• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಸರಕಾರಿ ಆಸ್ಪತ್ರೆಯ ವೈದ್ಯನ ʼದುಷ್ಟ‌ʼ ಕೃತ್ಯ – 9 ಮಂದಿ ಸಹೋದ್ಯೋಗಿ ಯುವತಿಯರ ಜತೆ ರೋಮಾನ್ಸ್ ! ವಿಡಿಯೋ ವೈರಲ್

Coastal Times by Coastal Times
November 26, 2021
in ಕರಾವಳಿ
ಮಂಗಳೂರು : ಸರಕಾರಿ ಆಸ್ಪತ್ರೆಯ ವೈದ್ಯನ ʼದುಷ್ಟ‌ʼ ಕೃತ್ಯ – 9 ಮಂದಿ ಸಹೋದ್ಯೋಗಿ ಯುವತಿಯರ ಜತೆ ರೋಮಾನ್ಸ್ ! ವಿಡಿಯೋ ವೈರಲ್
104
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರಿನ ಆಯುಷ್ಮಾನ್ ನೋಡಲ್ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ. ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಆಫೀಸರ್, ಕಚೇರಿ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ವರದಿ ಆಗಿದೆ. ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ‌.

ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಅಸಭ್ಯ ವರ್ತನೆ ಮಾಡಿದ್ದಾರೆ. ಹಾಡಹಗಲೇ ಕಚೇರಿಯಲ್ಲಿ ಚೆಲ್ಲಾಟವಾಡುತ್ತಿರುವ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ.

ಮಹಿಳಾ ಸಿಬ್ಬಂದಿಗಳ ಜತೆಗೆ ಚೆಲ್ಲಾಟವಾಡುತ್ತಿದ್ದ ಡಾ.ರತ್ನಾಕರ್ ಸಹಕರಿಸದ ಮಹಿಳಾ ಸಿಬ್ಬಂದಿಗಳಿಗೆ ಟಾರ್ಚರ್ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ನಗರದ ಸರಕಾರಿ ಆಸ್ಪತ್ರೆಯ ಕುಷ್ಠ ರೋಗ ವಿಭಾಗದ ವೈದ್ಯ, ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ಡಾ. ರತ್ನಾಕರ್ʼನ ವೈವಿಧ್ಯಮಯ ಕಾಮ ಪ್ರಪಂಚ ನ .26 ರಂದು ಟಿವಿ ವಾಹಿನಿಗಳಲ್ಲಿ ಸುರುಳಿ ಸುರುಳಿಯಾಗಿ ಬಿಚ್ಚಿಕೊಂಡಿದೆ. ತಾನೂ ಉದ್ಯೋಗ ಮಾಡುತ್ತಿರುವ ಜಾಗದಲ್ಲಿ ತನ್ನ ಸಹದ್ಯೋಗಿಯಾಗಿರುವ 13 ಜನ ಯುವತಿಯರ ಪೈಕಿ 9 ಜನರ ಜತೆ ಈತ ಖುಲ್ಲಾಂ ಖುಲ್ಲಾ ಆಗಿ ಸರಸ ಸಲ್ಲಾಪ ನಡೆಸಿದ್ದಾನೆ ಎನ್ನುವದನ್ನು ಪುಷ್ಟಿಕರಿಸುವ ವಿಡಿಯೋ ಹಾಗೂ ಪೋಟೋಗಳಿಂದ ಬಹುತೇಕರ ಮೊಬೈಲ್‌  ತುಂಬಿಕೊಂಡಿದೆ.

ಈ ವಿಚಾರದ ಬಗ್ಗೆ ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಪ್ರಕಟನೆ ಹೊರಡಿಸಿದ್ದು ಅದು ಇಂತಿದೆ :
“ ಇಂದು ಟಿವಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಡಾ. ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದ್ದು, ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು, ವೆನ್‌ಲಾಕ್ ಆಸ್ಪತ್ರೆಯ ಸಿಬ್ಬಂದಿಗಳೆಂದು ವರದಿಯಾಗುತ್ತಿದೆ.
ಸದ್ರಿ ಅಧಿಕಾರಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಓರ್ವ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾಗಿದ್ದು, ಹಾಗೂ ಸದ್ರಿ ವರದಿಯಲ್ಲಿ ಹೇಳುತ್ತಿರುವ ಮಹಿಳಾ ಸಿಬ್ಬಂದಿಗಳು ಸದ್ರಿ ಅಧಿಕಾರಿಯ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಾಗಿರುತ್ತಾರೆ.

ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಅಧಿಕಾರಿ ಸಿಬ್ಬಂದಿಗಳಲ್ಲ. ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳಲ್ಲ. ಸದ್ರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದ ಸಿಬ್ಬಂದಿಗಳಾಗಿದ್ದು, ದೃಶ್ಯ ಮಾಧ್ಯಮಗಳಲ್ಲಿ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳೆಂದು ತಪ್ಪು ಮಾಹಿತಿ ಪ್ರಚಾರವಾಗುತ್ತಿದ್ದು, ವರದಿಯನ್ನು ಸರಿಪಡಿಸುವಂತೆ ಮಾಧ್ಯಮಗಳಿಗೆ ಸೂಚಿಸುವಂತೆ ಕೋರಲಾಗಿದೆ. ಅಲ್ಲದೆ ಈ ಬಗ್ಗೆ ಸೃಷ್ಟಿಕರಣವನ್ನು ಕೂಡ ಮಾಧ್ಯಮಗಳು ನೀಡುವಂತೆ ಕೋರಲಾಗಿದೆ ಎಂದು ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಕಳವಾದ 2.90 ಕೋ.ರೂ. ಮೌಲ್ಯದ ಸೊತ್ತು ಮಾಲೀಕರಿಗೆ ಹಸ್ತಾಂತರ

Next Post

ಉಳ್ಳಾಲ ಸರ್ವಿಸ್ ರಸ್ತೆ ನೆಪದಲ್ಲಿ ವೈದ್ಯನಾಥ ಕಟ್ಟೆ ತೆರವಿಗೆ ಯತ್ನ ; ಸ್ಥಳೀಯರ ತೀವ್ರ ಆಕ್ರೋಶ

Related Posts

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರಾವಳಿ

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ

January 11, 2026
29
ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಕರಾವಳಿ

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

January 10, 2026
5
Next Post
ಉಳ್ಳಾಲ ಸರ್ವಿಸ್ ರಸ್ತೆ ನೆಪದಲ್ಲಿ ವೈದ್ಯನಾಥ ಕಟ್ಟೆ ತೆರವಿಗೆ ಯತ್ನ ; ಸ್ಥಳೀಯರ ತೀವ್ರ ಆಕ್ರೋಶ

ಉಳ್ಳಾಲ ಸರ್ವಿಸ್ ರಸ್ತೆ ನೆಪದಲ್ಲಿ ವೈದ್ಯನಾಥ ಕಟ್ಟೆ ತೆರವಿಗೆ ಯತ್ನ ; ಸ್ಥಳೀಯರ ತೀವ್ರ ಆಕ್ರೋಶ

Discussion about this post

Recent News

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
34
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d