• About us
  • Contact us
  • Disclaimer
Wednesday, October 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ : ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ

Coastal Times by Coastal Times
February 27, 2022
in ಕ್ರೀಡಾ ಸುದ್ದಿ
ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ : ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ
41
VIEWS
WhatsappTelegramShare on FacebookShare on Twitter

ಮಂಗಳೂರು: ‘ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳುವುದು ಅತಿ ಮುಖ್ಯ’ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ ಹೇಳಿದರು.

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಲ್ಲಿ ಕ್ರೀಡಾ ಭಾವನೆ ಬೆಳೆಸುವುದಕ್ಕೆ ಜಿಲ್ಲೆಯಲ್ಲಿ ಕ್ರೀಡಾ ಇಲಾಖೆ ಇಂತಹ ಉತ್ತಮ ವೇದಿಕೆ ಒದಗಿಸಿದೆ. ಮಹಿಳೆಯರು ಈಗ ಎಲ್ಲ ಕ್ಷೇತ್ರಗಳಲ್ಲಿ ಸಾಕಷ್ಟು ಅವಕಾಶ ಪಡೆಯುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ. ಜಿಲ್ಲೆಯ ಹಲವು ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲಿ ತಮ್ಮದೆ ಆದಂತಹ ಛಾಪು ಮೂಡಿಸುತ್ತಿರುವುದು ಉಳಿದವರಿಗೆ ಪ್ರೇರೇಪಣೆ ಆಗಿದೆ ಎಂದು ಹೇಳಿದರು.

ಕ್ರೀಡೆ ಪದಕ, ಪ್ರಶಸ್ತಿ ಗಳಿಸುವುದಕ್ಕೆ ಮಾತ್ ಸಿಮೀತವಲ್ಲ. ದೈಹಿಕ ಹಾಗೂ ಮಾನಸಿಕ ಸದೃಢತೆ ಕಂಡುಕೊಳ್ಳಲು ಉತ್ತಮ ವೇದಿಕೆ. ಮಹಿಳೆಯರನ್ನು ಸಮಾಜಮುಖಿಯಾಗಿ ಮಾಡುವುದಕ್ಕೆ ಸಾಕಷ್ಟು ಅವಕಾಶಗಳು ಇದ್ದು, ಕ್ರೀಡೆಯಲ್ಲಿ ಗಟ್ಟಿಯಾದ ಸ್ಥಾನ ಪಡೆಯಲು ಸತತ ಪ್ರಯತ್ನ ಕೂಡ ಮುಖ್ಯ, ಇದನ್ನು ಸಾಧಿಸುವ ಮನಸ್ಸು ಎಲ್ಲರಲ್ಲಿ ಬೆಳೆಯಬೇಕು. ಸೋಲನ್ನು ಸವಾಲಾಗಿ ಸ್ವೀಕರಿಸುವ ಮೂಲಕ ಜೀವನದಲ್ಲಿ ಗುರಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಬರ್ಕೆ ಠಾಣೆಯ ಇನ್‌ಸ್ಪೆಕ್ಟರ್‌ ಜೋತಿರ್ಲಿಂಗ ಹೊನಕಟ್ಟಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ವಿಶಿಷ್ಟ ಸ್ಥಾನವಿದ್ದು, ಜನಪದ ಸಾಹಿತ್ಯದ ಆರಂಭ ಕೂಡ ಮಹಿಳೆಯರಿಂದಲೇ ಶುರು ಆಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಕ್ರೀಡೆಯಲ್ಲಿ ಗಟ್ಟಿ ಸ್ಥಾನವನ್ನು ಪಡೆಯುತ್ತಿರುವುದು ನಮಗೆಲ್ಲ ಹೆಮ್ಮೆ. ಸಾಕಷ್ಟು ಮಹಿಳೆಯರು ಒಲಿಂಪಿಯನ್‌ಗಳಾಗಿ ಕೂಡ ಹೊರಹೊಮ್ಮುತ್ತಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ತಮ್ಮದೆ ಆದಂತಹ ಕ್ರೀಡಾ ಸಾಮರ್ಥ್ಯವನ್ನು ಮೆರೆಯುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಮೆರುಗು ತಂದಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 200 ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಲೋಕ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಸಹಾಯಕಿ ಭಾಗೀರಥಿ ರೈ ಅವರು ಶಾಟಪಟ್‌ ಥ್ರೋ ಹಾಗೂ ಡಿಸ್ಕಸ್‌ ಥ್ರೋನಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದರು. ಚಂಚಾಲಾಕ್ಷಿ ದ್ವಿತೀಯ ಸ್ಥಾನ, ತೃತೀಯ ರೇಖಾ(ಡಿಸ್ಕಸ್‌),ಕಾವ್ಯ(ಶಾಟಪಟ್‌) ತೃತೀಯ ಸ್ಥಾನ ಪಡೆದರು.  

ಮಹಾನಗರ ಪಾಲಿಕೆ ಮೇಯರ್‌ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯೆ ಸಂಧ್ಯಾ ಎಂ. ಆಚಾರ್‌, ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯೆ ಸಂಧ್ಯಾ ವೆಂಕಟೇಶ್‌ ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಷ್ಯಾ ಜೊತೆ ಶಾಂತಿ ಮಾತುಕತೆಗೆ ಸಿದ್ಧ; ಬೆಲಾರಸ್‌ನಲ್ಲಿ ಮಾತಕುತೆ ಬೇಡ – ಉಕ್ರೇನ್ ಅಧ್ಯಕ್ಷ!

Next Post

ಕೊಂಕಣ ರೈಲಿನಲ್ಲಿ ಮೊಬೈಲ್ ಕಳವು : ಇಬ್ಬರು ಕಳ್ಳರ ಬಂಧನ

Related Posts

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025
ಕರಾವಳಿ

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025

September 10, 2025
79
Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಕ್ರೀಡಾ ಸುದ್ದಿ

Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

September 8, 2025
36
Next Post
ಕೊಂಕಣ ರೈಲಿನಲ್ಲಿ ಮೊಬೈಲ್ ಕಳವು : ಇಬ್ಬರು ಕಳ್ಳರ ಬಂಧನ

ಕೊಂಕಣ ರೈಲಿನಲ್ಲಿ ಮೊಬೈಲ್ ಕಳವು : ಇಬ್ಬರು ಕಳ್ಳರ ಬಂಧನ

Discussion about this post

Recent News

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

October 28, 2025
73
ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

October 27, 2025
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

October 28, 2025
ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

ಮಂಗಳೂರು: ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರನ್ನು ರಕ್ಷಿಸಿದ ಇಂಡಿಯನ್ ಕೋಸ್ಟ್ ಗಾರ್ಡ್

October 27, 2025
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮಾರಾಟ, 476 ಗ್ರಾಮ್ ಚಿನ್ನ ವಶಕ್ಕೆ, ಚಿನ್ನ ಖರೀದಿ ಒಪ್ಪಿಕೊಂಡ ಜುವೆಲ್ಲರಿ ಉದ್ಯಮಿ

October 26, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d