ಮಂಗಳೂರು, ಜ.28: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಾನೆ. ಹೀಗಾಗಿ ಉದ್ರಿಕ್ತರಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಗರ ಠಾಣೆ ಎದುರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಡಬ ಮೂಲದ ಶಾಕೀರ್ ಎಂಬಾತ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ಶಾಕೀರ್ನನ್ನ ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಮತ್ತೊಂದೆಡೆ ಆಕ್ರೋಶಗೊಂಡಿರುವ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆರೋಪಿ ಶಾಕೀರ್ನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಠಾಣೆಯ ಎದುರು ನೂರಾರು ಹಿಂದೂ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಪುತ್ತಿಲ ಸ್ಥಳಕ್ಕಾಗಮಿಸಿ ಯುವಕರ ಸಮಾಧಾನ ಪಡಿಸಿದರು. ಸದ್ಯ ಆರೋಪಿ ಶಾಕೀರ್ನನ್ನು ಬಂಧಿಸಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಗುಂಪು ಚದುರಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post