• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ ವಿದೇಶಿಗರ ಪತ್ತೆಗೆ ವಿಶೇಷ ಸರ್ವೆ

Coastal Times by Coastal Times
June 28, 2022
in ಕರಾವಳಿ
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ ವಿದೇಶಿಗರ ಪತ್ತೆಗೆ ವಿಶೇಷ ಸರ್ವೆ
77
VIEWS
WhatsappTelegramShare on FacebookShare on Twitter

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗಾಗಿ ಪ್ರತಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ವಿಶೇಷ ಸರ್ವೆ ನಡೆಸಬೇಕು. ಅಗತ್ಯ ಬಿದ್ದರೆ ಅಂತಹ ವಿದೇಶಿಗರನ್ನು ಬಂಧಿಸುವಂತೆಯೂ ಸೂಚನೆ ನೀಡಿದ್ದೇನೆ’ ಎಂದು ರಾಜ್ಯದ ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಮಂಗಳೂರು ಪೊಲೀಸ್ ಕಮಿಷನರೇಟ್‌ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಡಿವೈಎಸ್‌ಪಿಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿದೇಶಿಗರು ಅಕ್ರಮವಾಗಿ ನೆಲೆಸಿರುವುದು ಇತ್ತೀಚೆಗೆ ಪತ್ತೆಯಾಗಿದೆ. ಅವರು ಇಲ್ಲಿನ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಮೊದಲಾದ ದಾಖಲೆಗಳನ್ನೂ ಮಾಡಿಸಿಕೊಂಡಿದ್ದರು. ಇಲ್ಲೂ ವಿಸಾ ಅವಧಿ ಮುಗಿದ ಬಳಿಕವು ನೆಲೆಸಿರುವವರು ಹಾಗೂ ಅಕ್ರಮವಾಗಿ ದೇಶದೊಳಗೆ ನುಸುಳಿರುವವರ ಮೇಲೆ ಕಣ್ಣಿಡಬೇಕಾಗಿದೆ’ ಎಂದರು. ‘ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಯಾವ ದೇಶದವರು, ಅವರ ಚಟುವಟಿಕೆಗಳೇನು ಎಂಬ ಬಗ್ಗೆಯೂ ಕಣ್ಣಿಡಬೇಕು. ಈ ವಿವರಗಳನ್ನು ಪ್ರತಿ ಠಾಣೆಯಲ್ಲಿ ಪ್ರತ್ಯೇಕ ರಿಜಿಸ್ಟರ್‌ನಲ್ಲಿ ದಾಖಲಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ. ಎರಡು ವಾರಗಳಲ್ಲಿ ಈ ಸರ್ವೆ ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ’ ಎಂದರು.

‘ರಾಜ್ಯದಲ್ಲಿ ಒಂದೇ ವರ್ಷದಲ್ಲಿ 100 ಪೊಲೀಸ್‌ ಠಾಣೆಗಳನ್ನು ನಿರ್ಮಿಸಲಾಗಿದೆ. ಇಲ್ಲೂ ಸ್ವಂತ ಜಾಗ ಹೊಂದಿರುವ ಕಡೆ ಪೊಲೀಸ್‌ ಠಾಣೆ ಕಟ್ಟಡ ನಿರ್ಮಿಸಲಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯಕ್ಕೆ ಪೊಲೀಸ್‌ ಠಾಣೆ ಕಟ್ಟಡ ಮಂಜೂರು ಮಾಡಿದ್ದು, ಟೆಂಡರ್‌ ಪ್ರಕ್ರಿಯೆ ಚಾಲ್ತಿಯಲ್ಲಿದೆ’ ಎಂದರು. ‘ಉಪಗ್ರಹ ಫೋನ್‌ ಬಳಕೆ ಪ್ರಕರಣಗಳ ತನಿಖೆಯನ್ನೂ ಕೂಲಂಕಷವಾಗಿ ನಡೆಸಲಾಗುತ್ತಿದೆ. ಕೆಲವೊಮ್ಮೆ ಸಮುದ್ರದ ನಡುವೆ ಉಪಗ್ರಹ ಪೋನ್‌ ಬಳಸಿದರೆ ಅಕ್ಷಾಂಶ ಮತ್ತು ರೇಖಾಂಶಗಳ ನಿಖರ ವಿವರಗಳು ಸಿಗುವುದಿಲ್ಲ. ಆಂತರಿಕ ಭದ್ರತೆಗೆ ಸಂಬಂಧಿಸಿದ ಕಣ್ಗಾವಲನ್ನು ಹೆಚ್ಚಿಸಿದ್ದೇವೆ. ಶಾಂತಿ ಮತ್ತು ಭದ್ರತೆ ಕಾಪಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಕ್ತಿಮೀರಿ ಕೆಲಸ ಮಾಡುತ್ತಿವೆ’ ಎಂದು ಗೃಹಸಚಿವರು ತಿಳಿಸಿದರು.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದ 1.82 ಕೋಟಿ ಮೌಲ್ಯದ ಮಾದಕ ದ್ರವ್ಯ ನಾಶ

Next Post

ಊಹಿಸಲೂ ಆಗದ ಬದಲಾವಣೆ: ಹಂಗಿದ್ದವರು ಹಿಂಗಾದ್ರು ಗಾಯಕ ಅದ್ನಾನ್ ಸಮಿ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
42
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಊಹಿಸಲೂ ಆಗದ ಬದಲಾವಣೆ: ಹಂಗಿದ್ದವರು ಹಿಂಗಾದ್ರು ಗಾಯಕ ಅದ್ನಾನ್ ಸಮಿ

ಊಹಿಸಲೂ ಆಗದ ಬದಲಾವಣೆ: ಹಂಗಿದ್ದವರು ಹಿಂಗಾದ್ರು ಗಾಯಕ ಅದ್ನಾನ್ ಸಮಿ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
42
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d