• About us
  • Contact us
  • Disclaimer
Monday, September 15, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಬಲ್ನಾಡಿನ ಮನೆ ಕಳವು ಪ್ರಕರಣ, ಕುಖ್ಯಾತ ಅಂತಾರಾಜ್ಯ ಕಳ್ಳರಿಬ್ಬರ ಬಂಧನ 6.5 ಲಕ್ಷ ರೂ. ಮೌಲ್ಯದ ಸೊತ್ತು ವಶ

Coastal Times by Coastal Times
March 26, 2022
in ಕ್ರೈಮ್ ನ್ಯೂಸ್
ಪುತ್ತೂರು: ಬಲ್ನಾಡಿನ ಮನೆ ಕಳವು ಪ್ರಕರಣ, ಕುಖ್ಯಾತ ಅಂತಾರಾಜ್ಯ ಕಳ್ಳರಿಬ್ಬರ ಬಂಧನ 6.5 ಲಕ್ಷ ರೂ. ಮೌಲ್ಯದ ಸೊತ್ತು ವಶ
65
VIEWS
WhatsappTelegramShare on FacebookShare on Twitter

ಪುತ್ತೂರು: ತಾಲ್ಲೂಕಿನ ಬಲ್ನಾಡು ಗ್ರಾಮದ ಉಜಿರುಪಾದೆ ಸಮೀಪದ ಬಬ್ಬಲಿ ನಿವಾಸಿ, ಬೆಂಗಳೂರಿನಲ್ಲಿ ಲೆಕ್ಕ ಪರಿಶೋಧಕರಾಗಿರುವ ಶಿವಪ್ರಸಾದ್ ಭಟ್ ಅವರ ಮನೆ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ, ಕುಖ್ಯಾತ ಅಂತರರಾಜ್ಯ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.

ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ ಯಾನೆ ತಾರಿಗುಡ್ಡೆ ಅಶ್ರಫ್ ಮತ್ತು  ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಸಮೀಪದ ಗುಂಪಕಲ್ಲು ಸೈಯದ್ ಮಲೆಯಲ್ಲಿ ವಾಸ್ತವ್ಯವಿರುವ ಕೆ.ಮೊಹಮ್ಮದ್ ಸಲಾಂ ಬಂಧಿತ ಆರೋಪಿಗಳು.

ಶಿವಪ್ರಸಾದ್ ಭಟ್ ಫೆ.22ರಂದು ಚಿನ್ನಾಭರಣಗಳನ್ನು ಮನೆಯ ಕೋಣೆಯೊಂದರಲ್ಲಿರುವ ಕಾಪಾಟಿನೊಳಗಿನ ಲಾಕರ್‌ನಲ್ಲಿ ಇರಿಸಿ, ಮನೆಗೆ ಬೀಗ ಹಾಕಿ ತನ್ನ ತಾಯಿಯೊಂದಿಗೆ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಮನೆಯ ಬೀಗವನ್ನು ಮುರಿದು ಒಳನುಗ್ಗಿ, ಲಾಕರ್ ಬೀಗ ಮುರಿದು ಅದರಲ್ಲಿದ್ದ ಸುಮಾರು 160 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು.

ಶಿವಪ್ರಸಾದ್ ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಫೆ.26ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ಎಸ್ಪಿ ಋಷೀಕೇಶ್ ಸೋನಾವಣೆ ಮತ್ತು ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ ಅವರ ಮಾರ್ಗದರ್ಶನದಲ್ಲಿ ಈ ಪ್ರಕರಣದ ಪತ್ತೆಗಾಗಿ ಪುತ್ತೂರಿನ ಡಿವೈಎಸ್ಪಿ ಡಾ.ಗಾನ ಪಿ. ಕುಮಾರ್ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ಉಮೇಶ್ ಉಪ್ಪಳಿಗೆ, ಸಂಪ್ಯ ಠಾಣಾ ಎಸ್ಐಗಳಾದ ಉದಯರವಿ ಎಂ.ವೈ. ಮತ್ತು ಅಮೀನ್ ಸಾಬ್ ಅತ್ತಾರ್ ಅವರನ್ನು ಒಳಗೊಂಡು ರಚಿಸಲಾಗಿದ್ದ ವಿಶೇಷ ತಂಡವು ಆರೋಪಿಗಳನ್ನು ಗುರುವಾರ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಆರೋಪಿಗಳು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಅಜ್ಜನಡ್ಕ ಎಂಬಲ್ಲಿನ ಮಹಮ್ಮದ್ ಅಲಿ ಅವರ ಮನೆ ಕಳ್ಳತನ, ಬಲ್ನಾಡು ಗ್ರಾಮದ ವಿಷ್ಣು ಮೂರ್ತಿ ದೈವಸ್ಥಾನದಲ್ಲಿ ದೈವಗಳ ಬೆಳ್ಳಿಯ ಆಯುಧ, ಆಭರಣಗಳ ಕಳ್ಳತನ, ಇರ್ದೆ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಳವು, ಮಾಡ್ನೂರು ಗ್ರಾಮದ ಕಾವು ಸಿರಿ ಭೂಮಿ ಕೃಷಿ ಉತ್ಪನ್ನ ಅಂಗಡಿಯಿಂದ ಕಳ್ಳತನ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳವು ಹಾಗೂ ಕಾಸರಗೋಡಿನ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆರ್ಕಳ ವ್ಯಾಪ್ತಿಯಲ್ಲಿ ಎರಡು ಮನೆ ಕಳವು ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳಿಂದ ₹ 5 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು, ಲ್ಯಾಪ್ ಟಾಪ್, ಸಿಸಿಟಿವಿ ಕ್ಯಾಮೆರಾ, ಡಿವಿಆರ್ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಒಟ್ಟು ಮೌಲ್ಯ ₹ 6.5 ಲಕ್ಷ ಎಂದು ಪೊಲೀಸರು ಅಂದಾಜಿಸಿದ್ದಾರೆ.

ವಿಶೇಷ ಪೊಲೀಸ್ ತಂಡದಲ್ಲಿ ಎಎಸ್ಐ ಮುರುಗೇಶ್, ಶಿವರಾಮ ಗೌಡ, ಧರ್ಣಪ್ಪ ಗೌಡ, ವರ್ಗಿಸ್, ಕೃಷ್ಣಪ್ಪ ಗೌಡ, ದೇವರಾಜ್, ಧರ್ಮಪಾಲ್, ಅದ್ರಾಮ್, ಪ್ರವೀಣ್ ರೈ ಪಾಲ್ತಾಡಿ, ಜಗದೀಶ್ ಅತ್ತಾಜೆ, ಹರ್ಷಿತ್, ಗಿರೀಶ್, ಗುಡದಪ್ಪ ತೋಟದ್, ವಿನೋದ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿ ಗಾಯತ್ರಿ ಮತ್ತು ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್ ಮತ್ತು ದಿವಾಕರ ಅವರು ಪಾಲ್ಗೊಂಡಿದ್ದರು. ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಎಸ್ಪಿ ಅವರು ಬಹುಮಾನ ಘೋಷಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಸ್ಸಿನಲ್ಲಿ ಮದ್ಯಪಾನ ಮಾಡಿದ ಹೈಸ್ಕೂಲ್ ವಿದ್ಯಾರ್ಥಿನಿಯರು : ವಿಡಿಯೋ ವೈರಲ್

Next Post

ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ , 2.0 ಸಂಪುಟದಲ್ಲಿ ಹಳೆಯ 24 ಸಚಿವರಿಗೆ ಖೋಕ್

Related Posts

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

September 13, 2025
91
ಉಳ್ಳಾಲ: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಮಾಡಿದ್ದ ಮಹಿಳೆ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಮಾಡಿದ್ದ ಮಹಿಳೆ ಬಂಧನ

September 13, 2025
4.4k
Next Post
ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ , 2.0 ಸಂಪುಟದಲ್ಲಿ ಹಳೆಯ 24 ಸಚಿವರಿಗೆ ಖೋಕ್

ಉತ್ತರ ಪ್ರದೇಶ: ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ , 2.0 ಸಂಪುಟದಲ್ಲಿ ಹಳೆಯ 24 ಸಚಿವರಿಗೆ ಖೋಕ್

Discussion about this post

Recent News

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
25
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d