ಮಂಗಳೂರು : ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ವಿಭಿನ್ನ ಪ್ರಯೋಗವಾಗಿ ಮೂಡಿಬರುತ್ತಿರುವ “ವಾದಿರಾಜ ವಾಲಗ ಮಂಡಳಿ” ಸಿನಿಮಾದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ನಡೆಯುತ್ತಿವೆ. “ಎಮ್.ಎನ್.ಆರ್.ಪ್ರೊಡಕ್ಷನ್” ನಲ್ಲಿ ನಿರ್ಮಾಣವಾಗುತ್ತಿರುವ ಹಾಸ್ಯಮಯ ಕನ್ನಡ ಚಲನಚಿತ್ರ ವಿಭಿನ್ನ ಕಥಾಹಂದರ, ವಿಶಿಷ್ಟ ಶೀರ್ಷಿಕ ಹಾಗೂ ಕಲಾವಿದರ ಹೊಸ ಗೆಟಪ್ ಪುಮುಖ ಆಕರ್ಷಣೆಗಳಾಗಿವೆ. ಕನ್ನಡ ಚಿತ್ರರಂಗದಲ್ಲಿ ಹೊಸ ಪುಯೋಗಗಳು ಸದಾ ಸದಾ ಸ್ವಾಗತಾರ್ಹವಾಗಿದ್ದು, “ವಾದಿರಾಜ ವಾಲಗ ಮಂಡಳಿ” ಕೂಡ ಅದೇ ದಾರಿಯಲ್ಲಿ ಗಮನ ಸೆಳೆಯುತ್ತಿದೆ. ಹಾಗಾಗಿ ಸಿನಿಪ್ರೇಮಿಗಳಲ್ಲಿ ಈಗಾಗಲೇ ಕುತೂಹಲ ಹಾಗೂ ನಿರೀಕ್ಷೆಯನ್ನು ಹೆಚ್ಚಿಸಿದೆ ಎಂದು ಚಿತ್ರದ ನಿರ್ಮಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
“ವರಾಹ ರೂಪಂ'” ಹಾಡಿನ ಖ್ಯಾತಿಯ ಶಶಿರಾಜ್ ಕಾವೂರು ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರು ಕಥೆ, ಚಿತ್ರಕತೆ ಮತ್ತು ಸಂಭಾಷಣೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಈ ಸಿನಿಮಾ, ಸುಮಾರು 50 ದಿನಗಳ ಕಾಲ ಎರಡು ಹಂತಗಳಲ್ಲಿ ಚಿತ್ರೀಕರಣ ಮುಗಿಸಿದೆ. ಈಗ ಸಂಕಲನ, ಹಿನ್ನೆಲೆ ಸಂಗೀತ ಮತ್ತು ಡಬ್ಬಿಂಗ್ ಕೆಲಸಗಳಲ್ಲಿ ಶಶಿರಾಜ್ ನಿರತರಾಗಿದ್ದಾರೆ. ಈ ಸಿನಿಮಾದಲ್ಲಿ ಜಯಪ್ರಕಾಶ್ ತುಂಬೆ ಸಹ ನಿರ್ಮಾಪಕರಾದರೆ, ಸಂತೋಷ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕರಾಗಿ ಮತ್ತು ರಾಜೇಶ್ ಕುಡ ಮತ್ತು ಕಾರ್ತಿಕ್ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಹಕರಿಸಿದ್ದಾರೆ.
ಚಿತ್ರದಲ್ಲಿ ಹಾಸ್ಯ, ಭಾವನೆ ಹಾಗೂ ಸಾಮಾಜಿಕ ಅಂಶಗಳನ್ನು ಸಂಯೋಜಿಸಿ ಸಂಪೂರ್ಣ ಮನರಂಜನಾ ಪ್ಯಾಕೇಜ್ ರೂಪಿಸಲಾಗಿದೆ. ಕುಟುಂಬ ಸಮೇತ ವೀಕ್ಷಿಸಬಹುದಾದ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಹೇಳಿದರು.
ಕರಾವಳಿಯ ಜನಪ್ರಿಯ ಕಲಾವಿದರಾದ ನವೀನ್ ಡಿ. ಪಡೀಲ್, ಪ್ರಕಾಶ್ ತೂಮಿನಾಡು, ಮೈಮ್ ರಾಮದಾಸ್, ದೀಪಕ್ ರೈ ಪಾಣಾಜೆ ,ಶೋಭರಾಜ್ ಪಾವೂರು, ಚೇತನ್ ರೈ.ಮಾಣಿ, ಪುಷ್ಪರಾಜ್ ಬೊಳ್ಳಾರ್, ಗೋಪಿನಾಥ್ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ವೇದಾಂತ ಮತ್ತು ಅಥರ್ವ ಪ್ರಕಾಶ್ ನಾಯಕ ನಟರಾಗಿ ಅಭಿನಯಿಸಿದ್ದು, ತನ್ವಿ ರಾವ್ ಹಾಗೂ ವೇನ್ಯ ರೈ ನಾಯಕಿಯರಾಗಿ ನಟಿಸಿದ್ದಾರೆ. ಲಕ್ಷ್ಮಣ ಕುಮಾರ್ ಮಲ್ಲೂರು ಸೇರಿದಂತೆ ಹಲವು ಅನುಭವಿ ಕಲಾವಿದರು ಚಿತ್ರದಲ್ಲಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಭರ್ಜರಿ ಬಿಡುಗಡೆ: ಕರಾವಳಿ ಭಾಷೆಯ ನೈಜತೆಯನ್ನು ಉಳಿಸಿಕೊಂಡು, ಅದನ್ನು ಎಲ್ಲಾ ವರ್ಗದ ಪ್ರೇಕ್ಷಕರಿಗೂ ಹತ್ತಿರವಾಗುವಂತೆ “ವಾದಿರಾಜ ವಾಲಗ ಮಂಡಳಿ” ಸಿನಿಮಾ ಚಿತ್ರಿಕರಣಗೊಂಡಿದ್ದು, ಹಾಸ್ಯಮಯ ಆಗಸ್ಟ್ ತಿಂಗಳಲ್ಲಿ ಮೇಲೆ ಈಗಾಗಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಸಿನಿಪ್ರೇಮಿಗಳಲ್ಲಿ ಉತ್ತಮ ನಿರೀಕ್ಷೆ ನಿರ್ಮಾಣವಾಗಿದ್ದು, ಬಿಡುಗಡೆಯ ನಂತರ ಉತ್ತಮ ಪ್ರತಿಕ್ರಿಯೆ ಸಿಗುವ ವಿಶ್ವಾಸ ಚಿತ್ರತಂಡಕ್ಕಿದೆ.
ಪತ್ರಿಕಾಗೋಷ್ಠಿಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರು, ಮೇಘರಾಜ್, ವಾದಿರಾಜ ವಾಲಗ ಮಂಡಳಿ ಚಿತ್ರದ ನಿರ್ದೇಶಕ ಶಶಿರಾಜ್ ಕಾವೂರು, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಸಹ ನಿರ್ದೇಶಕ ಜಯಪ್ರಕಾಶ್ ತುಂಬೆ, ನಟ ಅರ್ಜುನ್ ವೇದಾಂತ್, ವೇನ್ಯ ರೈ, ಮೈಮ್ ರಾಮದಾಸ್, ರಾಜೇಶ್ ಕುಡ್ಲ, ಶೋಭಾರಾಜ್ ಪಾವೂರು, ಅಕ್ಷತ ವಿಟ್ಲ, ಗೋಪಿನಾಥ್ ಭಟ್ , ಚೇತನ್ ರೈ ಮಾಣಿ ಹಾಗೂ ಇನ್ನಿತೃರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post