• About us
  • Contact us
  • Disclaimer
Thursday, August 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಕೊಳ್ಳೆ

Coastal Times by Coastal Times
December 26, 2024
in ಕ್ರೈಮ್ ನ್ಯೂಸ್
ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಕೊಳ್ಳೆ
80
VIEWS
WhatsappTelegramShare on FacebookShare on Twitter

ಮಂಗಳೂರು, ಡಿಸೆಂಬರ್​ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿನ್ನ ನಕಲಿ ಎಂದು ಗೊತ್ತಿದ್ದರೂ ಚಿನ್ನ ಪರೀಕ್ಷಕ ವಿವೇಕ್ ಆಚಾರ್ಯ ಅಸಲಿ ಎಂದು ಸರ್ಟಿಫಿಕೇಟ್ ನೀಡಿದ್ದಾನೆ. 2023ರ ನವೆಂಬರ್ ನಿಂದ 2024ರ ಫೆಬ್ರವರಿವರೆಗೆ ನಕಲಿ ಚಿನ್ನ ಅಡವಿಟ್ಟು ಕೋಟಿ ಕೋಟಿ ಲೂಟಿ ಮಾಡಲಾಗಿದೆ. ಮೂರು ತಿಂಗಳ ಅವಧಿಗೆ ಎಕ್ಸ್‌ಪ್ರೆಸ್‌ ಗೋಲ್ಡ್ ಲೋನ್ ನಡಿ ನಕಲಿ ಚಿನ್ನವಿಟ್ಟು ಅಬೂಬಕ್ಕರ್ ಸಿದ್ದೀಕ್ ಮೋಸ ಮಾಡಿದ್ದಾನೆ. ಈ ನಡುವೆ ಹೊಸ ಮ್ಯಾನೇಜರ್ ಅನುಮಾನ ಬಂದು ಪರೀಕ್ಷಿಸಿದಾಗ ನಕಲಿ ಚಿನ್ನ ಎಂಬುದು ಪತ್ತೆಯಾಗಿದೆ. ಆದರೆ ಕೋಟ್ಯಾಂತರ ರೂ. ಗೋಲ್ ಮಾಲ್ ಮುಚ್ಚಿಹಾಕಲು ಆಡಳಿತ ಮಂಡಳಿ ಯತ್ನಿಸಿದೆ ಎಂಬ ಆರೋಪ ಕೇಳಿಬಂದಿದೆ.

ನಕಲಿ ಚಿನ್ನವನ್ನು ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಿದ್ದಾಗಿ ತೋರಿಸಿ ಗೋಲ್ಮಾಲ್ ಮುಚ್ಚಿ ಹಾಕಲು ಯತ್ನಿಸಲಾಗಿದೆ. ಚಿನ್ನ ಪರೀಕ್ಷಕ ವಿವೇಕ್ ಆಚಾರ್ಯನೇ ಮತ್ತೆ ಹರಾಜಿನಲ್ಲಿ ನಕಲಿ ಚಿನ್ನ ಖರೀದಿಸಿದ್ದಾಗಿ ತೋರಿಸಿ ಗೋಲ್ಮಾಲ್ ಮುಚ್ಚಲು ಯತ್ನಿಸಲಾಗಿದೆ. ಉಳಿದ ಹಣ ತುಂಬಲು ಬ್ಯಾಂಕ್ ಸಿಬ್ಬಂದಿ ಹೆಸರಿನಲ್ಲಿ ಸಾಲ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿ ಅಬುಬಕ್ಕರ್ ಗೆ ಬ್ಯಾಂಕ್ ನ ಕೆಲ ಸಿಬ್ಬಂದಿಯ ಖಾತೆಯಿಂದಲೇ ಹಣ ವರ್ಗಾವಣೆ ಮಾಡಲಾಗಿದೆ.

ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬ್ಯಾಂಕ್​ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್​ಗಾಗಿ ಹುಡುಕಾಟ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಕರಣ ಸಂಬಂಧ ದೂರುದಾರ ಲೋಕನಾಥ್.ಡಿ ಮಾತನಾಡಿ, ಅಬೂಬಕ್ಕರ್ ಸಿದ್ದಿಕ್ ಮೊದಲಿನಿಂದಲೂ ಬ್ಯಾಂಕ್​ನ ಗ್ರಾಹಕರಾಗಿದ್ದರು. 2023ರ ನವೆಂಬರ್ ತಿಂಗಳಿನಲ್ಲಿ ಒಂದೇ ರೀತಿಯ 500 ನಕಲಿ ಚಿನ್ನದ ಬಳೆ ಅಡವಿಟ್ಟು, ಸಾಲ ಪಡೆದಿದ್ದಾರೆ. ಸಾಲವನ್ನು ಮೂರು ತಿಂಗಳಲ್ಲಿ ತೀರಿಸಬೇಕಿತ್ತು ಎಂದು ಹೇಳಿದರು.

ಆದರೆ, ಸಾಲ ತೀರಸದೆ ಇದ್ದಾಗ, ಬ್ಯಾಂಕ್​ನ ಪ್ರಭಾರ ಮ್ಯಾನೇಜರ್​ ಅವರು ಅನುಮಾನಗೊಂಡು ಬೇರೆಯವರಿಂದ ಮರು ತಪಾಸಣೆ ನಡೆಸಿದಾಗ ಚಿನ್ನ ನಕಲಿ ಎಂದು ಗೊತ್ತಾಗಿದೆ. ತಕ್ಷಣ ಜನರಲ್ ಮ್ಯಾನೇಜರ್ ಸರಫ್​ ಅವರಿಗೆ ಪತ್ರ ಬರೆದಿದ್ದಾರೆ. ಸರಿಯಾಗಿ ಚಿನ್ನವನ್ನು ಪರೀಕ್ಷೆ ಮಾಡದ ಕಾರಣ ಬ್ಯಾಂಕ್​ಗೆ 2 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ. ನೀನು‌ ಅದನ್ನು ತಕ್ಷಣ ಪಾವತಿಸುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು” -ಡಾ.ಕೆ.ಪ್ರಕಾಶ್ ಶೆಟ್ಟಿ

Next Post

ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂಪಾಯಿ ನೆರವು ಘೋಷಿಸಿದ ಅಲ್ಲು ಅರ್ಜುನ್​, ಪುಷ್ಪ 2 ತಂಡ

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
55
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
83
Next Post
ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂಪಾಯಿ ನೆರವು ಘೋಷಿಸಿದ ಅಲ್ಲು ಅರ್ಜುನ್​, ಪುಷ್ಪ 2 ತಂಡ

ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂಪಾಯಿ ನೆರವು ಘೋಷಿಸಿದ ಅಲ್ಲು ಅರ್ಜುನ್​, ಪುಷ್ಪ 2 ತಂಡ

Discussion about this post

Recent News

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
54
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d