ಬಂಟ್ವಾಳ, ಮೇ 27 : ಪಿಕಪ್ ಚಾಲಕನಾಗಿದ್ದ ಯುವಕನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಇಮ್ತಿಯಾಝ್ ಎಂದು ಗುರುತಿಸಲಾಗಿದೆ. ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ. ಇರಾಕೋಡಿ ಎಂಬಲ್ಲಿ ಮನೆಯೊಂದರ ಮುಂದೆ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ರಹೀಂ ಜೊತೆಗಿದ್ದ ಹನೀಫ್ ಎಂಬಾತನಿಗೂ ತಲವಾರು ದಾಳಿಯಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post