• About us
  • Contact us
  • Disclaimer
Thursday, March 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿ ಕಾಲೇಜಿಗೆ ಭೇಟಿ

Coastal Times by Coastal Times
July 27, 2023
in ಕರಾವಳಿ
ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಉಡುಪಿ ಕಾಲೇಜಿಗೆ ಭೇಟಿ
70
VIEWS
WhatsappTelegramShare on FacebookShare on Twitter

ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿಗಳು ರೆಕಾರ್ಡ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪರಿಶೀಲಿಸಲು ನಾನು ಉಡುಪಿಗೆ ತೆರಳುತ್ತಿದ್ದೇನೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಬುಧವಾರ ಉಡುಪಿಗೆ ಆಗಮಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಶಬ್ನಾಜ್, ಅಲ್ಫಿಯಾ ಮತ್ತು ಅಲೀಮಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆಯು “ಅತ್ಯಂತ ದುಃಖಕರ” ಎಂದಿರುವ ಖುಷ್ಬೂ, ಉಡುಪಿ ಕಾಲೇಜಿನ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಹಿಂದೂ ಹುಡುಗಿಯರ ವಿಡಿಯೋ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಮೂವರು ಮುಸ್ಲಿಂ ವಿದ್ಯಾರ್ಥಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ. ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ. ನಮ್ಮದು ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ ಎಂದ ಅವರು ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಬೇಡಿ. ನಮಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಯಾವುದೇ ಫೋಟೋ ಅಥವಾ ವಿಡಿಯೋ ಲಭ್ಯವಿಲ್ಲ. ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸ್ಪಷ್ಟತೆ ಸಿಗಬೇಕು ಎಂದರು.

ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಒಳಗೊಂಡಿವೆ. ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದರು.

ಎಫ್ಐಆರ್ ವಿಳಂಬ ವಿಚಾರ ಬಗ್ಗೆ ಪ್ರತಿಕ್ರಿಸಿದ ಅವರು, ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ. ಸಂತ್ರಸ್ತೆ ದೂರು ಕೊಟ್ಟಿಲ್ಲ. ತಾನು ದೂರು ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಡ್ರಗ್ಸ್ ವ್ಯಸನಕ್ಕೆ ಬಲಿ ಬಿದ್ದ ಮೊಮ್ಮಗ ಅಜ್ಜ–ಅಜ್ಜಿಯನ್ನು ಕೊಂದು ಚಿನ್ನಾಭರಣ ದೋಚಿ ಮಂಗಳೂರಿನಲ್ಲಿ ಮಾರಲೆತ್ನಿಸಿ ಸಿಕ್ಕಿಬಿದ್ದ..!

Next Post

ಸೆನೆಗಲ್‌ನಿಂದ ಹಸ್ತಾಂತರಿಸಲ್ಪಟ್ಟ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಗ್ಯಾಂಗ್‌ಸ್ಟರ್ ರವಿ ಪೂಜಾರಿ!

Related Posts

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.
ಕರಾವಳಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
17
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
ಕರಾವಳಿ

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
26
Next Post
ಸೆನೆಗಲ್‌ನಿಂದ ಹಸ್ತಾಂತರಿಸಲ್ಪಟ್ಟ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಗ್ಯಾಂಗ್‌ಸ್ಟರ್ ರವಿ ಪೂಜಾರಿ!

ಸೆನೆಗಲ್‌ನಿಂದ ಹಸ್ತಾಂತರಿಸಲ್ಪಟ್ಟ ಪ್ರಕರಣಗಳ ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಗ್ಯಾಂಗ್‌ಸ್ಟರ್ ರವಿ ಪೂಜಾರಿ!

Discussion about this post

Recent News

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
17
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
157
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d