• About us
  • Contact us
  • Disclaimer
Wednesday, April 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ : ಅನೈತಿಕ ಸಂಬಂಧ ಶಂಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

Coastal Times by Coastal Times
October 27, 2022
in ಕ್ರೈಮ್ ನ್ಯೂಸ್
ಉಳ್ಳಾಲ : ಅನೈತಿಕ ಸಂಬಂಧ ಶಂಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
175
VIEWS
WhatsappTelegramShare on FacebookShare on Twitter

ಉಳ್ಳಾಲ: ಸಂಶಯಪಿಶಾಚಿ ಗಂಡನೊಬ್ಬ ತನ್ನ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿಲಾರು ಎಂಬಲ್ಲಿ ಗುರುವಾರ ಮಧ್ಯಾಹ್ನದ ಹೊತ್ತು ಘಟನೆ ನಡೆದಿದೆ.

ಪಿಲಾರು ನಿವಾಸಿ ಶೋಭಾ ಪೂಜಾರಿ(46) ಮೃತದೇಹ ಮನೆಯ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತಿ ಶಿವಾನಂದ ಪೂಜಾರಿ (55) ಮೃತದೇಹ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನುಮಾನ ಸ್ವಭಾವದ ಶಿವಾನಂದ ಪತ್ನಿ ಶೋಭ ಜೊತೆಗೆ ಸಣ್ಣ ಪುಟ್ಟ ವಿಷಯಕ್ಕೂ ಪ್ರತಿದಿನ ಜಗಳವಾಡುತ್ತಿದ್ದರು. ಹಲವರ ಜೊತೆಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿಯ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದರು. ಗುರುವಾರ ಬೆಳಗ್ಗೆ ಕೂಡ ಪತ್ನಿಯೊಂದಿಗೆ ಜಗಳವಾಡಿದ್ದರು ಎನ್ನಲಾಗ್ತಿದೆ.

ಶಿವಾನಂದ ಮತ್ತು ಶೋಭಾ ದಂಪತಿಗೆ ಇಬ್ಬರು ಮಕ್ಕಳು. ಮಗಳಿಗೆ ಮದುವೆಯಾಗಿದ್ದರೆ, ಮಗ ಕಾರ್ತಿಕ್‌ ಕೆಲಸಕ್ಕೆ ಹೋಗುತ್ತಿದ್ದಾನೆ. ಗುರುವಾರ ಮಧ್ಯಾಹ್ನದ ಹೊತ್ತು ಕಾರ್ತಿಕ್‌ ತನ್ನ ತಾಯಿಗೆ ಕರೆ ಮಾಡಿದ್ದಾನೆ. ಆದರೆ, ಫೋನ್‌ ಎತ್ತದೆ ಇದ್ದಾಗ ಪಕ್ಕದ ಮನೆಯ ಮಹಿಳೆಯೊಬ್ಬರಿಗೆ ಕರೆ ಮಾಡಿದ್ದಾರೆ.

ಶೋಭಾ ಅವರು ಬೆಳಗ್ಗೆ 10 ಗಂಟೆಯ ಹೊತ್ತಿಗೆ ಈ ಮನೆಗೆ ಬಂದು ಗೊಬ್ಬರ ತೆಗೆದುಕೊಂಡಿದ್ದರು. ಸ್ವಲ್ಪ ಹೊತ್ತಿನಲ್ಲೇ ಕರೆ ಬಂದಿದೆ. ಆಗ ಪಕ್ಕದ ಮನೆಯ ಮಹಿಳೆ ಶೋಭಾ ಅವರ ಹೆಸರು ಕರೆಯುತ್ತಾ ಹೋಗಿದ್ದಾರೆ. ಆದರೆ, ಅವರ ಕರೆಗೆ ಪ್ರತಿಕ್ರಿಯೆ ಸಿಕ್ಕಿಲ್ಲ. ಮನೆಗೇ ಹೋಗಿ ನೋಡಿದರೆ ಟಿವಿ ಆನ್‌ ಆಗಿತ್ತು. ಇನ್ನೂ ಒಳಗೆ ಹೋಗಿ ನೋಡಿದರೆ ಮಂಚದಲ್ಲಿ ಶೋಭಾ ಅವರು ಸತ್ತು ಬಿದ್ದಿದ್ದರು.

ಆಗ ಪಕ್ಕದ ಮನೆ ಮಹಿಳೆ ಓಡಿಕೊಂಡು ಹೋಗಿ ಅಕ್ಕಪಕ್ಕದ ಮನೆಯವರಿಗೆ ತಿಳಿಸಿದರು. ಈ ನಡುವೆ, ಯಾರೋ ತೋಟದ ಭಾಗದಲ್ಲಿ ಬರುತ್ತಿದ್ದಾಗ ಅಲ್ಲಿ ಶಿವಾನಂದ ಪೂಜಾರಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಮೇಲ್ನೋಟಕ್ಕೆ ನೋಡಿದಾಗಲೇ ಶಿವಾನಂದ ಪೂಜಾರಿ ತನ್ನ ಪತ್ನಿಯ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಭೇಟಿ ನೀಡಿ ಎರಡು ಮೃತದೇಹಗಳನ್ನು ಪರಿಶೀಲಿಸುತ್ತಿದ್ದಾರೆ. ಎಸಿಪಿ ದಿನಕರ್‌ ಶೆಟ್ಟಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯ ತಂಡ ತನಿಖೆ ಕೈಗೆತ್ತಿಕೊಂಡಿದೆ.

ಆತ್ಮಹತ್ಯೆಗೈದ ಶಿವಾನಂದ್ ಡೆತ್ ನೋಟ್ ಬರೆದಿಟ್ಟಿದ್ದು ಪತ್ನಿಯ ಶೀಲ ಸರಿ ಇಲ್ಲ, ನಡತೆ ಕೆಟ್ಟವಳೆಂದು ಬರೆದಿದ್ದಾನೆ. ಅದಕ್ಕೆ ಸಂಬಂಧಿ ಯುವಕನೋರ್ವನ ಭಾವಚಿತ್ರವನ್ನೂ ಲಗತ್ತಿಸಿದ್ದಾನೆ. ಅಲ್ಲದೆ ಅದೇ ಭಾವಚಿತ್ರವನ್ನ ಗೋಡೆಗೂ ಅಂಟಿಸಿದ್ದಾನೆ. ಭಾವಚಿತ್ರದಲ್ಲಿರುವ ಯುವಕ ಶೋಭಾ ಅವರ ಸಂಬಂಧಿಯಾಗಿದ್ದು ಸನ್ನಡತೆಯ ಯುವಕನೆಂದು ಮನೆ ಮಂದಿ ತಿಳಿಸಿದ್ದಾರೆ. ಶೋಭಾ ಅವರು ಗೃಹಿಣಿಯಾಗಿದ್ದು ಮನೆಯಲ್ಲೇ ಬೀಡಿ ಕಟ್ಟುತ್ತಿದ್ದರು. ಅವರ ಕಿರಿಯ ಮಗಳು ಕಾವ್ಯ ವಿವಾಹಿತಳಾಗಿದ್ದು, ಹಿರಿಯ ಮಗ ಕಾರ್ತಿಕ್ ಮಂಗಳೂರಿನ ಮಾಲ್ ಒಂದರಲ್ಲಿ ಕೆಲಸಕ್ಕಿದ್ದಾನೆ. ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಎಸಿಪಿ ದಿನಕರ ಶೆಟ್ಟಿ, ಮಹಾಬಲ ಶೆಟ್ಟಿ ನೇತೃತ್ವದ ವಿಧಿ ವಿಜ್ಞಾನ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

” Ye perfect hai ! ” ನೋಟ್​ ಮೇಲೆ ಶಿವಾಜಿ ಚಿತ್ರ ಪ್ರಿಂಟ್​ ಮಾಡುವಂತೆ ಬಿಜೆಪಿಯ ರಾಣೆ ಹೊಸ ಸಲಹೆ

Next Post

ಮಂಗಳೂರಿನಲ್ಲಿ ಗೋ ಹಂತಕರ ವಿರುದ್ಧ ಯೋಗಿ ಅಸ್ತ್ರ ಪ್ರಯೋಗ, ಆಸ್ತಿ ಮುಟ್ಟುಗೋಲು

Related Posts

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,
ಕ್ರೈಮ್ ನ್ಯೂಸ್

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
70
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
48
Next Post
ಮಂಗಳೂರಿನಲ್ಲಿ ಗೋ ಹಂತಕರ ವಿರುದ್ಧ ಯೋಗಿ ಅಸ್ತ್ರ ಪ್ರಯೋಗ, ಆಸ್ತಿ ಮುಟ್ಟುಗೋಲು

ಮಂಗಳೂರಿನಲ್ಲಿ ಗೋ ಹಂತಕರ ವಿರುದ್ಧ ಯೋಗಿ ಅಸ್ತ್ರ ಪ್ರಯೋಗ, ಆಸ್ತಿ ಮುಟ್ಟುಗೋಲು

Discussion about this post

Recent News

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
46
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d