• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಏಳು ಸುರಂಗಗಳನ್ನು ಕೊರೆದ ‘ಒನ್ ಮ್ಯಾನ್ ಆರ್ಮಿ’ ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಪ್ರಶಸ್ತಿ

Coastal Times by Coastal Times
January 26, 2022
in ಕರಾವಳಿ
ಏಳು ಸುರಂಗಗಳನ್ನು ಕೊರೆದ ‘ಒನ್ ಮ್ಯಾನ್ ಆರ್ಮಿ’ ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಪ್ರಶಸ್ತಿ
43
VIEWS
WhatsappTelegramShare on FacebookShare on Twitter

ಮಂಗಳೂರು, ಜ.25: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವ ಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹೆಸರು ಮಹಾಲಿಂಗ ನಾಯ್ಕ (74). ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. ಇವರು ಜೀವಜಲ ಪಡೆಯುವುದಕ್ಕಾಗಿ ಹಾಕಿರುವ ಶ್ರಮ ಮಾತ್ರ ಎಲ್ಲರನ್ನು ನಿಬ್ಬೆರಗರನ್ನಾಗಿಸುತ್ತದೆ. ಏಕಾಂಗಿಯಾಗಿ ಇವರು ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ್ದಾರೆ.

ಕೃಷಿಗೆ ನೀರು ಹಾಯಿಸಲು ಪಂಪ್‌ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಇವರು ಯಶಸ್ವಿಯಾಗಿದ್ದಾರೆ. ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್‌ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಒನ್‌ ಮ್ಯಾನ್‌ ಆರ್ಮಿ.

ಕುಡಿಯುವ ನೀರಿಗಾಗಿ ಮೂರು ಕಿ. ಮೀ ದೂರದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಆಗ ಅವರಿಗೆ ಹೊಳೆದುದು ಸುರಂಗ ಕೊರೆಯುವುದು. ಅರ್ಧ ದಿನ ಕೂಲಿ ಕೆಲಸ, ಉಳಿದರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಭಗೀರಥ ಪ್ರಯತ್ನ. ಮಹಾಲಿಂಗ ನಾಯ್ಕ ಮೊದಲು 30 ಮೀಟರ್ ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ.

ಇದರಿಂದ ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್‌ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. 62 ಮೀಟರ್ ಉದ್ದದ ಆರನೇ ಸುರಂಗದ ಪ್ರಯತ್ನ ಫಲ ನೀಡಿತು. ಹೀಗೆ ಬರಡಾದ ಭೂಮಿಯಲ್ಲಿ ಜಲ ಕ್ರಾಂತಿ ಮಾಡಿದ ಮಹಾಲಿಂಗ ನಾಯ್ಕರಿಗೆ ಈಗ ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿ ಯಾದ ಪದ್ಮಶ್ರೀ ಪ್ರಶಸ್ತಿ ಲಭ್ಯವಾಗಿದೆ.

ರಾತ್ರಿ ಹೊತ್ತು ಸುರಂಗ ಕೊರೆಯುವುದು :
ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳುಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿ ಕಂಡು ಬಂದರೂ ಅವರು ತನ್ನ ಪ್ರಯತ್ನವನ್ನು ಬಿಡಲಿಲ್ಲ. ಅಲ್ಲೇ ಭವಿಷ್ಯ ರೂಪಿಸುವ ಉದ್ದೇಶದಿಂದ ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆಯೂ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದುದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದಾರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಪ್ರಯತ್ನ ಮಾಡಿದರು.

ಮಹಾಲಿಂಗ ನಾಯ್ಕ ಮೊದಲು 30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀ. ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಆದರೂ ಅವರ ಅಪಾಯಕಾರಿ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು ಎಂದು ಮಹಾಲಿಂಗ ನಾಯ್ಕ ಅಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉದ್ದಿಮೆ ಪರವಾನಿಗೆ, ನವೀಕರಣ, ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ : ಮೇಯರ್ ಪ್ರೇಮಾನಂದ ಶೆಟ್ಟಿ

Next Post

ಆಂಕರ್ ಪ್ರತಿಕಾ ಸೂದ್ ಮಾದಕ ಸೌಂದರ್ಯ : ಹಾಟ್ ಚಿತ್ರಗಳು

Related Posts

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
ಕರಾವಳಿ

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
0
ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!
ಕರಾವಳಿ

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಅಸ್ಥಿಪಂಜರ ಸಿಕ್ಕಿರುವ ಪ್ರಕರಣ; DNA ಪರೀಕ್ಷೆಯಲ್ಲಿ ಬಯಲಾಯ್ತು 3 ಅಸ್ಥಿಪಂಜರಗಳ ರಹಸ್ಯ!

July 30, 2026
67
Next Post
ಆಂಕರ್ ಪ್ರತಿಕಾ ಸೂದ್ ಮಾದಕ ಸೌಂದರ್ಯ : ಹಾಟ್ ಚಿತ್ರಗಳು

ಆಂಕರ್ ಪ್ರತಿಕಾ ಸೂದ್ ಮಾದಕ ಸೌಂದರ್ಯ : ಹಾಟ್ ಚಿತ್ರಗಳು

Discussion about this post

Recent News

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
71
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d