• About us
  • Contact us
  • Disclaimer
Wednesday, March 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್ ಬಂಧನ

Coastal Times by Coastal Times
February 26, 2024
in ಕ್ರೈಮ್ ನ್ಯೂಸ್
ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್ ಬಂಧನ
56
VIEWS
WhatsappTelegramShare on FacebookShare on Twitter

ನವದೆಹಲಿ, ಫೆ 26: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದ, ಹಲವು ಬಾರಿ ಸಭೆಗಳನ್ನು ನಡೆಸಿ ಕುಕೃತ್ಯಗಳಿಗೆ ಸಂಚು ಹೂಡಿದ್ದ, ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್​ನನ್ನು ದೆಹಲಿ ಪೊಲೀಸ್ ವಿಶೇಷ ದಳ ಭಾನುವಾರ ಬಂಧಿಸಿದೆ. ಆರೋಪಿಯು ಮಹಾರಾಷ್ಟ್ರದ ಉರ್ದು ಶಾಲೆಯೊಂದರಲ್ಲಿ ಮಾರುವೇಷದಲ್ಲಿ ಪಾಠ ಮಾಡುತ್ತಿದ್ದ. 2001ರಲ್ಲಿ ನ್ಯೂ ಫ್ರೆಂಡ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ಮತ್ತು ದೇಶದ್ರೋಹ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ.

ನ್ಯಾಯಾಲಯವಯ ಹನೀಫ್ ಶೇಖ್​ನನ್ನು ತಲೆಮರೆಸಿಕೊಂಡಿರುವ ಆರೋಪಿ ಘೋಷಿಸಿತ್ತು. ಹನೀಫ್ ಸಿಮಿ ಸಂಘಟನೆಯ ನಿಯತಕಾಲಿಕೆ ಇಸ್ಲಾಮಿಕ್ ಮೂವ್​ಮೆಂಟ್ (ಉರ್ದು ಆವೃತ್ತಿ) ಸಂಪಾದಕನಾಗಿದ್ದ. ಆರೋಪಿಯು ಕಳೆದ 25 ವರ್ಷಗಳ ಅವಧಿಯಲ್ಲಿ ಯುವಕರಿಗೆ ಮೂಲಭೂತವಾದದ ಬಗ್ಗೆ ಪ್ರಚೋದನೆ ನೀಡಿದ್ದ. ಮಹಾರಾಷ್ಟ್ರದಲ್ಲಿ ಹಲವು ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ. ಅನೇಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಆತ ಶಾಮೀಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ದಳದ ಉಪ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಪ್ರಕಾರ, ಇನ್ಸ್‌ಪೆಕ್ಟರ್ ಪವನ್ ಕುಮಾರ್ ಮತ್ತು ಎಸ್‌ಐ ಸುಮಿತ್ ತಂಡವು ಎಸಿಪಿ ವೇದಪ್ರಕಾಶ್ ಅವರ ಮೇಲ್ವಿಚಾರಣೆಯಲ್ಲಿ ಹನೀಫ್ ಶೇಖ್ ಸೇರಿದಂತೆ ಪರಾರಿಯಾಗಿರುವ ಸಿಮಿ ಸದಸ್ಯರನ್ನು ಬೆನ್ನುಹತ್ತಿದೆ. ಇನ್ಸ್‌ಪೆಕ್ಟರ್ ಪವನ್ ಅವರ ತಂಡ, ಇನ್ಸ್‌ಪೆಕ್ಟರ್ ಕರಂವೀರ್ ಅವರೊಂದಿಗೆ ಹಲವು ರಾಜ್ಯಗಳಲ್ಲಿ ತಲೆಮರೆಸಿಕೊಂಡಿರುವ ಸಿಮಿ ಕಾರ್ಯಕರ್ತರು, ಸಿಮಿ ಬೆಂಬಲಿಗರು ಮತ್ತು ಸ್ಲೀಪರ್ ಸೆಲ್​​ಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ತಂಡವು ದೇಶದ ವಿವಿಧ ಭಾಗಗಳಿಗೆ, ವಿಶೇಷವಾಗಿ ದೆಹಲಿಯಲ್ಲಿ ಹಾಗೂ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಕರ್ನಾಟಕ, ಮಹಾರಾಷ್ಟ್ರ ಮತ್ತು ತಮಿಳುನಾಡುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ತನಿಖೆಯ ಸಮಯದಲ್ಲಿ, ಇನ್ಸ್‌ಪೆಕ್ಟರ್ ಪವನ್‌ಗೆ ಹನೀಫ್ ಶೇಖ್ ಬಗ್ಗೆ ಮಾಹಿತಿ ಸಿಕ್ಕಿತು. ಹನೀಫ್ ತನ್ನ ಗುರುತನ್ನು ಮೊಹಮ್ಮದ್ ಎಂದು ಬದಲಾಯಿಸಿದ್ದ. ಹನೀಫ್ ಈಗ ಮಹಾರಾಷ್ಟ್ರದ ಭೂಸಾವಲ್‌ನಲ್ಲಿರುವ ಉರ್ದು ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾನೆ ಎಂಬ ವಿವರ ದೊರೆಯಿತು. ಫೆಬ್ರವರಿ 22 ರಂದು ಮೊಹಮ್ಮದ್ದೀನ್ ನಗರದಿಂದ ಖಡ್ಕ ರಸ್ತೆ ಕಡೆಗೆ ಬರುತ್ತಿದ್ದ ಆರೋಪಿಯನ್ನು ಮಹಾರಾಷ್ಟ್ರದ ಭೂಸಾವಲ್ ಖಡ್ಕ ರಸ್ತೆಯ ಆಶಾ ಟವರ್ ಬಳಿ ಪೊಲೀಸ್ ತಂಡವು ಮುತ್ತಿಗೆ ಹಾಕಿತು. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಸಿಮಿ ಸಂಘಟನೆಯ ಸಭೆಗಳಲ್ಲಿ ಭಾಗವಹಿಸುವುದು ಮತ್ತು ಆಯೋಜಿಸುವುದು ಮುಂತಾದ ಎಲ್ಲಾ ಘಟನೆಗಳಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದ.

ಏನಿದು ಸಿಮಿ? : ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಅನ್ನು 1976 ರಲ್ಲಿ ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ಥಾಪನೆಯಾಗಿತ್ತು. ಇಸ್ಲಾಂ ಸಾಮ್ರಾಜ್ಯವನ್ನು ಸ್ಥಾಪಿಸುವುದು ಈ ಸಂಸ್ಥೆಯ ಗುರಿ ಎಂದು ಹೇಳಲಾಗಿದೆ. ಸಿಮಿ ಕಾರ್ಯಕರ್ತರು ವಿವಿಧ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರಿಂದ ಸಿಮಿಯನ್ನು ಸರ್ಕಾರ ನಿಷೇಧಿಸಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಶ್ರೀಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿ ಹಿಡಿದು ಸಮುದ್ರ ತಳಕ್ಕಿಳಿದ ಪ್ರಧಾನಿ ಮೋದಿ

Next Post

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

Related Posts

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ
ಕ್ರೈಮ್ ನ್ಯೂಸ್

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
12
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕ್ರೈಮ್ ನ್ಯೂಸ್

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
96
Next Post
ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಪುರುಪೋತ್ತಮನ‌ ಪ್ರಸಂಗ ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

Discussion about this post

Recent News

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
12
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
96
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

March 11, 2026
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖರಿಸಿಟ್ಟ 4,175 ಲೀಟರ್ ಡೀಸೆಲ್ ಜಪ್ತಿ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d