• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವೀರನಾರಾಯಣ ದೇವರ ಬಿಂಬದ ಬಾಲಾಲಯದಲ್ಲಿ ಪ್ರತಿಷ್ಠೆಯ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು.

Coastal Times by Coastal Times
December 27, 2021
in ಕರಾವಳಿ
ವೀರನಾರಾಯಣ ದೇವರ ಬಿಂಬದ  ಬಾಲಾಲಯದಲ್ಲಿ ಪ್ರತಿಷ್ಠೆಯ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ  ನಡೆಯಿತು.
65
VIEWS
WhatsappTelegramShare on FacebookShare on Twitter

ಡಿಸೆಂಬರ್ 24 ಶುಕ್ರವಾರದಂದು ಸಂಜೆ 5.30 ಕ್ಕೆ ಸಾಮೂಹಿಕ ಪ್ರಾರ್ಥನೆ ನಡೆಸಿ, ಸ್ಥಳ ಶುದ್ದಿ, ಸಪ್ತ ಶುದ್ದಿ, ವಾಸು ರಾಕ್ಷೋಘ್ನ ಹಾಗೂ ದಿಕ್ಪಾಲಕ ಬಲಿ ನಡೆಸಲಾಯಿತು.

ಮರುದಿನ ಶ್ರೀ ವೀರನಾರಾಯಣ ದೇವರ ಬಿಂಬ ಬಾಲಾಲಯದಲ್ಲಿ ಪ್ರತಿಷ್ಠೆಯ ಪೂರ್ವಭಾವಿಯಾಗಿ ಡಿಸೆಂಬರ್ 25 ರಂದು ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಜರಗುವ ಭಜನಾ ಕಾರ್ಯಕ್ರಮ, ಸಾಮೂಹಿಕ ಹರಿನಾಮ ಸಂಕೀರ್ತನೆ ಯನ್ನು ಮಾಣಿಲದ ಶ್ರೀಧಾಮದ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿಯವರು ಕ್ಷೇತ್ರದ ದೇವರನ್ನು ಪ್ರಾರ್ಥಿಸಿ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬೆಳಿಗ್ಗೆ ದೇವಸ್ಥಾನದ ತಂತ್ರಿ ಗಳಾಗಿರುವ ಅನಂತ ಉಪಾಧ್ಯಾಯರು ಅವರ ಮಾರ್ಗದರ್ಶನದಂತೆ ಪ್ರಧಾನ ಅರ್ಚಕರು ಜನಾರ್ಧನ್ ಭಟ್ ಅವರು ಶ್ರೀದೇವರಿಗೆ ಪುಣ್ಯಾಹ ಬಿಂಬ ಶುದ್ದಿ ಕಲಶ, ಪ್ರಾಯಶ್ಚಿತ ಹೋಮ, ಶಾಂತಿ ಹೋಮ, ಕಲಶಾಭಿಷೇಕ ಪೂಜೆ ಹಾಗೂ ವಿಶೇಷ ಪೂಜೆ ನಡೆಸಿದರು. ಕಾರ್ಯಕ್ರಮದಲ್ಲಿ ಬೆಳಿಗ್ಗಿನಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಸಂಜೆ 5 ಘಂಟೆಯಿಂದ 49 ಕಲಶ – ಅಧಿವಾಸ ಹೋಮ, ವಾಸು ರಾಕ್ಷೋಘ್ನ ಬಲಿ ನಡೆಯಿತು. ಹರಿನಾಮ ಸಂಕೀರ್ತನೆಗೆ ಮಂಗಳ ಹಾಡಿದ ನಂತರ ಲೋಕ ಕಲ್ಯಾಣಾರ್ಥವಾಗಿ ಹಾಗೂ ಚೈತನ್ಯ ವೃದ್ದಿಗಾಗಿ ’ಓಂ ಶ್ರೀ ಭಗವತೇ ವಾಸುದೇವಾಯ’ ಎಂದು ದೇವನಾಮ ಜಪಿಸುತ್ತಾ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಳಕ್ಕೆ ಪ್ರದಕ್ಷಿಣೆ ಬಂದರು. ನಂತರ ತಡರಾತ್ರಿ ಮಹಾ ಕಾರ್ತಿಕ ಪೂಜೆ , ಮಹಾ ಮಂಗಳಾರತಿ ನಡೆಸಿ, ಪ್ರಸಾದ ವಿತರಣೆ ಮಾಡಲಾಯಿತು.

ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನಿನ್ನೆ ಶ್ರೀ ವೀರನಾರಾಯಣ ದೇವರ ಬಿಂಬ ಬಾಲಾಲಯದಲ್ಲಿ ಪ್ರತಿಷ್ಠೆಯು ಬೆಳಗ್ಗೆ 10.09 ಕ್ಕೆ ಒದಗಿದ ಕುಂಭ ಲಗ್ನ ಸುಮೂಹೂರ್ತದಲ್ಲಿ ಮಾಣಿಲದ ಶ್ರೀಧಾಮದ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿಯವರು ಉಪಸ್ಥಿತಿಯಲ್ಲಿ ಅಪಾರ ಭಕ್ತರ ಕೂಡುವಿಕೆಯಲ್ಲಿ ನಡೆಯಿತು. ಬೆಳಿಗ್ಗೆ ದೇವಸ್ಥಾನದ ತಂತ್ರಿ ಗಳ ಮಾರ್ಗದರ್ಶನದಂತೆ ಪ್ರಧಾನ ಅರ್ಚಕರು ಶ್ರೀದೇವರಿಗೆ ವಿಶೇಷ ಪೂಜೆ ಶ್ರೀ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠೆಯನ್ನು ನಡೆಸಿದರು. ದೇವರಿಗೆ ಕಲಶಾಭಿಷೇಕ, ಪ್ರಾರ್ಥನೆ, ಬಿಂಬ ಹಾಗೂ ಪೀಠ ಉದ್ವಾಸನೆ, ಗಣಪತಿ ಹೋಮ, ಬಾಲಾಲಯದಲ್ಲಿ ಪೀಠ ಹಾಗೂ ಬಿಂಬ ಪ್ರತಿಷ್ಠಾಪನೆ ಹಾಗೂ ಇನ್ನಿತರ ಪೂಜಾ ವಿಧಿ ವಿಧಾನಗಳು ನಡೆಯಿತು.

ತದನಂತರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು, ಮುಂಬೈ ಹಾಗೂ ವಿವಿಧ ನಗರಗಳಿಂದ ಸಹಸ್ರಾರು ಭಕ್ತರು ಆಗಮಿಸಿ ಕರಸೇವೆಯಲ್ಲಿ ಪಾಲ್ಗೊಂಡು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಪ್ರಾರಂಭಗೊಳಿಸಿದರು. ಗರ್ಭಗುಡಿ, ಸುತ್ತು ಪೌಳಿಯನ್ನು ವಿಸರ್ಜಿಸುವ ಕಾರ್ಯವು ವಿಧಿವತ್ತಾಗಿ ನಡೆಯಿತು.

ಈ ಕಾರ್ಯಕ್ರಮಗಳ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ದೇವಸ್ಥಾನದ ಸೇವಾ ಸಮಿತಿ, ದೇವಳದ ಜೀರ್ಣೋದ್ಧಾರ ಸಮಿತಿ, ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ , ಶ್ರೀ ವೀರನಾರಾಯಣ ಮಹಿಳಾ ಮಂಡಳಿ, ದ.ಕ. ಜಿಲ್ಲಾ ಮೂಲ್ಯರ ಯಾನೆ ಮಾತೃ ಸಂಘ, ಮಹಿಳಾ ಮಂಡಳಿ, ಸೇವಾದಳ, ವಿವಿಧ ನಗರಗಳ ಕುಲಾಲ ಸಮಾಜದ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಮಸ್ತ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೈ ಜೋಡಿಸಿ, ಕರಸೇವೆಯನ್ನು ನಾಭೂತೋ: ನಾ ಭವಿಷ್ಯತಿ:ಎಂಬoತೆ ಯಶಸ್ವಿಯಾಗಿ ನಡೆಸಿ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣಿಭೂತರಾದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫಳ್ನೀರ್ ಎಂಟು ಅಡಿ ಎತ್ತರದಿಂದ ಬಿದ್ದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್

Next Post

ಮಂಗಳೂರು : ಝಾರಾ ಚಾರಿಟೇಬಲ್ ಫೌಂಡೇಶನ್ ನಿಂದ ಸರ್ವ ಧರ್ಮೀಯರ 15 ಜೋಡಿಗಳ ಸಾಮೂಹಿಕ ವಿವಾಹ

Related Posts

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು
ಕರಾವಳಿ

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
47
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು
ಕರಾವಳಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

July 11, 2025
145
Next Post
ಮಂಗಳೂರು : ಝಾರಾ ಚಾರಿಟೇಬಲ್ ಫೌಂಡೇಶನ್ ನಿಂದ ಸರ್ವ ಧರ್ಮೀಯರ 15 ಜೋಡಿಗಳ ಸಾಮೂಹಿಕ ವಿವಾಹ

ಮಂಗಳೂರು : ಝಾರಾ ಚಾರಿಟೇಬಲ್ ಫೌಂಡೇಶನ್ ನಿಂದ ಸರ್ವ ಧರ್ಮೀಯರ 15 ಜೋಡಿಗಳ ಸಾಮೂಹಿಕ ವಿವಾಹ

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
25
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d