• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮದ್ಯಪಾನ ಮಾಡಿ ಅಪಘಾತ ಸಾವು ಸಂಭವಿಸಿದರೆ ಕೊಲೆಗೆ ಸಮಾನವೆಂದು ಪರಿಗಣಿಸಿ ಕೇಸು ; ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್

Coastal Times by Coastal Times
January 28, 2026
in ಕರಾವಳಿ
ಮದ್ಯಪಾನ ಮಾಡಿ ಅಪಘಾತ ಸಾವು ಸಂಭವಿಸಿದರೆ ಕೊಲೆಗೆ ಸಮಾನವೆಂದು ಪರಿಗಣಿಸಿ ಕೇಸು ; ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್
37
VIEWS
WhatsappTelegramShare on FacebookShare on Twitter

ಮಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಸಲುವಾಗಿ ನಗರದ ಪುರಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಮಿಷನರ್ ಸುಧೀರ್ ರೆಡ್ಡಿ ಮಾತನಾಡಿದರು. ಅಪ್ರಾಪ್ತರಿಗೆ ವಾಹನಗಳನ್ನು ಕೊಡಿಸುವುದು, ಕುಡಿದು ವಾಹನ ಚಲಾಯಿಸುವುದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಕಠಿಣ ಕ್ರಮ ಜರುಗಿಸಲಿದ್ದೇವೆ. ಇಷ್ಟೆಲ್ಲ ರಸ್ತೆ ಸುರಕ್ಷೆ ಬಗ್ಗೆ ಜಾಗೃತಿ ಕಾರ್ಯಕ್ರಮ ಮಾಡಿದರೂ ಜನರು ನಿಯಮಗಳನ್ನು ಪಾಲಿಸುತ್ತಿಲ್ಲ. ಮಂಗಳೂರು ನಗರ ವ್ಯಾಪ್ತಿಯಲ್ಲೇ 2025ರಲ್ಲಿ 171 ರಸ್ತೆ ಅಪಘಾತಗಳಾಗಿದ್ದು, ಇದರಲ್ಲಿ 25 ಕೇಸುಗಳು ಅಪ್ರಾಪ್ತರು ವಾಹನ ಚಲಾಯಿಸಿದ್ದರಿಂದ ಆಗಿವೆ. ಉಳಿದುದರಲ್ಲಿ ಹೆಚ್ಚಿನ ಪ್ರಕರಣಗಳು ಕುಡಿದು ವಾಹನ ಚಲಾಯಿಸಿದ್ದರಿಂದ ಆಗಿರುವಂಥವು. ಈ ರೀತಿಯ ಅಪಘಾತಗಳು ಹೆಚ್ಚುತ್ತಿರುವ ಕಾರಣದಿಂದ ಟ್ರಾಫಿಕ್ ಪೊಲೀಸರಿಗೆ ಕೊಲೆಗೆ ಸಮಾನ ಎನ್ನುವಂತಹ ಪ್ರಕರಣ ದಾಖಲಿಸಲು ಸೂಚಿಸಿದ್ದೇನೆ ಎಂದರು.

ಮಂಗಳೂರಿನಲ್ಲಿ 169 ಅಪಘಾತ ಪ್ರಕರಣಗಳು ನಿರ್ಲಕ್ಷ್ಯದಿಂದಲೇ ಆಗಿರುವಂಥವು. ಒಂದೆರಡು ಕೇಸುಗಳು ಮಾತ್ರ ರಸ್ತೆ ಗುಂಡಿ ಮತ್ತಿತರ ಕಾರಣಕ್ಕೆ ಆಗಿರಬಹುದು. ಆದರೆ ಅಪಘಾತಗಳಿಗೆ ರಸ್ತೆ ಗುಂಡಿ, ಆಡಳಿತವನ್ನು ಮಾತ್ರ ದೂಷಣೆ ಮಾಡುತ್ತಾರೆ. ಯಾರು ಕೂಡ ವಾಹನ ಚಲಾವಣೆಯ ನಿರ್ಲಕ್ಷ್ಯದಿಂದ ಆಗಿರುವುದೆಂದು ಹೇಳುವುದಿಲ್ಲ. ವಾಹನ ಚಲಾವಣೆ ವೇಳೆ ಗಂಭೀರ ವಹಿಸುವುದಿಲ್ಲ ಎಂದು ಹೇಳಿದರು.

ಇಲ್ಲಿ ಕಮ್ಯುನಲ್ ಅಥವಾ ರಾಜಕೀಯ ಕಾರಣಕ್ಕೆ ಕೊಲೆಗಳಾದರೆ ಮಾತ್ರ ಸೀರಿಯಸ್ ಆಗುತ್ತಾರೆ. ಅಪಘಾತಗಳಿಂದ ಸಾವು ಆದಲ್ಲಿ ಅದನ್ನು ಗಂಭೀರ ವಹಿಸುವುದಿಲ್ಲ. ಕೆಲವೊಮ್ಮೆ ಅದನ್ನು ಕಮ್ಯುನಲ್ ಏಂಗಲ್ ನಲ್ಲಿ ನೋಡಲು ಯತ್ನಿಸುತ್ತಾರೆ. ಇದನ್ನು ಸಹಿಸಲಾಗದು ಎಂದು ಹೇಳಿದ ಕಮಿಷನರ್ ರೆಡ್ಡಿ, ರಸ್ತೆ ಅಪಘಾತವನ್ನು ತಪ್ಪಿಸುವುದು ಕೇವಲ ಪೊಲೀಸರ ಕೆಲಸ ಅಲ್ಲ, ಅದು ಪ್ರತಿ ನಾಗರಿಕನ ಜವಾಬ್ದಾರಿ. ಪ್ರತಿ ವಾಹನದ ಚಾಲಕನೂ ನಾವು ಎಚ್ಚರದಿಂದ ವಾಹನ ಚಲಾಯಿಸಿದಲ್ಲಿ ಬೇರೆಯವರು ತಪ್ಪು ಮಾಡಿದರೂ ನಮಗೇನೂ ಆಗುವುದಿಲ್ಲ ಎಂಬ ಎಚ್ಚರದಲ್ಲಿ ಇರಬೇಕು ಎಂದು ಸಲಹೆ ನೀಡಿದರು. ಎಲ್ಲ ನಾಗರಿಕರು ಕೂಡ ಅವರಾಗಿಯೇ ನಮ್ಮ ಕರ್ತವ್ಯ, ಜವಾಬ್ದಾರಿಗಳೇನು ಅನ್ನುವುದನ್ನು ಅರಿತು ಅಪಘಾತಗಳೂ ಆಗುವುದಿಲ್ಲ, ಕಮ್ಯುನಲ್ ರೀತಿಯ ತೊಂದರೆಗಳೂ ಆಗುವುದಿಲ್ಲ. ನಾವು ಆ ದಿನಕ್ಕಾಗಿ ಕಾಯುತ್ತಿದ್ದೇವೆ ಎಂದು ಸುಧೀರ್ ರೆಡ್ಡಿ ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಳು ರಂಗಭೂಮಿಯ ಖ್ಯಾತ ನಟ, ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ನಾನು ಮನೆಯಿಂದ ಹೊರ ಹೋದಾಗ ಮನೆಯಲ್ಲಿ ನನ್ನ ಕುಟುಂಬ ಕಾಯುತ್ತಿರುತ್ತದೆ’ ಎಂಬ ಜಾಗೃತ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಬಂದಾಗ ನಿರ್ಲಕ್ಷ್ಯದ ಅಪಘಾತಗಳನ್ನು ತಡೆಯಬಹುದು ಎಂದರು.

ಖ್ಯಾತ ನ್ಯೂರೋ ಸರ್ಜನ್ ಡಾ.ಅರ್ಜುನ್ ಶೆಟ್ಟಿ ಮಾತನಾಡಿ, ನಮ್ಮ ವಾಹನದಲ್ಲಿ ಇತರರನ್ನು ಕರೆದುಕೊಂಡು ಹೋಗುವಾಗ, ನಮ್ಮ ವಾಹನವನ್ನು ಬೇರೆಯವರಿಗೆ ನೀಡುವಾಗ ಸಂಚಾರಿ ನಿಯಮಗಳ ಪಾಲನೆಯನ್ನು ಮಾಡಿದರೆ, ಅಪಘಾತಗಳಿಂದಾಗುವ ಸಾವಿನ ಜತೆಗೆ ಅಪಘಾತಕ್ಕೆ ಈಡಾದವರು ಅನುಭವಿಸುವ ನೋವು ಹಾಗೂ ಕುಟುಂಬ ಪಡುವ ವೇದನೆಯನ್ನು ತಪ್ಪಿಸಬಹುದು ಎಂದರು.

ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೈಬುನ್ನಿಸಾ ಮಾತನಾಡಿ, ದೇಶದಲ್ಲಿ 2025ರಲ್ಲಿ ಸಂಭವಿಸಿದ 4.5 ಲಕ್ಷ ಅಪಘಾತಗಳಲ್ಲಿ 1.60 ಲಕ್ಷ ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಶೇ. 55ರಷ್ಟು ಮಂದಿ 18 ವರ್ಷದಿಂದ 35 ವರ್ಷದೊಳಗಿನವರು ಎಂಬುದು ಗಮನಾರ್ಹ . ಮಂಗಳೂರಿನಲ್ಲಿ 600ಕ್ಕೂ ಅಧಿಕ ಪಾನಮತ್ತರಾಗಿ ವಾಹನ ಚಲಾಯಿಸಿರುವುದು ಪತ್ತೆಯಾಗಿದೆ. ಸಂಚಾರಿ ನಿಯಮ ಪಾಲನೆಯೇ ಜೀವನ ರಕ್ಷೆ ಎಂಬುದನ್ನು ಪ್ರತಿಯೊಬ್ಬರು ಅರಿತುಕೊಳ್ಳುವುದು ಬಹು ಮುಖ್ಯ ಎಂದರು.

ವೇದಿಕೆಯಲ್ಲಿ ಡಿಸಿಪಿಗಳಾದ ಮಿಥುನ್ ಕುಮಾರ್, ಪಿ ಉಮೇಶ್, ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಎಸಿಪಿಗಳಾದ ಗೀತಾ ಕಲುಕರ್ಣಿ, ವಿಜಯ ಕಾಂತಿ, ಇನ್ನಿತರರು ಉಪಸ್ಥಿತರಿದ್ದರು. ಎಸಿಪಿ ನಜ್ಮಾ ಫಾರೂಕಿ ಸ್ವಾಗತಿಸಿದರು. ಆರ್‌ಜೆ ಅನುರಾಗ್ ಕಾರ್ಯಕ್ರಮ ನಿರೂಪಿಸಿದರು.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

Next Post

ಮೈಸೂರು: ಫೆನಾಯಿಲ್ ಘಟಕ ಹೆಸರಲ್ಲಿ ಡ್ರಗ್ಸ್ ತಯಾರಿಕೆ ಶಂಕೆ, ದೆಹಲಿ ಪೊಲೀಸರು ದಾಳಿ! ಡ್ರಗ್ಸ್ ಸಿಕ್ಕಿಲ್ಲ ಎಂದ ಕಮಿಷನರ್

Related Posts

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು
ಕರಾವಳಿ

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
20
ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ
ಕರಾವಳಿ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
39
Next Post
ಮೈಸೂರು: ಫೆನಾಯಿಲ್ ಘಟಕ ಹೆಸರಲ್ಲಿ ಡ್ರಗ್ಸ್ ತಯಾರಿಕೆ ಶಂಕೆ, ದೆಹಲಿ ಪೊಲೀಸರು ದಾಳಿ! ಡ್ರಗ್ಸ್ ಸಿಕ್ಕಿಲ್ಲ ಎಂದ ಕಮಿಷನರ್

ಮೈಸೂರು: ಫೆನಾಯಿಲ್ ಘಟಕ ಹೆಸರಲ್ಲಿ ಡ್ರಗ್ಸ್ ತಯಾರಿಕೆ ಶಂಕೆ, ದೆಹಲಿ ಪೊಲೀಸರು ದಾಳಿ! ಡ್ರಗ್ಸ್ ಸಿಕ್ಕಿಲ್ಲ ಎಂದ ಕಮಿಷನರ್

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d