• About us
  • Contact us
  • Disclaimer
Monday, June 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂತಾರ -2 ಚಿತ್ರದ ಟೀಸರ್ ಬಿಡುಗಡೆ, ಉಗ್ರರೂಪ ತಾಳಿದ ರಿಷಬ್ ಶೆಟ್ಟಿ : ಫಸ್ಟ್ ಲುಕ್ ಟೀಸರ್ ದಾಖಲೆ

Coastal Times by Coastal Times
November 28, 2023
in ಸಿನಿಮಾ
ಕಾಂತಾರ -2 ಚಿತ್ರದ ಟೀಸರ್ ಬಿಡುಗಡೆ, ಉಗ್ರರೂಪ ತಾಳಿದ ರಿಷಬ್ ಶೆಟ್ಟಿ : ಫಸ್ಟ್ ಲುಕ್ ಟೀಸರ್ ದಾಖಲೆ
63
VIEWS
WhatsappTelegramShare on FacebookShare on Twitter

ಬೆಂಗಳೂರು,: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಭಾಗ- 2ರ ಟೀಸರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರಲಿರುವ ಚಿತ್ರದ ಫಸ್ಟ್ ಲುಕ್ ಭಾರೀ ಕುತೂಹಲ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಶೆಟ್ಟಿ ಘೋರ ರೂಪದಲ್ಲಿ ಕಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಕೊಡಲಿಯನ್ನು ಹಿಡಿದಿರುವ ರಿಷಬ್ ಪೋಸ್ಟರ್ ನಾನಾ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಕಾರಣದಿಂದ ‘ಕಾಂತಾರ’ ಪ್ರಿಕ್ವೆಲ್ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ಕಂಡ ವೀಕ್ಷಣೆಯೇ ಇದಕ್ಕೆ ಸಾಕ್ಷಿ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್ ಅಂದರೆ 1.2 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ.

ಕಳೆದ ವರ್ಷ ‘ಕಾಂತಾರ’ ಸಿನಿಮಾ ರಿಲೀಸ್ ಆಯಿತು. ಇದಾದ ಬಳಿಕ ಎರಡನೇ ಪಾರ್ಟ್ ಮಾಡಲು ರಿಷಬ್ ಶೆಟ್ಟಿ ಮುಂದಾದರು. ಸ್ಕ್ರಿಪ್ಟ್ ಕೆಲಸಕ್ಕೆ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಬಹಳ ಶ್ರದ್ಧೆಯಿಂದ ಕುಳಿತು ಅವರು ಸ್ಕ್ರಿಪ್ಟ್ ರೆಡಿ ಮಾಡಿಕೊಂಡಿದ್ದಾರೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜೊತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಟೀಸರ್ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಎರಡರ ಚಿತ್ರಕಥೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಏಳುನೂರು ವರ್ಷಗಳ ಹಿಂದೆ ಆಳಿದ್ದ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ತಂಡ ಬಣ್ಣಿಸಿದೆ.

ರಿಷಬ್ ಶೆಟ್ಟಿ ಅವರು ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿದ್ದಾರೆ. ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ‘ಇದು ಬೆಳಕಲ್ಲ ದರ್ಶನ’ ಎನ್ನುವ ಡೈಲಾಗ್ ಕೇಳಿದೆ. ‘ಕಾಂತಾರ’ ಸಿನಿಮಾದಲ್ಲಿ ಈ ಡೈಲಾಗ್ ಹೆಚ್ಚು ಹೈಲೈಟ್ ಆಗಿತ್ತು. ಆ ಡೈಲಾಗ್ ಇಲ್ಲಿಯೂ ಇದೆ. ಕದಂಬರ ಕಾಲದ ಕಥೆ ಸಿನಿಮಾದಲ್ಲಿ ಇದೆ.

ಸದ್ಯ ರಿಷಬ್ ಶೆಟ್ಟಿ ಅವರು ಕಥೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಈ ಹಿಂದೆ ಏನಾಗಿತ್ತು ಎಂಬುದನ್ನು ಹೇಳ ಹೊರಟಿದ್ದೇವೆ. ಜವಾಬ್ದಾರಿ ಹೆಚ್ಚಿದೆ. ಕಥೆ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’ ಎಂದಿದ್ದರು ರಿಷಬ್ ಶೆಟ್ಟಿ. ‘ಕಾಂತಾರ’ ಸಿನಿಮಾದ ಆರಂಭದಲ್ಲಿ ರಾಜನ ಕಥೆ ಬರುತ್ತದೆ. ಅದೇ ‘ಕಾಂತಾರ ಚಾಪ್ಟರ್ 1’ ಚಿತ್ರದ ಜೀವಾಳವೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.

12 Million views and counting ❤️‍🔥
The magic of #Kantara1Teaser continues to enchant hearts of the audience!

▶️ https://t.co/WQ2PyKOCwK#KantaraChapter1 #Kantara1FirstLook #Kantara @shetty_rishab @VKiragandur @hombalefilms @HombaleGroup @AJANEESHB @Banglan16034849… pic.twitter.com/QxnyVcteQY

— Hombale Films (@hombalefilms) November 28, 2023

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

Next Post

ಮಂಗಳೂರು: ‘ಪ್ರಯಾಣಿಕಕರು ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್ ಎಚ್ಚರಿಕೆ

Related Posts

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!
ಸಿನಿಮಾ

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!

May 23, 2025
41
” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
Next Post
ಮಂಗಳೂರು: ‘ಪ್ರಯಾಣಿಕಕರು ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್ ಎಚ್ಚರಿಕೆ

ಮಂಗಳೂರು: 'ಪ್ರಯಾಣಿಕಕರು ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು' -ಎಸ್ಪಿ ಋಷ್ಯಂತ್ ಎಚ್ಚರಿಕೆ

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
44
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
141
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d