• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಎಂಸಿಸಿ ಬ್ಯಾಂಕ್‌ನ ಶತಮಾನೋತ್ತರ ದಶಮಾನೋತ್ಸವ ಸಮಾರಂಭ

Coastal Times by Coastal Times
November 28, 2022
in ಕರಾವಳಿ
ಮಂಗಳೂರು : ಎಂಸಿಸಿ ಬ್ಯಾಂಕ್‌ನ ಶತಮಾನೋತ್ತರ ದಶಮಾನೋತ್ಸವ ಸಮಾರಂಭ
82
VIEWS
WhatsappTelegramShare on FacebookShare on Twitter

ಮಂಗಳೂರು, ನ.27: ಸಮುದಾಯದ ಹಿರಿಯರು 110 ವರ್ಷಗಳ ಹಿಂದೆ ಸ್ಥಾಪಿಸಿದ ಎಂಸಿಸಿ ಬ್ಯಾಂಕ್ ಈಗ ಕೇವಲ ಸಮುದಾಯದ ಬ್ಯಾಂಕ್ ಆಗಿ ಉಳಿದಿಲ್ಲ. ಸಮಾಜದ ಬ್ಯಾಂಕ್ ಆಗಿ ಮುನ್ನಡೆಯುತ್ತಿದೆ. ಇದಕ್ಕೆ ಬ್ಯಾಂಕ್‌ನ ಉದಾರತೆಯೇ ಮುಖ್ಯ ಕಾರಣವಾಗಿದೆ. ಆ ಧೈಯದಿಂದ ಮುನ್ನುಗ್ಗಿದುದರ ಫಲವಾಗಿ ಇಂದು ಬ್ಯಾಂಕ್ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ಮಂಗಳೂರು ಬಿಷಪ್ ಅ.ವಂ.ಡಾ.ಪೀಟರ್ ಪಾವ್ ಸಲ್ಲಾನ ಹೇಳಿದ್ದಾರೆ.

ನಗರದ ಮಿಲಾಗ್ರಿಸ್‌ ಕಾಲೇಜಿನ ಮೈದಾನದಲ್ಲಿ ರವಿವಾರ ನಡೆದ ಮಂಗಳೂರು ಕೆಥೋಲಿಕ್ ಕೋ-ಆಪರೇಟಿವ್ (ಎಂಸಿಸಿ) ಬ್ಯಾಂಕ್‌ನ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಬ್ಯಾಂಕ್‌ ನ್ಯಾಯಯುತವಾಗಿ ಕೊಡುವುದಕ್ಕಿಂತಲೂ ಉದಾರತೆಯಿಂದ ಹೆಚ್ಚುವರಿಯಾಗಿ ಅರ್ಹರಿಗೆ ಕೊಡುವ ಮೂಲಕ ಗ್ರಾಹಕರ, ಸಮಾಜದ ಮನಗೆದ್ದಿದೆ. ಬ್ಯಾಂಕ್‌ನ ಶತಮಾನೋತ್ತರ ದಶಮಾನೋತ್ಸವ ಪ್ರಯುಕ್ತ ಶನಿವಾರ ಅರ್ಹರಿಗೆ ಹಂಚಲಾದ ನೆರವು ಅದಕ್ಕೆ ಸಾಕ್ಷಿಯಾಗಿದೆ. ಈ ಬ್ಯಾಂಕ್‌ನಲ್ಲಿ ಜನಸಾಮಾನ್ಯರು ಕೂಡ ಸುಲಭವಾಗಿ ವ್ಯವಹರಿಸಲು ಸಾಧ್ಯವಿದೆ. ಅದು ಬ್ಯಾಂಕ್‌ ನ ಹೆಗ್ಗಳಿಕೆಯಾಗಿದೆ  ಎಂದು ಬಿಷಪ್ ನುಡಿದರು.

ಅಶೀರ್ವಚನ ನೀಡಿದ ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ, ‘ದಕ್ಷ ಆಡಳಿತ ಮಂಡಳಿ, ಸಮರ್ಪಿತ ಮನೋಭಾವದ ಸಿಬ್ಬಂದಿ ವರ್ಗ ಮತ್ತು ಗ್ರಾಹಕರ ಸಕಾಲಿಕ ಸ್ಪಂದನದಿಂದ ಬ್ಯಾಂಕ್ ಸ್ಥಿರವಾಗಿ, ಬಲಿಷ್ಠವಾಗಿ ನಿಂತಿದೆ. ಒಳ್ಳೆಯ ಉದ್ದೇಶ, ಗುರಿ ಮುಟ್ಟಬೇಕು ಎಂಬ ಛಲವು ಬ್ಯಾಂಕ್ ಭವಿಷ್ಯದ ದಿನಗಳಲ್ಲಿ ಮತ್ತಷ್ಟು ಪ್ರಗತಿಪಥದಲ್ಲಿ ಸಾಗುವ ಎಲ್ಲ ಲಕ್ಷಣಗಳನ್ನು ಹೊಂದಿದೆ. ಕರಾವಳಿಯ ಜೀವನಾಡಿಯಾಗಿ ರುವ ಈ ಬ್ಯಾಂಕ್ ಆರ್ಥಿಕವಾಗಿ ಅವಕಾಶ ವಂಚಿತರಿಗೆ ಆಶಾಕಿರಣವಾಗಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೊ, ‘ಎಂಸಿಸಿ ಬ್ಯಾಂಕ್ ಕೇವಲ ಆರ್ಥಿಕ ಸಂಸ್ಥೆಯಲ್ಲ. ಸಮಾಜದ ಕಷ್ಟ ಕಾರ್ಪಣ್ಯಕ್ಕೆ ಸ್ಪಂದಿಸುವ ಸಂಸ್ಥೆಯಾಗಿಯೂ ರೂಪುಗೊಂಡಿವೆ. ರಾಷ್ಟ್ರೀಕೃತ ಬ್ಯಾಂಕ್‌ ಗಳಲ್ಲಿ ಸಿಗುವ ಸೇವೆಗಳಿಗಿಂತಲೂ ನಮ್ಮ ಬ್ಯಾಂಕ್‌ನಲ್ಲಿ ಹೆಚ್ಚಿ ನ ಸೇವೆಯನ್ನು ನೀಡಲಾಗುತ್ತದೆ. 16 ಶಾಖೆಗಳ ಪೈಕಿ 14 ಹವಾನಿಯಂತ್ರಿತಗೊಂಡಿವೆ. ಎಲ್ಲವೂ ಗಣಕೀಕರಣಗೊಂಡಿವೆ. ಸಾಲ ವಸೂಲಾತಿಯಲ್ಲೂ ಪ್ರಗತಿ ಸಾಧಿಸಿದೆ ಎಂದರು. ಮುಂದಿನ ದಿನಗಳಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಬ್ಯಾಂಕ್‌ನ ಸೇವೆಯನ್ನು ವಿಸ್ತರಿಸಲಾಗುವುದು. ಪ್ರಸಕ್ತ ಆಡಳಿತ ಮಂಡಳಿ 2018ರಲ್ಲಿ ಅಧಿಕಾರಕ್ಕೇರಿದಾಗ ವಾರ್ಷಿಕ ವಹಿವಾಟು 500 ಕೋ.ರೂ. ಇತ್ತು. ಅದೀಗ 860 ಕೋ.ರೂ.ಗೆ ಏರಿದೆ. ಮುಂದೆ ಒಂದು ಸಾವಿರ ಕೋ.ರೂ.ವಹಿವಾಟಿನ ಗುರಿ ಹಾಕಿಕೊಳ್ಳಲಾಗಿದೆ ಎಂದು ಅನಿಲ್ ಲೋಬೊ ಹೇಳಿದರು.

ಇದೇವೇಳೆ ಎಂಸಿಸಿ ಸಂಸ್ಥಾಪಕ ಪಿ.ಎಫ್.ಎಕ್ಸ್.ಸಲ್ಮಾನರ ಭಾವಚಿತ್ರಕ್ಕೆ ಪುಷ್ಪಾರ್ಚಣೆಯನ್ನು ಉಡುಪಿ ಬಿಷಪ್‌, ಡಾ. ಜೆರಾಲ್ಡ್ ಐಸಾಕ್ ಲೋಬೊ, ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ ಸಲ್ದಾನ್ಹಾ, ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನೀಲ್‌ ಲೋಬೊ ಸೇರಿ ನೆರವೇರಿಸಿದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ಮಿಲಾಗ್ರಿಸ್ ಚರ್ಚ್‌ನಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಹೊರತರಲಾದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಬ್ಯಾಂಕ್‌ ಮಾಜಿ ಅಧ್ಯಕ್ಷ ವೆಲೆಂಟೈನ್‌ ಡಿಸಿಲ್ವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಆರ್ಸುಲಾಯ್ ಮದರ್ ಜನರಲ್ ಸಿಸ್ಟರ್ ಮಿಲ್ಲಿ ಫೆರ್ನಾಂಡಿಸ್, ಬ್ಯಾಂಕ್‌ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆ್ಯಂಡ್ರ ಡಿಸೋಜ, ಮಾರ್ಸೆಲ್ ಎಂ. ಡಿಸೋಜ, ಜೋಸೆಫ್ ಅನಿಲ್ ಪತ್ತಾವೊ, ಹೆರಾಲ್ಡ್ ಮೊಂತೇರೊ, ಎಲ್.ರೋಮ್ ಕೆ ಕ್ರಾಸ್ಕೊ, ಜೆ.ಪಿ.ರೋಡ್ರಿಗಸ್, ಸಿ.ಜಿ.ಪಿಂಟೊ, ಡೇವಿಡ್ ಡಿಸೋಜ, ಸುಶಾಂತ್ ಸಲ್ದಾನ, ರೋಶನ್‌ ಡಿಸೋಜ, ಡಾ.ಜೆರಾಲ್ಡ್ ಪಿಂಟೊ, ಐರಿನ್ ರೆಬೆಲ್ಲೊ, ಡಾ.ಫ್ರೀಡಾ ಡಿಸೋಜ, ಶರ್ಮಿಳಾ ಮಿನೇಜಸ್, ಫೆಲಿಕ್ಸ್ ಡಿಕ್ರೂಝ್, ಅಲ್ವಿನ್ ಪಿ. ಮೊಂತೇರೊ, ಮಹಾಪ್ರಬಂಧಕ ಸುನೀಲ್‌ ಮಿನೇಜಸ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಹಿಂದು ಯುವತಿ ಮುಸ್ಲಿಂ ಆಗಿ ಮತಾಂತರಕ್ಕೆ ಯತ್ನ , ಬುರ್ಖಾ ಹಾಕಿಸಿ, ನಮಾಜ್‌ ಮಾಡಿಸುತ್ತಿದ್ದರು; ಖ್ಯಾತ ವೈದ್ಯೆ ಸೇರಿ ಮೂವರ ವಿರುದ್ಧ ದೂರು

Next Post

ಬಜ್ಪೆ : ಕುಡಿದ ಅಮಲಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯನ್ನೇ ಕೊಲೆ ಮಾಡಿದ ಪತಿ

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
224
Next Post
ಬಜ್ಪೆ : ಕುಡಿದ ಅಮಲಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯನ್ನೇ ಕೊಲೆ ಮಾಡಿದ ಪತಿ

ಬಜ್ಪೆ : ಕುಡಿದ ಅಮಲಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯನ್ನೇ ಕೊಲೆ ಮಾಡಿದ ಪತಿ

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d