• About us
  • Contact us
  • Disclaimer
Wednesday, July 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ನಗರಸಭೆಯಲ್ಲಿ ವಾದ-ವಿವಾದ, ಆರೋಪ-ಪ್ರತ್ಯಾರೋಪ, ಅಗತ್ಯಕ್ಕಿಂತ ಅನಗತ್ಯ ವಿಚಾರದ್ದೇ ಚರ್ಚೆ

Coastal Times by Coastal Times
August 27, 2021
in ತಾಜಾ ಸುದ್ದಿ
ಉಳ್ಳಾಲ ನಗರಸಭೆಯಲ್ಲಿ ವಾದ-ವಿವಾದ, ಆರೋಪ-ಪ್ರತ್ಯಾರೋಪ, ಅಗತ್ಯಕ್ಕಿಂತ ಅನಗತ್ಯ ವಿಚಾರದ್ದೇ ಚರ್ಚೆ
35
VIEWS
WhatsappTelegramShare on FacebookShare on Twitter

ಉಳ್ಳಾಲ: ವಾದ-ವಿವಾದ, ಆರೋಪ-ಪ್ರತ್ಯಾರೋಪ, ಅಗತ್ಯ ವಿಚಾರಕ್ಕಿಂತ ಅನಗತ್ಯ ವಿಚಾರಗಳ ಚರ್ಚೆಯ ಮಧ್ಯೆ ಏರು ಧ್ವನಿಯ ಮಾತುಗಳ ಮಧ್ಯೆ ಗುರುವಾರ ನಡೆದ ಉಳ್ಳಾಲ ನಗರಸಭೆಯ ಸಾಮಾನ್ಯ ಸಭೆ ನಲುಗಿಹೋಯಿತು.

ನಗರಸಭೆ ಅಧ್ಯಕ್ಷೆ ಚಿತ್ರಕಲಾ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಜೆಂಡಾಕ್ಕಿಂತ ಮೊದಲು ಒಂದೂವರೆ ಗಂಟೆ ಅನಗತ್ಯ ವಿಷಯಗಳಿಗೆ ವಿನಿಯೋಗವಾಯಿತು. ವಾಲಿಬಾಲ್ ಮೈದಾನದಲ್ಲಿ ಟೆಂಟ್ ಹಾಕಿ ವ್ಯಾಕ್ಸಿನ್ ಕೊಡ್ತಾರೆ, ಕೌನ್ಸಿಲರ್‌ಗಳಿಗೆ ಮಾಹಿತಿ ಇಲ್ಲದೆ ಲಸಿಕೆ ಕೊಟ್ಟಿದ್ದಾರೆ, ಡಿಎಚ್‌ಒಗೆ ಪತ್ರ ಬರೆದು ದಿನ ನಿಗದಿಯಾಗಿ ಎರಡು ಗಂಟೆ ಕಾದರೂ ವ್ಯಾಕ್ಸಿನ್ ಬಂದಿಲ್ಲ ಎಂದು ಜೆಡಿಎಸ್‌ನ ಖಲೀಲ್ ಅಸಮಾಧಾನ ವ್ಯಕ್ತಪಡಿಸಿದರು. ಮನೆಯಲ್ಲಿ ನಿಧನ ಹೊಂದಿದರೂ ಮರಣ ಪ್ರಮಾಣಪತ್ರ ಕೊಡುತ್ತಿಲ್ಲ ಎಂದು ಬಾಜಿಲ್ ಡಿಸೋಜ ಹೇಳಿದರೆ, ಉಪಾಧ್ಯಕ್ಷ ಅಯೂಬ್ ಮಂಚಿಲ ಏರು ಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಪೌರಾಯುಕ್ತ ರಾಯಪ್ಪ ಆರೋಗ್ಯಾಧಿಕಾರಿಯನ್ನು ಕರೆದು, ಜನನ -ಮರಣ ಪ್ರಮಾಣ ಪತ್ರದ ದಾಖಲೆ ನೀವೇ ಇತ್ಯರ್ಥಪಡಿಸಲು ಹೋಗಿ ಸಮಸ್ಯೆ ತಂದುಕೊಳ್ಳಬೇಡಿ ಎಂದು ಸೂಚಿಸಿದರು. ಇದರ ಮಧ್ಯೆಯೇ ಕಾಂಗ್ರೆಸ್‌ನ ರವಿಚಂದ್ರ ಏರು ಧ್ವನಿಯಲ್ಲಿ ಮಾತನಾಡಿದ್ದು, ಪೌರಾಯುಕ್ತರ ಅಸಮಾಧಾನಕ್ಕೆ ಕಾರಣವಾಯಿತು. ಒಬ್ಬರು ಮಾತನಾಡುವಾಗ ಇನ್ನೊಬ್ಬರು ಮಾತನಾಡಬೇಡಿ, ಅಧ್ಯಕ್ಷರ ಅನುಮತಿ ಪಡೆದು ಮಾತನಾಡಿ ಸದನಕ್ಕೆ ಗೌರವ ಕೊಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಬಗ್ಗೆ ಗಮನಕ್ಕೆ ತರುವುದಿಲ್ಲ ಎಂದು ಜೆಡಿಎಸ್‌ನ ದಿನಕರ್ ಉಳ್ಳಾಲ್ ಹಾಗೂ ಅಸ್ಗರ್ ಆಕ್ಷೇಪಿಸಿದಾಗ ಕಾಂಗ್ರೆಸ್‌ನ ಇಸ್ಮಾಯಿಲ್ ಧ್ವನಿಗೂಡಿಸಿ ಕಾರ್ಯಕ್ರಮ ನಡೆಸುವಾಗ ಎಲ್ಲರ ಗಮನಕ್ಕೆ ತಂದರೆ ಒಳ್ಳೆಯದು ಎಂದಿದ್ದು ಅಧ್ಯಕ್ಷರಿಗೆ ಇರಿಸುಮುರಿಸು ಉಂಟುಮಾಡಿತು. ಈ ಮಧ್ಯೆ ನಗರಸಭೆ ಅಧಿಕಾರಿಗಳು ಸೋಮೇಶ್ವರದಲ್ಲೂ ಕೆಲಸ ಮಾಡಬೇಕಿರುವುದರಿಂದ ತೊಂದರೆ ಆಗಿದೆ. ಇದನ್ನು ತಡೆಯಲು ಅಧ್ಯಕ್ಷರಿಗೆ ಆಗದಿದ್ದರೆ ಜಿಲ್ಲಾಧಿಕಾರಿ ಬಳಿ ನಾವೇ ಹೋಗುತ್ತೇವೆ ಎಂದು ಬಿಜೆಪಿ ಕೌನ್ಸಿಲರ್‌ಗಳು ಸವಾಲು ಹಾಕಿದರು.
ಆಶ್ರಯ ಸಮಿತಿಗೆ 20 ವರ್ಷ, ಒಳಚರಂಡಿಗೆ 12 ವರ್ಷಗಳಾಗಿವೆ. ಕ್ರೀಡಾಂಗಣಕ್ಕೆ ನಿರ್ಣಯ ಮಾಡಿದ ಬಳಿಕ ಖಾಸಗಿ ಜಮೀನು ಎಂದು ಹೇಳುತ್ತೀರಿ. ಪಂಪ್‌ವೆಲ್ ಮೇಲ್ಸೇತುವೆ ವಿರುದ್ಧ ಮೆರವಣಿಗೆ ಮಾಡಿದಂತೆ ನಾವೂ ಮೆರವಣಿಗೆ ಮಾಡಬೇಕಾಗುತ್ತದೆ. ನಿಮ್ಮ ಅವಧಿಯಲ್ಲೇ ಈ ಸಮಸ್ಯೆಗೆ ಮುಕ್ತಿ ನೀಡಿ ಎಂದು ದಿನಕರ್ ಉಳ್ಳಾಲ್ ಹೇಳಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಸ್ಫೋಟ: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್

Next Post

ಕುಸ್ತಿ ಪಟು ವಿನೇಶ್ ಫೋಗಟ್ ಅಮಾನತು ರದ್ದು: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಅನುಮತಿ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಕುಸ್ತಿ ಪಟು ವಿನೇಶ್ ಫೋಗಟ್ ಅಮಾನತು ರದ್ದು: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಅನುಮತಿ

ಕುಸ್ತಿ ಪಟು ವಿನೇಶ್ ಫೋಗಟ್ ಅಮಾನತು ರದ್ದು: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಅನುಮತಿ

Discussion about this post

Recent News

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
137
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
134
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣ: ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ

July 9, 2025
ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d