ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ಸಂದರ್ಭ ಬಂದ್ಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನಾಯಕ ಶರಣ್ ಪಂಪ್ವೆಲ್ ಅವರನ್ನು ಮಂಗಳವಾರ ರಾತ್ರಿ ಕದ್ರಿ ಪೊಲೀಸರು ಬಂಧಿಸಿ, ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ ವೇಳೆ ಜಾಮೀನು ಮಂಜೂರು ಮಾಡಿದ್ದಾರೆ.
ಮಂಗಳವಾರ ರಾತ್ರಿ ನಗರದ ಬೋಂದೆಲ್ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಶರಣ್ ಪಂಪ್ವೆಲ್ ರನ್ನು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಬುಧವಾರಕ್ಕೆ (ಮೇ 28) ಮುಂದೂಡಿದರು.
ಜಿಲ್ಲಾದ್ಯಂತ ಬಂದ್ಗೆ ಕರೆ ನೀಡಿದ್ದ ಶರಣ್ ಪಂಪ್ವೆಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಎರಡು ನೋಟಿಸ್ಗಳನ್ನು ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲವಾದ್ದರಿಂದ ಶರಣ್ ಪಂಪ್ವೆಲ್ ಬಂಧಿಸಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಲಾಯಿತು. ಶರಣ್ ಪಂಪ್ವೆಲ್ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಕದ್ರಿ ಠಾಣೆ ಎದುರು ಜಮಾಯಿಸಿದರು. ಆದರೆ ಸೆಕ್ಷನ್ ಜಾರಿಯಲ್ಲಿರುವುದರಿಂದ ಹೆಚ್ಚು ಜನ ಸೇರದಂತೆ ತಿಳಿಸಿ ಅಲ್ಲಿದ್ದವರನ್ನು ಪೊಲೀಸರು ಚದುರಿಸಿದರು. ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಜಮಾಯಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post