• About us
  • Contact us
  • Disclaimer
Sunday, April 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

Coastal Times by Coastal Times
August 27, 2025
in ಕರಾವಳಿ
ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ
113
VIEWS
WhatsappTelegramShare on FacebookShare on Twitter

ಮಂಗಳೂರು, ಆಗಸ್ಟ್ 27: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆ ಮಂಗಳವಾರ ತಡರಾತ್ರಿ 2-30 ರವರೆಗೂ ಎಸ್ ಐಟಿ ತಪಾಸಣೆ ನಡೆಸಿದೆ. ಈ ವೇಳೆ ವಿಡಿಯೋ ರೆಕಾರ್ಡಿಂಗ್ ಸೇರಿದಂತೆ , ಫೋನ್ ಮಾಹಿತಿ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.  ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವ ಹೂಳಲಾಗಿತ್ತು ಎಂಬ ಪ್ರಕರಣದಲ್ಲಿ ಬಂಧಿತನಾದ ಮಾಸ್ಕ್ಮ್ಯಾನ್ ಚಿನ್ನಯ್ಯ ವಿಚಾರಣೆ ವೇಳೆ ಎಸ್ಐಟಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿ ದೊರೆತಿದೆ. ಅಲ್ಲದೆ, ‘ಬುರುಗಡೆ ಗ್ಯಾಂಗ್’ ಚಿನ್ನಯ್ಯನ ವಿಚಾರವಾಗಿ ಏನೇನು ಪ್ಲಾನ್ ಮಾಡಿತ್ತು ಎಂಬುದು ತಿಳಿದುಬಂದಿದೆ. ಚಿನ್ನಯ್ಯ ಸಿಕ್ಕಿಬಿದ್ದರೆ ಯಾವ ರೀತಿ ಬಿಂಬಿಸಬೇಕು ಎಂಬುದಕ್ಕೂ ವಿಡಿಯೋ ಮಾಡಿಸಿ ಇಡಲಾಗಿತ್ತು.

25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್ :ತಿಮರೋಡಿ ಮನೆಯ ಸೀಕ್ರೇಟ್ ರೂಂನಿಂದ ಚಿನ್ನಯ್ಯನ ಸಂದರ್ಶನಗಳನ್ನು ಮಾಡಲಾಗಿತ್ತು. ಸುಮಾರು 25 ಕ್ಕೂ ಹೆಚ್ಚು ಸಂದರ್ಶನದ ವಿಡಿಯೋಗಳನ್ನು ಸಿದ್ದಮಾಡಿಡಲಲಾಗಿತ್ತು. ಇವುಗಳನ್ನು ಪರಿಶೀಲಿಸಲಿರುವ ಎಸ್‌ಐಟಿ ಇದರ ಆಧಾರದ ಮೇಲೆ ಮತ್ತಷ್ಟು ಜನರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಚಿನ್ನಯ್ಯನ ವಿಚಾರಣೆ ವೇಳೆಯೂ ಬಹಿರಂಗ ಆಗುವ ಅಂಶಗಳ ಮೇಲೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇದ್ದು, ಬುರುಡೆ ಷಡ್ಯಂತ್ರದ ಹಿಂದಿನ ಗ್ಯಾಂಗ್‌ ಗೆ ಈಗ ಬಂಧನ ಭೀತಿ ಎದುರಾಗಿದೆ. ಚಿನ್ನಯ್ಯನ ಬಳಸಿಕೊಂಡು ಷಡ್ಯಂತ್ರ ರೂಪಿಸಿರುವ ಹಿನ್ನೆಲೆ ಆತ ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಅಂಶಗಳನ್ನು ಆಧರಿಸಿ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದೆ. ವಿಡಿಯೋ ಆಡಿಯೋ ಸಾಕ್ಷಿಗಳೂ ಕೂಡಾ ಸಿಕ್ಕಿವೆ.

ಮಾಸ್ಕ್ಮ್ಯಾನ್ ಚಿನ್ನಯ್ಯ ಬಂಧನವಾದರೆ ಯಾವ ವಿಡಿಯೋ ಬಿಡುಗಡೆ ಮಾಡಬೇಕು, ಚಿನ್ನಯ್ಯ ಓಡಿ ಹೋದರೆ ಯಾವ ವಿಡಿಯೋ, ಚಿನ್ನಯ್ಯ ಮೃತಪಟ್ಟರೆ ಯಾವ ವಿಡಿಯೋ; ಈ ರೀತಿಯಾಗಿ ಇಂತಹ ಪ್ರತಿಯೊಂದು ಸಂದರ್ಭಕ್ಕೂ ಗ್ಯಾಂಗ್ ಪ್ರತ್ಯೇಕ ವಿಡಿಯೋ ತಯಾರಿಸಿಕೊಂಡಿತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಇಷ್ಟೇ ಅಲ್ಲದೆ, ಯುವತಿಯ ಅತ್ಯಾಚಾರ ಪ್ರಕರಣ ಮುನ್ನೆಲೆಗೆ ಬಂದರೆ ಅದಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲು ವಿಶೇಷ ವಿಡಿಯೋ ಸಿದ್ದಪಡಿಸಲಾಗಿತ್ತು. ಯಾರು ಯಾರ ಹೆಸರು ಬರುತ್ತದೆಯೋ, ಆ ಸಂದರ್ಭದಲ್ಲಿ ಪ್ರತ್ಯೇಕ ವಿಡಿಯೋಗಳನ್ನು ಪ್ರಸಾರ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಚಿನ್ನಯ್ಯ ಎಸ್ಐಟಿ ಬಳಿ ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಈ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ತಿರುವು ಪಡೆದುಕೊಂಡಿದ್ದು, ‘ಬುರುಡೆ’ ಗ್ಯಾಂಗ್‌ನ ಕಾರ್ಯವೈಖರಿ ಒಂದೊಂದಾಗಿ ಬಹಿರಂಗವಾಗುತ್ತಿದೆ.

ಮಂಗಳವಾರವಷ್ಟೇ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರನ ಮನೆಗಳಿಗೆ ತೆರಳಿದ್ದ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನ ಮೊಬೈಲ್ ವಶಪಡಿಸಿಕೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

Next Post

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Related Posts

ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ
ಕರಾವಳಿ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಎಪ್ರಿಲ್ 12ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ

April 10, 2026
9
Next Post
ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Discussion about this post

Recent News

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
51
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d