• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

Coastal Times by Coastal Times
September 28, 2025
in ಕ್ರೈಮ್ ನ್ಯೂಸ್
ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ
230
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.27: ನಗರದ ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕಚೇರಿ ಕೆಲಸಗಾರ ಮುಸ್ತಫಾ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.26ರಂದು ರಾತ್ರಿ 8:30ರ ವೇಳೆಗೆ ಅಂಗಡಿಯಿಂದ ವಾರದಲ್ಲಿ ಶೇಖರಣೆಯಾದ ಸುಮಾರು 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ತೂಕದ ಮೆಲ್ಟ್ ಮಾಡಿದ ಚಿನ್ನವನ್ನು ಶುದ್ಧ ಚಿನ್ನವಾಗಿ ಪರಿವರ್ತಿಸಲು ನಗರದ ರಥಬೀದಿಯ ಸಂತೋಷ್ ಎಂಬವರ ಚಿನ್ನದ ಅಂಗಡಿಗೆ ಮುಸ್ತಫಾ ತನ್ನ ಸ್ಕೂಟರ್‌ನ ಸೀಟಿನ ಅಡಿಯ ಡಿಕ್ಕಿಯಲ್ಲಿಟ್ಟು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ.

ನಗರದ ಜಿಎಚ್‌ಎಸ್ ರಸ್ತೆಯ ಮೂಲಕ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿ ಮುಸ್ತಫಾ ತಲುಪಿದಾಗ ರಾತ್ರಿ ಸುಮಾರು 8:45ರ ವೇಳೆಗೆ ಹಿಂದಿನಿಂದ ಇನ್ನೊಂದು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಮುಸ್ತಫಾರ ಸ್ಕೂಟರ್‌ಗೆ ಅಡ್ಡವಾಗಿಟ್ಟು ನನ್ನ ವಾಹನಕ್ಕೆ ಯಾಕೆ ತಾಗಿಸಿಕೊಂಡು ಹೋಗುತ್ತೀ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳ ತರಾಟೆಯಿಂದ ಮುಸ್ತಫಾ ಗಾಬರಿಗೊಂಡಿದ್ದು, ಈ ವೇಳೆ ಹಿಂದಿನಿಂದ ಬಿಳಿ ಬಣ್ಣದ ಕಾರಿನಲ್ಲಿ ಬಂದ ನಾಲ್ವರ ಪೈಕಿ ಒಬ್ಬ ಕಾರಿನಿಂದ ಇಳಿದು ಕತ್ತಿ ತೋರಿಸಿ ಬೆದರಿಸಿ, ನಂತರ ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ್ದಾರೆ. ದಾರಿ ಮಧ್ಯ ಆರೋಪಿಗಳು ಮುಸ್ತಫಾರಿಗೆ ಕೈಯಿಂದ ಹಲ್ಲೆ ನಡೆಸಿ ಸ್ಟೇಟ್‌ಬ್ಯಾಂಕ್, ಪಾಂಡೇಶ್ವರ ಮಾರ್ಗವಾಗಿ ಗೋರಿಗುಡ್ಡ, ಉಜ್ಜೋಡಿ ಫ್ಲೈಓವರ್ ರಸ್ತೆಯ ಕೆಳಗಡೆಯಿಂದ ಸರ್ವಿಸ್ ರಸ್ತೆಯಲ್ಲಿ ಸಾಗುತ್ತಲೇ ಚಿನ್ನದ ಗಟ್ಟಿಯ ಬಗ್ಗೆ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಸ್ತಫಾ ಚಲಾಯಿಸಿಕೊಂಡಿದ್ದ ಸ್ಕೂಟರನ್ನು ದ್ವಿಚಕ್ರ ವಾಹನದಲ್ಲಿ ಬಂದು ತಗಾದೆ ತೆಗೆದಿದ್ದ ಹಿಂಬದಿ ಸವಾರನು ಎಕ್ಕೂರು ಬಳಿ ಕಾರು ತಲುಪಿದಾಗ ಚಿನ್ನದ ಗಟ್ಟಿಯನ್ನು ಕಾರಿನಲ್ಲಿ ಕುಳಿತವರಿಗೆ ನೀಡಿದ್ದಾನೆ ಎಂದು ದೂರಲಾಗಿದೆ. ರಾತ್ರಿ ಸುಮಾರು 9:15ರ ವೇಳೆಗೆ ಮುಸ್ತಫಾರನ್ನು ಕಾರಿನಿಂದ ಇಳಿಸಿ ಸ್ಕೂಟರನ್ನು ಅಲ್ಲೇ ಬಿಟ್ಟು ತೊಕ್ಕೊಟ್ಟು ಕಡೆಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಮುಸ್ತಫಾ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಪಡೆದು ಸ್ನೇಹಿತನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಚಿನ್ನದ ಅಂಗಡಿಯ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ತಮಿಳುನಾಡು: ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ; ಮಕ್ಕಳು, ಮಹಿಳೆಯರು ಸೇರಿ 39 ಸಾವು, 20 ಜನರ ಪರಿಸ್ಥಿತಿ ಗಂಭೀರ

Next Post

ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ; ಮೂವರ ಬಂಧನ

Related Posts

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ
ಕ್ರೈಮ್ ನ್ಯೂಸ್

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

July 31, 2026
37
ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ
ಕ್ರೈಮ್ ನ್ಯೂಸ್

ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ

July 31, 2026
43
Next Post
ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ; ಮೂವರ ಬಂಧನ

ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ; ಮೂವರ ಬಂಧನ

Discussion about this post

Recent News

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

July 31, 2026
37
ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ

ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ

July 31, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

ಕುಂದಾಪುರ; ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಪ್ರಕರಣ; ಆರೋಪಿ ಡೆರಿಕ್ ಗಾಗಿ ತೀವ್ರ ಶೋಧ

July 31, 2026
ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ

ಕುಂದಾಪುರ; ಬೆಳ್ಳಂಬೆಳಗ್ಗೆ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯ ಗುಂಡಿಕ್ಕಿ ಹತ್ಯೆ; ಆರೋಪಿಯ ಪತ್ತೆಗೆ 3 ಪೊಲೀಸ್ ತಂಡ ರಚನೆ

July 31, 2026
ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

ಬೆಳ್ತಂಗಡಿ : ದುಬೈಗೆ ಹೋಗಬೇಕಾದವ ಗಾಂಜಾ ಮತ್ತು MDMA ಮಾರಾಟ ಮಾಡಲು ಯತ್ನಿಸಿ ಜೈಲಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d