ಮಂಗಳೂರು: ಕೋಟ್ಯಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿ ಗಳನ್ನು ಸಿಸಿಬಿ ಪೊಲೀಸರು ಶನಿವಾರ (ನ. 25) ಬಂಧಿಸಿದ್ದಾರೆ.
ಮಂಗಳೂರು ನಗರದ ಪಂಪ್ ವೆಲ್ ಬಳಿಯ ಆಸ್ಪತ್ರೆಯ ಹತ್ತಿರ 4 ಮಂದಿ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಚಿಕ್ಕಮಗಳೂರು ಮೂಲದ ವಿಟ್ಲದ ಮಂಗಿಲಪದವು ನಿವಾಸಿ ಪ್ಯಾರೇಜಾನ್ ಸೇಟು(37),ವಿಟ್ಲ, ಮಂಗಿಲಪದವಿನ ಬದ್ರುದ್ದೀನ್(28) ಮತ್ತು ತಮಿಳುನಾಡಿನ ನಾಗಪಟ್ಟಿನಂ ನ ರಾಜೇಶ್.ಆರ್(22) ಎನ್ನುವವರಾಗಿದ್ದಾರೆ.
ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಮಂದಿ ವ್ಯಕ್ತಿಗಳು ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿಗಳಿಂದ 1,57,50,000 ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಮೊಬೈಲ್ ಫೋನ್ -3 ಮತ್ತು 1 ಕಾರನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ , ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Discussion about this post