ಮಂಗಳೂರು, ಎ.27: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು. ಈ ಸಂವಾದ ಕಾರ್ಯಕ್ರಮದ ವೀಕ್ಷಣೆಗೆ ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುಧೀಂದ್ರ ಸಭಾಭವನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.
ಸಂವಾದ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗರಿಷ್ಠ ದಾಖಲೆಯ ಸ್ಥಾನಗಳನ್ನು ನೀಡಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಬೂತ್ ಮಟ್ಟದ ಗೆಲುವು ರಾಜ್ಯದ ಗೆಲುವಿಗೆ ಪೂರಕ. ಇನ್ನೆರೆಡು ದಿನಗಳಲ್ಲಿ ಕರ್ನಾಟಕದ ಜನರ ದರ್ಶನಕ್ಕಾಗಿ, ಆಶೀರ್ವಾದ ಪಡೆಯಲು ಬರಲಿದ್ದೇನೆ ಎಂದು ಹೇಳಿದ್ದಾರೆ. ಮನೆಮನೆಗೆ ಪ್ರಚಾರಕ್ಕೆ ಹೋದಾಗ ಕಾರ್ಯಕರ್ತ ಹೇಗಿರಬೇಕು. ಬಿಜೆಪಿ ಕಾರ್ಯಕರ್ತ ಚುನಾವಣೆಯನ್ನು ಹೇಗೆ ಸವಾಲಾಗಿ ಸ್ವೀಕರಿಸಬೇಕು ಎಂಬುದನ್ನು ಪ್ರಧಾನಮಂತ್ರಿ ಕಾರ್ಯಕರ್ತರಿಗೆ ಪ್ರೇರಣೆ ನೀಡಿದ್ದಾರೆ. ಪ್ರಧಾನಮಂತ್ರಿಗಳು ಕಾರ್ಯಕರ್ತರಿಗೆ ಉತ್ಸಾಹ ತುಂಬಿದ್ದಾರೆ. ಇಡೀ ರಾಜ್ಯದಲ್ಲಿ ಹೊಸ ವಾತಾವರಣ ನಿರ್ಮಾಣವಾಗಿದೆ ಎಂದರು.

ಮಂಗಳೂರಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚುನಾವಣೆ ಸಮರ ಆರಂಭವಾಗಿದ್ದು, ಬಿಜೆಪಿ ಗೆಲುವು ಖಚಿತವಾಗಿದೆ. ಮಹಾಪ್ರಚಾರ ಅಭಿಯಾನದ ಮನೆಮನೆ ಭೇಟಿಯ ಮಧ್ಯೆ ಕಾರ್ಯಕರ್ತರಿಗೆ ಪ್ರೇರಣೆ ನೀಡಿ ಶಕ್ತಿವಂತರಾಗಿ ಉತ್ಸಾಹದಿಂದ ದುಡಿಯಲು ಶ್ರೇಷ್ಠ ಜನನಾಯಕ ಮೋದಿ ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post