ನೆಲ್ಯಾಡಿ : ಆಕಸ್ಮಿಕ ವಿದ್ಯುತ್ ಶಾಕ್ಗೆ ಒಳಗಾಗಿ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಅಡ್ಡಹೊಳೆ ನಿವಾಸಿ ಮೋನಚ್ಚನ್ ಎಂಬವರ ಪುತ್ರ ರೋಫಿನ್(16)ಮೃತಪಟ್ಟ ಯುವಕ. ಜಾರ್ಜ್ಗೆ ಇಟ್ಟಿದ್ದ ಮೊಬೈಲ್ಗೆ ತೆಗೆಯುವ ವೇಳೆ ಸ್ವಿಚ್ ಬೋರ್ಡಿನಿಂದ ವಿದ್ಯುತ್ ವಯರ್ ಕೈಗೆ ತಾಗಿದೆ. ಈ ಸಮಯದಲ್ಲಿ ವಿದ್ಯುತ್ ಶಾಕ್ಗೆ ಒಳಗಾಗಿ ರೋಫಿನ್ ಅಸ್ವಸ್ಥರಾಗಿದ್ದರು. ತಕ್ಷಣವೇ ಮನೆಯವರು ಈತನನ್ನು ಆಸ್ಪತ್ರೆಗೆ ಕರೆದೊಯ್ಯದರು. ಆದರೆ, ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಹಾಗೂ ಕಡಬ, ನೆಲ್ಯಾಡಿ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post