ಬೆಂಗಳೂರು, ಅ 28 : ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ ಮಾಡಿರುವ ವಿಚಾರವಾಗಿ ಸಿದ್ದರಾಮಯ್ಯ ಮಾತನಾಡಿ, ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ ಎಂದರು. ಇನ್ನು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹಲವು ಸಮಯದಿಂದ ಬಾಕಿ ಇರುವ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಅವರು ಮಾತನಾಡಿದರು. ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದರು. ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನಾನು 1983ರಲ್ಲಿ ಶಾಸಕನಾಗಿ, ನಂತರ ಸಚಿವ ನಾದವನು. ಹರೀಶ್ ಪೂಂಜ ಇನ್ನೂ ಬಚ್ಚಾ ಎಂದು ಹೇಳಿದರು.
Discussion about this post