ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆಯಾದರೂ ಕರಾವಳಿಯಲ್ಲಿ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ. ಶುಕ್ರವಾರ ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಬಹುತೇಕ ಎಂದಿನಂತೆ ಇರಲಿದೆ.
Discussion about this post