• About us
  • Contact us
  • Disclaimer
Friday, February 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ರೂಪದರ್ಶಿ ವಿದ್ಯಾಶ್ರೀ ಆತ್ಮಹತ್ಯೆ! ಜಿಮ್ ತರಬೇತುದಾರ ಅಕ್ಷಯ್ ಬಂಧನ

Coastal Times by Coastal Times
July 28, 2023
in ರಾಜ್ಯ
ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ರೂಪದರ್ಶಿ ವಿದ್ಯಾಶ್ರೀ ಆತ್ಮಹತ್ಯೆ! ಜಿಮ್ ತರಬೇತುದಾರ ಅಕ್ಷಯ್ ಬಂಧನ
60
VIEWS
WhatsappTelegramShare on FacebookShare on Twitter

ಬೆಂಗಳೂರು: ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೂಪದರ್ಶಿ ವಿದ್ಯಾಶ್ರೀ (25) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಜಿಮ್ ತರಬೇತುದಾರ ಅಕ್ಷಯ್‌ನನ್ನು (27) ಪೊಲೀಸರು ಬಂಧಿಸಿದ್ದಾರೆ.

ಮಾಡೆಲ್​ ಆತ್ಮಹತ್ಯೆ ಹಿಂದೆ ಫೇಸ್​ಬುಕ್ ಪ್ರಿಯಕರನಿಂದ ಲವ್​ ಸೆಕ್ಸ್​ ದೋಖಾ ಬೆಳಕಿಗೆ ಬಂದಿದೆ. 21/07/23ರಂದು ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ವಿದ್ಯಾಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಪ್ರಿಯಕರನೇ  ಕಾರಣ ಎನ್ನುವ ಅಂಶ ಡೈರಿ ಹೇಳುತ್ತಿದೆ. ಡೈರಿಯಲ್ಲಿ ಆತ್ಮಹತ್ಯೆಗೂ ಮುನ್ನ ವಿದ್ಯಾಶ್ರೀ ಡೈರಿಯಲ್ಲಿ ಡೆತ್​ ನೋಟ್​ ಬರೆದಿಟ್ಟಿದ್ದು, ತನ್ನ ಸಾವಿಗೆ ಪ್ರಿಯಕರ ಅಕ್ಷಯ್​ ಕಾರಣ ಎಂದು ಉಲ್ಲೇಖಿಸಿದ್ದಾರೆ.

ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್‌ನೋಟ್‌ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ಅಕ್ಷಯ್ ಹಾಗೂ ವಿದ್ಯಾಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರ ತನ್ನಿಂದ ದೂರ ಹೋಗುತ್ತಿದ್ದಾನೆ ಎಂದು  ಅನುಮಾನಗೊಂಡ ವಿದ್ಯಾಶ್ರೀ ಆತ್ಮಹತ್ಯೆ ಹಾದಿ ಹಿಡಿದಿದ್ದಾಳೆ. ಯುವತಿ ಮನೆಯಲ್ಲಿ ಬುಧವಾರ ಡೆತ್‌ನೋಟ್ ಪತ್ತೆಯಾದ ಬೆನ್ನಲ್ಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಂತರ ಆರೋಪಿ ಅಕ್ಷಯ್‌ನನ್ನ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಸದ್ಯ ಸೋಲದೇವನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಾಡೆಲ್ ಸಹ ಆಗಿದ್ದ ವಿದ್ಯಾಶ್ರೀ ಮತ್ತು ಅಕ್ಷಯ್ ಕಳೆದ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ಅಕ್ಷಯ್ ವಿದ್ಯಾ ಬಳಿ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾಶ್ರೀ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಅಕ್ಷಯ್​ ಕಾರಣ ಅವನು ನನ್ನ ನಾಯಿ ಥರ ಟ್ರೀಟ್​ ಮಾಡ್ತಾ ಇದ್ದಾನೆ. ನನಗೆ ಕೊಡಬೇಕಾದ 1.76 ಲಕ್ಷ ದುಡ್ಡು ಕೇಳಿದಾರೆ ನನಗೆ ನನ್ನ ಪ್ಯಾಮಿಲಿಗೆ ಕೆಟ್ಟ ಕೆಟ್ಟ ಮಾತಲ್ಲಿ ಬೈದು ಪೋನ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದಾನೆ. ನನ್ನ ಡಿಪ್ರೆಷನ್​ಗೆ ಅಡಿಕ್ಟ್​ ಮಾಡಿದ್ದಾನೆ. ಹೀಗಾಗಿ ನನಗೆ ಬದುಕಲು ಆಗುತ್ತಿಲ್ಲ. ಡೇ ಬೈ ಡೇ ನನಗೆ ತುಂಬಾ ಸ್ಟ್ರೈನ್ ಆಗುತ್ತಿದೆ. ಅಮ್ಮ ಗುರು ಮನು I am Sorry ದಯವಿಟ್ಟು ನನ್ನ ಕ್ಷಮಿಸಿ. ಎಲ್ಲಾ ಹುಡುಗಿಯಲ್ಲಿ ವಿನಂತಿ ದಯವಿಟ್ಟು ಯಾರು ಲವ್​ ಮಾಡಬೇಡಿ. Good bye this World ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಎಂಸಿಎ ಬಳಿಕ ಮಾಡೆಲ್ ಜೊತೆಗೆ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ವಿದ್ಯಾಶ್ರೀಗೆ ಫೇಸ್ಬುಕ್​ನಲ್ಲಿ ಅಭಿಮಾನಿಯ ಥರ ಜಿಮ್ ಕೋಚ್ ಅಕ್ಷಯ್​ ಪರಿಚಯವಾಗಿದ್ದ. ಬಳಿಕ ಪರಿಚಯ ಪ್ರೀತಿಯಾಗಿ ಮಾರ್ಪಟ್ಟಿತ್ತು. ನಂತರ ಇಬ್ಬರು ಪರಸ್ಪರ ಪ್ರೀತಿಸಿದ್ದು, ಹಲವೆಡೆ ಜೊತೆ ಜೊತೆಯಾಗಿ ಸುತ್ತಾಡಿದ್ದರು. ಅಲ್ಲದೇ ಅಕ್ಷಯ್ ಮಾಡೆಲ್ ಬಳಿ ಸಾಕಷ್ಟು ಹಣ ಪೀಕಿದ್ದ. ಬಳಿಕ ಅದೇನಾಯ್ತೊ ಏನೋ ಮೂರು ತಿಂಗಳ ಹಿಂದೆ ಪ್ರೀತಿಯಲ್ಲಿ ಬಿರುಕು ಉಂಟಾಗಿದ್ದು, ಅಕ್ಷಯ್ ಫೋನ್ ಕಾಲ್ ಗೂ ಸಿಗದೆ ನಾಟ್ ರೀಚಬಲ್ ಆಗಿದ್ದ. ಇದರಿಂದ ಮಾನಸಿಕವಾಗಿ ನೊಂದು ಮಾಡೆಲ್‌ ವಿದ್ಯಾಶ್ರೀ ಜುಲೈ 21ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಮೀಸ್ ಆಂಧ್ರ ಕಾಂಪಿಟೇಷನ್ ನಲ್ಲಿ ವಿಜೇತಳಾಗಿದ್ದ ಮೃತ ವಿದ್ಯಾಶ್ರೀ ಬಸವೇಶ್ವರ ನಗರದಲ್ಲಿ ಜೀಮ್ ಟ್ರೈನರ್ ಆಗಿದ್ದ ಆರೋಪಿ ಅಕ್ಷಯ್‌ಗೆ ಹಣ ಕೊಟ್ಟಿದ್ದರ ಬಗ್ಗೆ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಣಿಪುರ| ನ್ಯಾಯ ಸಿಗುವವರೆಗೆ ಹೋರಾಟ, ಮಂಗಳೂರು ಕೆಥೋಲಿಕ್ ಸಭಾದಿಂದ ಬೃಹತ್ ಪ್ರತಿಭಟನೆ

Next Post

ಮಂಗಳೂರು| ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
64
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
131
Next Post
ಮಂಗಳೂರು| ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

ಮಂಗಳೂರು| ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

Discussion about this post

Recent News

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ  ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

February 19, 2026
14
ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
114
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ  ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ: ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

February 19, 2026
ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

ಮಂಗಳೂರು: ಕೈ ಕೊಯ್ದುಕೊಂಡು ರಕ್ತದಲ್ಲೇ ಹುಡುಗಿ ಹೆಸರು ಬರೆದಿಟ್ಟು ಸ್ಟೇಟಸ್ ಹಾಕಿ ಕುಂಬಳೆಯ ಯುವಕ ಸಾವಿಗೆ ಶರಣು

February 19, 2026
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆ ; ಗೃಹ ಸಚಿವರಿಂದ ಉದ್ಘಾಟನೆ

February 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d