• About us
  • Contact us
  • Disclaimer
Thursday, August 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Coastal Times by Coastal Times
August 28, 2025
in ಕರಾವಳಿ
ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
266
VIEWS
WhatsappTelegramShare on FacebookShare on Twitter

ಮಂಗಳೂರು: ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್‌ಗೆ ಢಿಕ್ಕಿ ಹೊಡೆದಿದೆ.

ಅಜ್ಜಿನಡ್ಕ ನಿವಾಸಿ ಖತೀಜ(60), ಅವರ ತಂಗಿ ನಫೀಸಾ(52),  ಖತೀಜ ಅವರ ಅಣ್ಣನ ಮಗಳು ಹಸೀನ(13), ತಂಗಿಯ ಮಗಳು ಆಯಿಷ ಫಿದಾ(19), ಖತೀಜ ಅವರ ಮನೆಗೆ ಬಂದಿದ್ದ ಸಂಬಂಧಿ ಮಹಿಳೆ ಹವ್ವಮ್ಮ (70) ಮತ್ತು ಅಜ್ಜಿನಡ್ಕದ ರಿಕ್ಷಾ ಚಾಲಕ ಹೈದರ್ ಆಲಿ (47) ಮೃತರು. ಇಬ್ಬರ ಮೃತದೇಹ ಸ್ಥಳದಲ್ಲೇ ಇದ್ದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿತ್ತು.

ಮಳೆಯಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಖತೀಜ ಅವರು ಇಬ್ಬರು ಮಕ್ಕಳು ಮತ್ತು ಇತರ ಸಂಬಂಧಿಕ ಮಹಿಳೆಯರ ಜೊತೆಗೆ ಆಟೋ ರಿಕ್ಷಾದಲ್ಲಿ ಮಂಜೇಶ್ವರದ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಈ ವೇಳೆ, ಕಾಸರಗೋಡು ಕಡೆಯಿಂದ ಯಮದೂತನ ರೂಪದಲ್ಲಿ ಬಂದ ಬಸ್ ಆಟೋದಲ್ಲಿದ್ದ ಆರು ಮಂದಿಯನ್ನೂ ಆಹುತಿ ಪಡೆದಿದೆ.

ಸ್ಥಳದಲ್ಲಿ ಬಸ್ಸಿಗೆ ಕಾಯುತ್ತಿದ್ದ ಇಬ್ಬರು ಪ್ರಯಾಣಿಕರು ಕೂಡ ಗಂಭೀರ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಬಸ್ ಡಿಕ್ಕಿಯಾಗಿ ಬಳಿಕ ಹಿಂದಕ್ಕೆ ಬಂದಿದ್ದು ತಿರುಗಿ ನಿಂತಿದೆ. ಈ ವೇಳೆ, ಅಲ್ಲಿದ್ದ ಒಬ್ಬರು ಮಹಿಳೆ ಮತ್ತು ಇನ್ನೊಂದು ನಿಲ್ಲಿಸಿದ್ದ ಆಟೋ ಕೂಡ ಜಖಂ ಆಗಿದೆ. ಮೃತರನ್ನು ಮತ್ತು ಗಾಯಗಳುಗಳನ್ನು ದೇರಳಕಟ್ಟೆ ಆಸ್ಪತ್ರೆಗೆ ಒಯ್ಯಲಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ಘಟನೆ ನಡೆದಿದ್ದು ಫ್ಲೈ ಓವರ್ ಮತ್ತು ಮೇಲಿನ ತಲಪಾಡಿಯ ಜಂಕ್ಷನ್ ಮಧ್ಯೆ ಅಪಘಾತ ಉಂಟಾಗಿದೆ. ಘಟನೆಯಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಕೇಸು ದಾಖಲಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

Next Post

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

Related Posts

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ
ಕರಾವಳಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
99
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
73
Next Post
ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

Discussion about this post

Recent News

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

August 28, 2025
10
ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

August 28, 2025
266
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಭೂ ಸುಧಾರಣಾ ಕಚೇರಿಯ ಸಿಬ್ಬಂದಿ ಸುನೀಲ್ ಲೋಕಾಯುಕ್ತರ ಬಲೆಗೆ

August 28, 2025
ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ;  ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

August 28, 2025
ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d