• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶ್ರೀಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿ ಹಿಡಿದು ಸಮುದ್ರ ತಳಕ್ಕಿಳಿದ ಪ್ರಧಾನಿ ಮೋದಿ

Coastal Times by Coastal Times
February 26, 2024
in ರಾಷ್ಟ್ರೀಯ ಸುದ್ದಿ
ಶ್ರೀಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿ ಹಿಡಿದು ಸಮುದ್ರ ತಳಕ್ಕಿಳಿದ ಪ್ರಧಾನಿ ಮೋದಿ
55
VIEWS
WhatsappTelegramShare on FacebookShare on Twitter

ದ್ವಾರಕಾ ಫೆ 26: ಈ ಹಿಂದೆ ಲಕ್ಷದ್ವೀಪದಲ್ಲಿ ಸಮುದ್ರಕ್ಕಿಳಿದು ‘ಸ್ನಾರ್ಕಲಿಂಗ್’ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತಿನ ದ್ವಾರಕಾದಲ್ಲಿ ‘ಸ್ಕೂಬಾ ಡೈವಿಂಗ್’ ಮಾಡಿದರು.ಸಮುದ್ರದಲ್ಲಿ ಮುಳುಗಿರುವ ಶ್ರೀಕೃಷ್ಣನ ನಗರ ದ್ವಾರಕೆಯ ಅವಶೇಷಗಳನ್ನು ವೀಕ್ಷಿಸಿದ ಮೋದಿ ಅವರು, ಸಮುದ್ರದ ಆಶದಲ್ಲೇ ಕೃಷ್ಣನ ಪಾರ್ಧನೆ ಮಾಡಿದರು. ಈ ಕುರಿತು ಮಾಹಿತಿಯನ್ನು ಜಾಲತಾಣದ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮೋದಿ ‘ಸಮುದ್ರದೊಳಗೆ ಮುಳುಗಿರುವ ದ್ವಾರಾ ನಗರಿಯಲ್ಲಿ ಪ್ರಾರ್ಥನೆ ಸಲ್ಲಿಸುವುದು ಒಂದು ದೈವಿಕ ಅನುಭೂತಿ. ದ್ವಾರಕೆಯ ದರ್ಶನದೊಂದಿಗೆ ಆಧ್ಯಾತ್ಮಿಕ ಭವ್ಯತೆ ಮತ್ತು ಕಾಲತೀತ ಭಕ್ತಿಯ ಅನುಭವವನ್ನು ಪಡೆದುಕೊಂಡೆ. ಕೇಷ್ಣ ಭಗವಾನ್‌ ನಮ್ಮೆಲ್ಲರನ್ನೂ ಆಶೀರ್ವದಿಸಲಿ’ ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಸ್ಕೂಬಾ ಡೈವಿಂಗ್‌ಗೆ ಅಗತ್ಯವಾದ ವಸ್ತ್ರ ಧರಿಸಿ ತಜ್ಞರೊಂದಿಗೆ ಸ್ಕೂಬಾ ಡೈವಿಂಗ್ ನಡೆಸಿದ ಪ್ರಧಾನಿ ಮೋದಿ, ಇದೇ ವೇಳೆ ನವಿಲುಗರಿಯನ್ನು ಸಮುದ್ರದಾಳದಲ್ಲಿರುವ ದ್ವಾರಕೆ ಕೃಷ್ನನಿಗೆ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು. ಈ ಕುರಿತಾದ ಫೋಟೋ ಮತ್ತು ವಿಡಿಯೋಗಳನ್ನು ಮೋದಿ ಹಂಚಿಕೊಂಡಿದ್ದಾರೆ.

ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಪ್ರಧಾನಿ ಮೋದಿ ನಗರದ ಭವ್ಯತೆ ಹಾಗೂ ಸಮೃದ್ಧಿಯನ್ನು ನೆನಪಿಸಿಕೊಂಡು ಗೌರವ ಸಲ್ಲಿಸಿದರು.  ಈ ಸಂದರ್ಭದಲ್ಲಿ, ಅವರು ದ್ವಾರಕಾದಲ್ಲಿ ಸುದರ್ಶನ ಸೇತುವನ್ನು ಉದ್ಘಾಟಿಸಿದರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ. ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸುವುದು ಬಹಳ ದೈವಿಕ ಅನುಭವವಾಗಿದೆ. ಆಧ್ಯಾತ್ಮಿಕ ವೈಭವ ಮತ್ತು ಶಾಶ್ವತ ಭಕ್ತಿಯ ಪ್ರಾಚೀನ ಯುಗಕ್ಕೆ ನಾನು ಸಂಪರ್ಕ ಹೊಂದಿದ್ದೇನೆ. ಶ್ರೀ ಕೃಷ್ಣನು ನಮ್ಮೆಲ್ಲರನ್ನು ಆಶೀರ್ವದಿಸಲಿ ಎಂದು ಬೇಡಿಕೊಂಡು ಅದೇ ಸಮಯದಲ್ಲಿ ಅವರು ಸಮುದ್ರದಲ್ಲಿ ನವಿಲು ಗರಿಗಳನ್ನು ಅರ್ಪಿಸಿದರು.

ಹಿಂದೂ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾದ ಪೌರಾಣಿಕ ನಗರವಾದ ದ್ವಾರಕಾವನ್ನು ಶ್ರೀಕೃಷ್ಣನು ಆಳುತ್ತಿದ್ದನೆಂದು ನಂಬಲಾಗಿದೆ. ಹಿಂದೂ ನಂಬಿಕೆಯ ಪ್ರಕಾರ, ಕೃಷ್ಣನು ಭೂಮಿಯಿಂದ ನಿರ್ಗಮಿಸಿದ ನಂತರ ನಗರವು ಅಂತಿಮವಾಗಿ ಸಮುದ್ರದಾಳಕ್ಕೆ ಹೋಗಿ ಬಳಿಕ ಕಾಣದಾಯಿತು. ನಾನು ಸಮುದ್ರದ ಆಳಕ್ಕೆ ಹೋಗಿ ಪ್ರಾಚೀನ ದ್ವಾರಕಾ ನಗರದ ‘ದರ್ಶನ’ ಮಾಡಿದೆ. ಪುರಾತತ್ತ್ವ ಶಾಸ್ತ್ರಜ್ಞರು ನೀರಿನ ಅಡಿಯಲ್ಲಿ ಅಡಗಿರುವ ದ್ವಾರಕಾ ನಗರದ ಬಗ್ಗೆ ಸಾಕಷ್ಟು ಬರೆದಿದ್ದಾರೆ. ನಮ್ಮ ಧರ್ಮಗ್ರಂಥಗಳಲ್ಲಿಯೂ, ದ್ವಾರಕಾದ ಬಗ್ಗೆ ಹೇಳಲಾಗುತ್ತದೆ, ಇದು ಸುಂದರವಾದ ದ್ವಾರಗಳು ಮತ್ತು ಎತ್ತರದ ಕಟ್ಟಡಗಳನ್ನು ಹೊಂದಿರುವ ನಗರ ಎಂದು ಹೇಳಲಾಗುತ್ತದೆ ಎಂದರು.

6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು ಪ್ರಧಾನಿ ಹೇಳಿದರು. ಈ ಸೇತುವೆಯು ಓಖಾವನ್ನು ಬೆಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುತ್ತದೆ. ಈ ಸೇತುವೆಯು ದ್ವಾರಕಾಧೀಶನ ದರ್ಶನವನ್ನು ಸುಲಭಗೊಳಿಸುತ್ತದೆ ಮತ್ತು ಈ ಸ್ಥಳದ ದೈವಿಕತೆಯನ್ನು ಹೆಚ್ಚಿಸುತ್ತದೆ. ಈ ವೇಳೆ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಾಲದಲ್ಲಿ ಆಗುತ್ತಿದ್ದ ಹಗರಣಗಳನ್ನು ತಡೆದಿದ್ದೇವೆ ಎಂದರು.

ಸ್ಕೂಬಾ ಡೈವಿಂಗ್ : ಅರಬ್ಬೀ ಸಮುದ್ರದಲ್ಲಿ ಬರುವ ಬೇಟ್ ದ್ವಾರಕಾ ದ್ವೀಪದ ದ್ವಾರಕಾ ಕರಾವಳಿಯಲ್ಲಿ ಈ ಸ್ಕೂಬಾ ಡೈವಿಂಗ್ ನಡೆಸಲು ಪ್ರವಾಸಿಗರಿಗೆ ಅವಕಾಶವಿದೆ. ಇದು ಮಹಾ ಭಾರತದ ಕಾಲದಲ್ಲಿ ಕೃಷ್ಣನ ರಾಜಧಾನಿ ಆಗಿದ್ದ ದ್ವಾರಕಾ ನಗರಿ ಎಂಬುದನ್ನು ಪ್ರಾಚ್ಯವಸ್ತು ಇಲಾಖೆಯ ತಜ್ಞರು ದಶಕಗಳ ಹಿಂದೆ ಪತ್ತೆ ಮಾಡಿದ್ದರು. ಸಮುದ್ರದಾಳದಲ್ಲಿ ಕಂಡುಬಂರುವ ಅನೇಕ ಅವಶೇಷಗಳು ದ್ವಾರಕೆಯ ನೆನಪನ್ನು ಭಕ್ತರ ಮುಂದಿಡುತ್ತವೆ. ಇಲ್ಲಿ 15-20 ನಿಮಿಷದ ಸ್ಕೂಬಾ ಡೈವ್‌ಗೆ 2000-3000 ರೂಪಾಯಿವರೆಗೂ ಶುಲ್ಕವಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

“ಎಲ್ಲಾ ಮಕ್ಕಳು ಒಂದೇ ಎನ್ನುತ್ತೇವೆ. ಆದರೆ ಶಿಕ್ಷಣದಲ್ಲಿ ತಾರತಮ್ಯ ಯಾಕೆ? : ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್

Next Post

ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್ ಬಂಧನ

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
12
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
98
Next Post
ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್ ಬಂಧನ

ನಿಷೇಧಿತ ಸಿಮಿ ಸಂಘಟನೆಯ ಉಗ್ರ ಹನೀಫ್ ಶೇಖ್ ಬಂಧನ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
34
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d