ಮಂಗಳೂರು: ಬಾಲಾಂಜನೇಯ ಜಿಮ್ನಾಶಿಯಂನ 75ನೇ ವರ್ಷಾಚರಣೆಯ ಅಂಗವಾಗಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಆಯೋಜಿಸಿರುವ 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್-2022 ಸ್ಪರ್ಧೆಗೆ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಚಾಲನೆ ನೀಡಲಾಯಿತು.
ದೇಶದ ವಿವಿಧ ಭಾಗಗಳ 500ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದ ಈ ಸ್ಪರ್ಧೆಗೆ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಚಾಲನೆ ನೀಡಿದರು. ಪವರ್ ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ರಾಜೇಶ್ ತಿವಾರಿ ಕಳಶ ಅನಾವರಣಗೊಳಿಸಿದರು. ಉದ್ಯಮಿ ಪ್ರದೀಪ್ ಶೆಟ್ಟಿ ಪವರ್ ಲಿಫ್ಟಿಂಗ್ ಬಾರನ್ನು ತಳ್ಳುವ ಮೂಲಕ ಚಾಲನೆ ನೀಡಿದರು.
ಮುಡಾ ಮಾಜಿ ಅಧ್ಯಕ್ಷ ತೇಜೋಮಯ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಸತೀಶ್ ಕುಮಾರ್ ಕುದ್ರೋಳಿ, ಮಾಜಿ ಮೇಯರ್ ಪುರಂದರ ದಾಸ್ ಕೂಳೂರು, ಬಾಲಾಂಜನೇಯ ಜಿಮ್ನಾಶಿಯಂನ ಅಧ್ಯಕ್ಷ ಉಮೇಶ್ ಗಟ್ಟಿ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ನ ಖಜಾಂಚಿ ಜಯರಾಂ ಎಂ., ಮಧುಚಂದ್ರ, ಅನುರಾಗ್ ಬಂಗೇರ ಇದ್ದರು.