• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಲೋಕಸಭಾ ಚುನಾವಣೆ ದ.ಕ. ಜಿಲ್ಲೆಯಿಂದ ಬಿಎಸ್‌ಪಿಯಿಂದ ಕಾಂತಪ್ಪ ಅಲಂಗಾರ್ ಅಭ್ಯರ್ಥಿ

Coastal Times by Coastal Times
March 26, 2024
in ರಾಜಕೀಯ
ಲೋಕಸಭಾ ಚುನಾವಣೆ ದ.ಕ. ಜಿಲ್ಲೆಯಿಂದ ಬಿಎಸ್‌ಪಿಯಿಂದ ಕಾಂತಪ್ಪ ಅಲಂಗಾರ್ ಅಭ್ಯರ್ಥಿ
329
VIEWS
WhatsappTelegramShare on FacebookShare on Twitter

ಮಂಗಳೂರು, ಮಾ. 26: ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಿಂದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದಿಂದ ಕಾಂತಪ್ಪ ಅಲಂಗಾರ್ ಅವರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಗೋಪಾಲ ಮುತ್ತೂರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಈ ವಿಷಯ ತಿಳಿಸಿದ ಅವರು, ಎನ್‌ಎಂಪಿಟಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿರುವ ಕಾಂತಪ್ಪ ಅಲಂಗಾರ್ 2020ರಲ್ಲಿ ನಿವೃತ್ತರಾಗಿದ್ದು, ಜಿಲ್ಲೆಯಲ್ಲಿ ಅಂಬೇಡ್ಕರ್‌ವಾದಿ ಚಳವಳಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು. ಪಕ್ಷವು ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಬಿಜೆಪಿ ಹಾಗೂ ಇತರ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಚುನಾವಣಾ ಬಾಂಡಿನ ಹೆಸರಿನಲ್ಲಿ ಉದ್ಯಮಿಗಳಿಂದ ಹಣ ಪಡೆದು ಅವರ ಪರವಾಗಿದ್ದಾರೆ. ಆದರೆ ಬಿಎಸ್‌ಪಿ ಯಾವುದೇ ಉದ್ಯಮಿಗಳಿಂದ ಹಣ ಪಡೆದಿಲ್ಲ ಎಂದರು.

ಈ ಹಿನ್ನೆಲೆಯಲ್ಲಿ ಎಲ್ಲಾ ಜಾತಿಧರ್ಮಗಳ ಒಳಗೊಳ್ಳುವಿಕೆಯ ‘ತುಳುನಾಡನ್ನು” ನಿರ್ಮಿಸುವಲ್ಲಿ ಒಂದು ಒತ್ತನ್ನು / ಬೆಂಬಲವನ್ನು ನೀಡುವರೇ ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಸಾಮಾಜಿಕ ಪರಿವರ್ತನೆ ಹಾಗೂ ಆರ್ಥಿಕ ಸಮಾನತೆಗಾಗಿ ಸಂವಿಧಾನದ ಆಶಯದಂತೆ ಶ್ರಮಿಸುವುದು. ಈ ದ್ಯೇಯೋದ್ದೇಶಗಳು ಹಾಗೂ ಸಂವಿಧಾನವನ್ನು ಜಾರಿಗೊಳಿಸುವುದು ಬಿ.ಎಸ್.ಪಿ.ಯ ಗುರಿ ಹಾಗೂ ಪ್ರನಾಳಿಕೆ ಆಗಿದೆ ಇದುವರೆಗೆ ದೇಶ, ರಾಜ್ಯವನ್ನು ಆಳಿಕೊಂಡು ಬಂದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ದುರಾಡಳಿತ ಹಾಗೂ ಜನವಿರೋಧಿ ನೀತಿಗಳಿಂದ ಜನ ಬೇಸತ್ತು ಹೋಗಿದ್ದಾರೆ.

ಸಂವಿಧಾನದ ಮೂಲಕ ಸಂಸದರಾಗಿ ಆಯ್ಕೆಯಾದವರೇ ಸಂವಿಧಾನ ಬದಲಾಯಿಸುವ ಮಾತನಾಡುತ್ತಿರುವುದು ದೇಶ ದ್ರೋಹವಾಗಿದ್ದು, ಈ ಬಗ್ಗೆ ರಾಜ್ಯ ಸರಕಾರವೂ ಯಾವುದೇ ದಿಟ್ಟ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ. ಇದಕ್ಕಿಂತಲೂ ಅಪಾಯಕಾರಿ ಸ್ಥಿತಿ ಎಂದರೆ, ಬಿಜೆಪಿ ಹಾಗೂ ಅದರ ಸರಕಾರವನ್ನು ವಿರೋಧಿಸುವ ಯಾರೇ ಆಗಲಿ ಅವರ ಮೇಲೆ ಈಡಿ, ಐಟಿ ಹಾಗೂ ಸಿಬಿಐ ಇಲಾಖೆಗಳಿಂದ ದಾಳಿ ನಡೆಸಿ ರಾಜಕೀಯವಾಗಿ ಬೆದರಿಸುವ ಹಾಗೂ ಒತ್ತಡ ಹೇರುವ ಕಾರ್ಯಗಳು ನಡೆಯುತ್ತಿದೆ. ಬಿಜೆಪಿಯ ಈ ನಡವಳಿಕೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂತಪ್ಪ ಅಲಂಗಾರ್‌ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅದ್ದರಿದ ನಿಮ್ಮ ಅಮೂಲ್ಯ ಮತವನ್ನು ಬಿಎಸ್‌ಪಿ.ಯ ಆನೆ ಚಿಹ್ನೆಗೆ ನೀಡಿ ಬೆಂಬಲಿಸಿ ಆಶೀರ್ವದಿಸಬೇಕೆಂದು ತುಳು ನಾಡಿನ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲೆ ನಂಬಿಕೆ ಇರುವ ನಾಗರಿಕ ಮತದಾರರಲ್ಲಿ ಈ ಮೂಲಕ ಮನವಿ ಮಾಡುತ್ತಿದ್ದೇವೆ.

ಪತ್ರಿಕಾಗೋಷ್ಠಿಯಲ್ಲಿ  ಬಿಎಸ್‌ಪಿಯ ಮುಖಂಡರಾದ ನಾರಾಯಣ ಬೋಧ್, ದೇವಪ್ಪ ಬೋಧ್, ಶಿವಪ್ಪ ಗಾರ್ಡಾಡಿ, ಕಿರಣ್ ಎಡಪದವು, ಪಿ.ಎಸ್. ಶ್ರೀನಿವಾಸ್, ಶಶಿಕಲಾ, ಕಿರಣ್, ಶಿವರಾಮ್ ಪೇಜಾವರ ಉಪಸ್ಥಿತರಿದ್ದರು.

 

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ: ‘ಚುನಾವಣಾ ಯುದ್ಧ’ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

Next Post

ಲೋಕಸಭಾ ಚುನಾವಣೆಗೆ ದ.ಕ.ಜಿಲ್ಲೆಯಲ್ಲಿ ತಾ. 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ: ಮುಲ್ಲೈ ಮುಗಿಲನ್

Related Posts

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
38
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು
ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

December 20, 2024
31
Next Post
ಲೋಕಸಭಾ ಚುನಾವಣೆಗೆ ದ.ಕ.ಜಿಲ್ಲೆಯಲ್ಲಿ ತಾ. 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ: ಮುಲ್ಲೈ ಮುಗಿಲನ್

ಲೋಕಸಭಾ ಚುನಾವಣೆಗೆ ದ.ಕ.ಜಿಲ್ಲೆಯಲ್ಲಿ ತಾ. 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ: ಮುಲ್ಲೈ ಮುಗಿಲನ್

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
41
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d