಿರುವ ಸತ್ವವೇ ಕಾರಣ. ಈ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪೂರೈಸಿ, ಉತ್ತಮ ವೈದ್ಯರು, ತಂತ್ರಜ್ಞರು, ವಿಜ್ಞಾನಿಗಳು, ಉದ್ಯಮಿಗಳು ರೂಪಗೊಂಡು ಸಂಸ್ಥೆಯ ಕೀರ್ತಿಯನ್ನು ಎತ್ತರಿಸಿದ್ದಾರೆ.ಬೇರೆ ಬೇರೆ ಊರುಗಳಲ್ಲಿ ವೃತ್ತಿ, ಶಿಕ್ಷಣ ಹಾಗೂ ಉದ್ಯಮಗಳಲ್ಲಿ ತೊಡಗಿಸಿಕೊಂಡ ಹಳೆ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಸಂಸ್ಥೆಯೊಂದಿಗೆ ತಮ್ಮ ಸಂಬಂಧಗಳನ್ನು ನವೀಕರಿಸಲು, ಹಳೆಯ ಗೆಳೆಯರನ್ನು, ವಿದ್ಯೆ ಕೊಟ್ಟ ಗುರುಸಮೂಹವನ್ನು ಭೇಟಿಯಾಗಲು, ಹಳೆಯ ನೆನಪುಗಳೊಂದಿಗೆ ಜೀವನವನ್ನು ಸಿಂಹಾವಲೋಕಿಸಲು ಈ ಕಾರ್ಯಕ್ರಮವು ಅತ್ಯುತ್ತಮ ಅವಕಾಶ ನೀಡಿದೆ ಎಂದು ಹೇಳಿದರು.

ಐಡಿಯಲ್ ಐಸ್ ಕ್ರೀಮ್ ಪ್ರೈವೇಟ್ ಲಿಮಿಟೆಡ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಮುಕುಂದ್ ಕಾಮತ್ ಮಾತನಾಡಿ ಕೆನರಾ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಾ ವಿದ್ಯಾರ್ಥಿಗಳ ಭವಿಷ್ಯತ್ತನ್ನು ಗಟ್ಟಿಗೊಳಿಸುವ ಬದ್ಧತೆಯುಳ್ಳ ಶಿಕ್ಷಣ ಸಂಸ್ಥೆ. ನನ್ನ ಕುಟುಂಬದ ತಲೆಮಾರುಗಳು ಈ ಶಿಕ್ಷಣ ಸಂಸ್ಥೆಯ ಋಣಿಗಳು. ಹಲವಾರು ಸಂವೇದನಶೀಲ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳನ್ನು ಭವಿಷ್ಯತ್ತಿನ ಸವಾಲುಗಳಿಗೆ ಸಿದ್ಧಗೊಳಿಸುವ ಹೊಣೆಗಾರಿಕೆಯನ್ನು ಈ ಶಿಕ್ಷಣ ಸಂಸ್ಥೆ ಹೊಂದಿದೆ. ಎಂದು ಹೇಳಿದರು.

ಕೆನರಾ ಆಡಳಿತ ಮಂಡಳಿಯ ಗೌರವಾನ್ವಿತ ಕಾರ್ಯದರ್ಶಿ ಶ್ರೀ ರಂಗನಾಥ್ ಭಟ್ ಮಾತನಾಡುತ್ತಾ ನಮ್ಮ ಸಂಸ್ಥೆಯಲ್ಲಿ ವಿದ್ಯೆಯನ್ನು ಕಲಿತು ಇಂದು ವಿಶ್ವದ ಮೂಲೆ ಮೂಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದವರಿಗೆ ಮತ್ತೊಮ್ಮೆ ಈ ಸಂಸ್ಥೆಯ ಜೊತೆಗೆ ಸಂಪರ್ಕಕ್ಕೆ ತರುವ ಕಾರ್ಯಕ್ರಮ ಇದಾಗಿದ್ದು. ಕಲಿಸಿದ ಗುರು ಹಿರಿಯರನ್ನು ಭೇಟಿಯಾಗಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ಇದೊಂದು ಸದಾವಕಾಶ. ಶಿಕ್ಷಕ ವೃತ್ತಿ ಎಂಬುದು ಕೇವಲ ವೃತ್ತಿಯಾಗಿರದೇ ಅದೊಂದು ಅದ್ಭುತ ತ್ಯಾಗ. ಅದರ ಫಲಶೃತಿಯೇ ಈ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು.

ಮಂಗಳೂರಿನ ಖ್ಯಾತ ಉದ್ಯಮಿ ಪಂಚಮಾಲ್ ಗೋಪಾಲಕೃಷ್ಣ ಶೆಣೈ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಅತಿಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಅರೆಹೊಳೆ ಪ್ರತಿಷ್ಠಾನ ವತಿಯಿಂದ ಮಂದಾರ್ತಿ ಮಾದೇವಿ ನೃತ್ಯ ರೂಪಕ ಪ್ರದರ್ಶನಗೊಂಡಿತು.

ಕೆನರಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀ ಸುರೇಶ್ ಕಾಮತ್,ಕಾರ್ಯದರ್ಶಿ ಶ್ರೀ ರಂಗನಾಥ ಭಟ್ ,ಖಜಾಂಚಿ CA ಶ್ರೀ ವಾಮನ್ ಕಾಮತ್, ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ವಿಕ್ರಂ ಪೈ, ಅಶ್ವಿನಿ ಕಾಮತ್ , ಪಿ ಆರ್ ಒ ಉಜ್ವಲ್ ಮಲ್ಯ,ಸಮ್ಮಿಲನದ ಉಸ್ತುವಾರಿ ಶ್ರೀ ಗೋಪಾಲಕೃಷ್ಣ ಶೆಟ್ಟಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಶ್ರೀ ಗೋಪಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು.ಪಿ.ಆರ್. ಒ ಶ್ರೀಮತಿ ಉಜ್ವಲ್ ಮಲ್ಯ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ ಅವಿರೋಧ ಆಯ್ಕೆ

Next Post

ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

Related Posts

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ
ಕರಾವಳಿ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
69
ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್
ಕರಾವಳಿ

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

May 21, 2026
64
Next Post
ಸಂಸದ ಬ್ರಿಜೇಶ್ ಚೌಟರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್‌ ಟು ಊರು' ಪರಿಕಲ್ಪನೆಗೆ ಬಿ.ವೈ. ವಿಜಯೇಂದ್ರ ಮೆಚ್ಚುಗೆ ; ಮಂಗಳೂರು ಕಂಬಳಕ್ಕೆ ಮೆರುಗು ತಂದ ಬಾಕ್ಸಿಂಗ್ ಚಾಂಪ್ಯನ್ ಮೇರಿ ಕೋಮ್‌

Discussion about this post

Recent News

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
33
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d