• About us
  • Contact us
  • Disclaimer
Sunday, August 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಣಿಪುರ| ನ್ಯಾಯ ಸಿಗುವವರೆಗೆ ಹೋರಾಟ, ಮಂಗಳೂರು ಕೆಥೋಲಿಕ್ ಸಭಾದಿಂದ ಬೃಹತ್ ಪ್ರತಿಭಟನೆ

Coastal Times by Coastal Times
July 28, 2023
in ಕರಾವಳಿ
ಮಣಿಪುರ| ನ್ಯಾಯ ಸಿಗುವವರೆಗೆ ಹೋರಾಟ, ಮಂಗಳೂರು ಕೆಥೋಲಿಕ್ ಸಭಾದಿಂದ ಬೃಹತ್ ಪ್ರತಿಭಟನೆ
59
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 27: ಮಣಿಪುರದಲ್ಲಿ ಸರಣಿ ಅತ್ಯಾಚಾರ, ಮಹಿಳೆಯರ ಬೆತ್ತಲೆ ಮೆರವಣಿಗೆ, ಹತ್ಯಾಕಾಂಡ ವಿಚಾರದಲ್ಲಿ ಕೇಂದ್ರ ಮತ್ತು ಮಣಿಪುರ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ಕೆಥೋಲಿಕ್ ಸಭಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಟೌನ್ ಹಾಲ್ ಮುಂಭಾಗದಲ್ಲಿ ಸೇರಿದ ಎರಡು ಸಾವಿರಾರು ಜನರು, ಬಿಜೆಪಿ ಸರಕಾರದ ಇಬ್ಬಗೆ ನೀತಿಯ ಬಗ್ಗೆ ಖಂಡನೆ, ಧಿಕ್ಕಾರ ಕೂಗಿದರು. ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ನೀಡಲು ಕೇಂದ್ರ ಸರ್ಕಾರ ವಿಫಲವಾದರೆ ದೆಹಲಿ ಮತ್ತು ಮಣಿಪುರ ಚಲೋ ನಡೆಸಲಾಗುವುದು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಎಚ್ಚರಿಕೆ ನೀಡಿದರು.

ಕಥೋಲಿಕ್ ಸಭಾದ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್‌ನ ಸಹಭಾಗಿತ್ವಲ್ಲಿ ನಗರದ ಪುರಭವನದ ಎದುರು ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಮಣಿಪುರದಲ್ಲಿ ನಡೆಯುತ್ತಿರುವ ಬೆಳವಣಿಗೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಅಲ್ಲಿನ ಹಿಂಸಾಚಾರ, ದೌರ್ಜನ್ಯದ ವಿರುದ್ಧ ಜಗತ್ತಿನಾದ್ಯಂತ ಜನರು ಧ್ವನಿ ಎತ್ತಿದ ಪ್ರಧಾನಿ ಪ್ರಧಾನಿ ತುಟಿಬಿಚ್ಚಿರುವುದು ವಿಪರ್ಯಾಸವಾಗಿದೆ. ಪ್ರಧಾನಿ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಭರವಸೆ ಇಲ್ಲ. ಹೀಗಾಗಿ ಹೋರಾಟ ಮುಂದುವರಿಸಲಿದ್ದೇವೆ. ಅಲ್ಲಿ ಕೆಡವಿರುವ ಮನೆ, ಶಾಲೆಗಳನ್ನು ಮತ್ತೆ ಕಟ್ಟಿ, ಇತಿಹಾಸ ಸೃಷ್ಟಿಸುತ್ತೇವೆ’ ಎಂದರು.

ರಾಜ್ಯ ದಾರಿಮೀಸ್ ಉಲಮಾ ಒಕ್ಕೂಟದ ಅಧ್ಯಕ್ಷ ಎಸ್‌ಬಿ ಮುಹಮ್ಮದ್ ದಾರಿಮಿ ಮಾತನಾಡಿ ‘ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಪ್ರತಿಭಟನೆಗಳು ಹಿತವಲ್ಲ. ಆದರೆ, ಮಣಿಪುರ ಸಹಿತ ದೇಶದಾದ್ಯಂತ ನಡೆಯುವ ಹಿಂಸಾಚಾರದ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ’ ಎಂದರು.

ಸಾಮಾಜಿಕ ಹೋರಾಟಗಾರ್ತಿ ವಿದ್ಯಾ ದಿನಕರ್ ಮಾತನಾಡಿ, ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ ತೀವ್ರಗೊಳ್ಳಬೇಕಾಗಿದೆ ಎಂದರು. ವಿದ್ಯಾರ್ಥಿ ಡೇವಿಡ್ ಅಲ್ಲಿನ ಘಟನೆಗಳನ್ನು ಹಂಚಿಕೊಂಡರು.

ಪ್ರತಿಭಟನಾ ಸಭೆಯಲ್ಲಿ ಮಣಿಪುರದ ಜನರು ನಮ್ಮವರೇ, ಅವರೊಂದಿಗೆ ನಾವಿದ್ದೇವೆ ಎನ್ನುವ ಘೋಷಣೆ ಕೂಗಿದರು. ಅಲ್ಲದೆ, ನೂರಾರು ಪ್ಲೇಕಾರ್ಡ್ ಹಿಡಿದು ಮಣಿಪುರದ ಪರವಾಗಿ ಘೋಷಣೆ ಕೂಗಿದರು. ಮಂಗಳೂರು ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಿಂದಲೂ ಧರ್ಮಗುರು ಸಹಿತ ಭಗಿನಿಯರು, ಶಿಕ್ಷಕರು, ವಿದ್ಯಾರ್ಥಿಗಳು, ಮುಸ್ಲಿಂ ಮಹಿಳೆಯರು ಕೂಡ ಸೇರಿದ್ದರು.

ಮಂಗಳೂರು ಧರ್ಮಪ್ರಾಂತದ ಶ್ರೇಷ್ಠ ಗುರು ಮೋನ್ಸಿಜೋರು ಮ್ಯಾಕ್ಸಿಮ್ ನೊರೊನ್ಹಾ, ಮಾಜಿ ಸಚಿವ ರಮಾನಾಥ ರೈ, ಕಥೋಲಿಕ್ ಸಭಾ ಮಂಗಳೂರು ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ ಜೆ.ಬಿ. ಸಲ್ದಾನ, ಅಧ್ಯಕ್ಷ ಆಲ್ವಿನ್ ಡಿಸೋಜ, ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟಲಿನೊ, ಮಾಜಿ ಅಧ್ಯಕ್ಷ ಪೌಲ್ ರೋಲ್ಫಿ, ಉಪಾಧ್ಯಕ್ಷ ಲಾರೆನ್ಸ್ ಡಿಸೋಜ, ಜಮಾತೆ ಇಸ್ಲಾಮಿ ಹಿಂದ್‌ನ ಜಿಲ್ಲಾ ಸಂಚಾಲಕ ಅಮೀನ್ ಹಸನ್, ಮಹಿಳಾ ವಿಭಾಗದ ಅಧ್ಯಕ್ಷೆ ಸಾಜಿದಾ ಮೂಮಿನ್, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಜಿಲ್ಲಾ ಘಟಕದ ಅಧ್ಯಕ್ಷ ನಿಝಾಮುದ್ದೀನ್ ಉಮರ್ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

11 ಮಂದಿ ಮಹಿಳೆಯರು ಸೇರಿ ಖರೀದಿಸಿದ್ದ ಕೇರಳದ ಮಾನ್ಸೂನ್​ ಬಂಪರ್​ ಲಾಟರಿಗೆ ಜಾಕ್​ಪಾಟ್​! ರೂ.10 ಕೋಟಿ ಗೆದ್ದು ಕೋಟ್ಯಾಧೀಶರಾದ ಪೌರಕಾರ್ಮಿಕರು

Next Post

ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ರೂಪದರ್ಶಿ ವಿದ್ಯಾಶ್ರೀ ಆತ್ಮಹತ್ಯೆ! ಜಿಮ್ ತರಬೇತುದಾರ ಅಕ್ಷಯ್ ಬಂಧನ

Related Posts

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
ಕರಾವಳಿ

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
47
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
23
Next Post
ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ರೂಪದರ್ಶಿ ವಿದ್ಯಾಶ್ರೀ ಆತ್ಮಹತ್ಯೆ! ಜಿಮ್ ತರಬೇತುದಾರ ಅಕ್ಷಯ್ ಬಂಧನ

ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ರೂಪದರ್ಶಿ ವಿದ್ಯಾಶ್ರೀ ಆತ್ಮಹತ್ಯೆ! ಜಿಮ್ ತರಬೇತುದಾರ ಅಕ್ಷಯ್ ಬಂಧನ

Discussion about this post

Recent News

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
16
ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

August 1, 2026
52
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಬಂಧನ

August 1, 2026
ಮೂಡುಬಿದಿರೆ : ಪತ್ನಿಯ ಕಿರುಕುಳ, ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ

ಮೂಡುಬಿದಿರೆ : ಪತ್ನಿಯ ಕಿರುಕುಳ, ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ

August 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d