ಉಳ್ಳಾಲ: ಆವರಣ ಗೋಡೆ (ಕಂಪೌಂಡ್) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿರುವ ಬಗ್ಗೆ ಬುಧವಾರ ವರದಿಯಾಗಿದೆ.

ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೂವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಬಾಲಕಿಯೊಬ್ಬಳ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ. ದೊಡ್ಡ ಮಗಳು ರಶೀನಾ ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post