• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

Coastal Times by Coastal Times
June 28, 2025
in ಕ್ರೈಮ್ ನ್ಯೂಸ್
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
61
VIEWS
WhatsappTelegramShare on FacebookShare on Twitter

ಮಂಗಳೂರು : 12 ವರ್ಷಗಳ ಹಿಂದೆ ಉಳ್ಳಾಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ (ಜೂನ್ 30) ಪ್ರಕಟಿಸುವುದಾಗಿ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ತಿಳಿಸಿದೆ.

ಲೆನೆಟ್ ವೇಗಸ್, ಜೊಸ್ಸಿ ವೇಗಸ್ ಹಾಗೂ ಲಸ್ಸಿ ವೇಗಸ್‌ ಶಿಕ್ಷೆಗೊಳಗಾಗಲಿರುವ ಅಪರಾಧಿಗಳು. 2013ರಲ್ಲಿ ಅಂಗನವಾಡಿ ಕಾರ್ಯಕರ್ತೆ ಫಾತಿಮಾ ಎಂಬವರು ಮನೆ ಮನೆಗೆ ತೆರಳಿ ಮಕ್ಕಳ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಲೆನೆಟ್ ವೇಗಸ್‌ ಎಂಬವರ ಮನೆಯಲ್ಲಿ ಮಗುವೊಂದನ್ನು ಬೇರೆಯವರಿಂದ ಪಡೆದಿರುವ ಮಾಹಿತಿ ತಿಳಿದು ಬಂದಿತ್ತು. ಬಳಿಕ ಚೈಲ್ಡ್‌ಲೈನ್ ಸಂಸ್ಥೆಯವರು ಲೆನೆಟ್ ಮನೆಗೆ ತೆರಳಿ ಮಗುವಿನ ಕುರಿತು ವಿಚಾರಣೆ ಮಾಡಿದ್ದರು. ಈ ವೇಳೆ ಆಕೆ ಮಗು ತನ್ನದೇ ಎಂದು ಪ್ರತಿಪಾದಿಸಿದ್ದ ಲೆನೆಟ್, ತಾನು ಹೆತ್ತಿರುವ ಸಂಬಂಧ ಮಂಗಳೂರಿನ ನರ್ಸಿಂಗ್‌ ಹೋಂವೊಂದರ ಡಿಸ್ಟಾರ್ಜ್ ದಾಖಲೆಗಳನ್ನೂ ತೋರಿಸಿದ್ದಳು.

ಆದರೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ, ಮಗುವಿನ ನೈಜ ತಾಯಿಯನ್ನು ಪತ್ತೆ ಹಚ್ಚಿದ್ದರು. ಆ ಮಗು ಉತ್ತರ ಕರ್ನಾಟಕದ ಚೆನ್ನವ್ವ ಎಂಬವರದ್ದಾಗಿತ್ತು. ಕಟ್ಟಡದ ಕೆಲಸಕ್ಕೆ ಬಂದಿದ್ದ ಚೆನ್ನವ್ವ ಬಡತನದ ಹಿನ್ನೆಲೆಯಲ್ಲಿ ಮಗುವನ್ನು ಸುಮಾರು 20 ಸಾವಿರ ರೂ.ಗೆ ಲೆನೆಟ್‌ಗೆ ಮಾರಾಟ ಮಾಡಿದ್ದಳು ಎಂಬುದು ಗೊತ್ತಾಗಿತ್ತು.

ಆರೋಪಿಯನ್ನು ಬಲೆಗೆ ಬೀಳಿಸಿದ ಪೊಲೀಸರು: ಬಳಿಕ ಅಧಿಕಾರಿಗಳು ಅಂದಿನ ಪೊಲೀಸ್ ಕಮಿಷನರ್‌‌ಗೆ ಮಗುವಿನ ಮಾರಾಟದ ಬಗ್ಗೆ ಮಾಹಿತಿ ನೀಡಿದ್ದರು. ಪ್ರಕರಣ ಬಯಲು ಮಾಡಲು ಪೊಲೀಸ್ ಕಮಿಷನರ್‌ ಸಹಕಾರದೊಂದಿಗೆ ದುಬೈಯಲ್ಲಿರುವ ಮುಸ್ಲಿಂ ದಂಪತಿಗೆ ಮಗು ಬೇಕಾಗಿದೆ ಎಂದು ಲೆನೆಟ್​ಳನ್ನು ನಂಬಿಸಲಾಗಿತ್ತು. ಅದರಂತೆ, ತೊಕ್ಕೊಟ್ಟಿನ ವೈದ್ಯರೊಬ್ಬರ ಕ್ಲಿನಿಕ್‌ಗೆ ಮಗುವಿನ ಆರೋಗ್ಯ ತಪಾಸಣೆಗೆ ಬರಲಿಕ್ಕಿದೆ. ಹೆಲ್ತ್ ಚೆಕಪ್ ಆದ ಬಳಿಕ ಮಗುವನ್ನು ಮಾರಾಟ ಮಾಡುತ್ತೇನೆ, ಅಲ್ಲೇ ಹಣ ಕೊಟ್ಟು ಮಗುವನ್ನು ಖರೀದಿಸಿ ಎಂದು ಲೆನೆಟ್ ಹೇಳಿದ್ದಳು.

ಆದ್ದರಿಂದ ಕ್ಲಿನಿಕ್‌ನಿಂದಲೇ ಮಗುವನ್ನು ಖರೀದಿಸುವ ಕಾರ್ಯಾಚರಣೆ ನಡೆಸಲಾಯಿತು. ಪೊಲೀಸ್ ಕಮಿಷನರ್ ಸೂಚನೆ ಮೇರೆಗೆ ಪೊಲೀಸ್ ಕಾನ್‌ಸ್ಟೇಬಲ್ ಇರ್ಫಾನ್ ಕೂಡ ಕಾರ್ಯಾಚರಣೆಯ ಭಾಗವಾಗಿದ್ದರು. ಕೊನೆಗೆ 90 ಸಾವಿರ ರೂ. ಕೊಟ್ಟು ಮಗುವನ್ನು ಪಡೆದುಕೊಳ್ಳುವಷ್ಟರಲ್ಲಿ ಲೆನೆಟ್‌ಳನ್ನು ಅಲ್ಲೇ ಇದ್ದ ಪೊಲೀಸರು ಬಂಧಿಸಿ, ಆಕೆಯ ಬಳಿ ಇದ್ದ ಎಲ್ಲಾ ನಕಲಿ ಸರ್ಟಿಫಿಕೆಟ್‌ಗಳು, ಎಟಿಎಂ ಕಾರ್ಡ್‌ಗಳು, ದೆಹಲಿ ವಿಳಾಸದ ನಕಲಿ ವಿಸಿಟಿಂಗ್ ಕಾರ್ಡ್‌ಗಳು ಹಾಗೂ ಮಗುವಿನ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಯಿತು.

ಮಹಿಳೆ ಚೆನ್ನವ್ವಳನ್ನು ಪತ್ತೆ ಹಚ್ಚಿ ಆಕೆಯದ್ದೇ ಮಗುವೆಂದು ದಾಖಲೆಗಳ ಸಹಿತ ನಿರೂಪಿಸಿ ಎಫ್‌ಐಆ‌ರ್ ದಾಖಲಿಸಲಾಗಿತ್ತು. ಲೆನೆಟ್‌ಗೆ ಸಹಕರಿಸಿದ ಜೊಸ್ಸಿ ವೇಗಸ್, ಲಸ್ಸಿ ವೇಗಸ್ ಮೇಲೂ ಪ್ರಕರಣ ದಾಖಲಾಯಿತು. 2013ರಲ್ಲಿ ನಡೆದ ಈ ಪ್ರಕರಣದ ಶಿಕ್ಷೆಯ ತೀರ್ಪು ಗುರುವಾರ ಹೊರಬಿದ್ದಿದ್ದು, ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಗೊಳ್ಳಲಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

Next Post

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

Related Posts

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
41
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ
ಕ್ರೈಮ್ ನ್ಯೂಸ್

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
60
Next Post
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ 'ಹೀರೋ ವಿಡಾ ವಿಎಕ್ಸ್2' ಎಲೆಕ್ಟ್ರಿಕ್ ಸ್ಕೂಟರ್

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
41
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d