• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಜಾರ್ಜ್​ಶೀಟ್​ ಸಲ್ಲಿಕೆ

Coastal Times by Coastal Times
December 28, 2024
in ರಾಜ್ಯ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಜಾರ್ಜ್​ಶೀಟ್​ ಸಲ್ಲಿಕೆ
4
VIEWS
WhatsappTelegramShare on FacebookShare on Twitter

ಬೆಂಗಳೂರು, ಡಿಸೆಂಬರ್​ 28: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.

ತಮ್ಮ ವಿರೋಧಿಗಳನ್ನು ಹೆಚ್​ಐವಿ-ಏಡ್ಸ್ ​​ಪೀಡಿತರ ಮೂಲಕ ಹನಿಟ್ರ್ಯಾಪ್​​ ಬಲಗೆ ಬೀಳಿಸಿ ಏಡ್ಸ್​​ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್​ಐಟಿ ಸಲ್ಲಿಸಿದ ಚಾರ್ಜ್​​​ಶೀಟ್​ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್​ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್​​ಪೆಕ್ಟರ್​​ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ.

376(2)ಎನ್ (ನಿರಂತರ ಅತ್ಯಾಚಾರ), 3081202 (ಅಪರಾಧಿಕ ಸಂಚು), 504 (ಉದ್ದೇಶ ಪೂರ್ವಕ ಅವಮಾನ), 506 (ಜೀವ ಬೆದರಿಕೆ), 270 (ಅಪಾಯಕಾರಿ ರೋಗ ಹರಡುವಿಕೆ. ಆರೋಪಿಗಳ ವಿರುದ್ಧ ಪ್ರಮುಖವಾಗಿ ಲೈಂಗಿಕ ಕಿರುಕುಳಕ್ಕಾಗಿ ಐಪಿಸಿ 354ಎ, ಅನುಮತಿ ಇಲ್ಲದೆ ಮಹಿಳೆ ಯ ಅಶ್ಲೀಲ ದೃಶ್ಯ ಸೆರೆಹಿಡಿದಿರುವುದಕ್ಕೆ ಸೆಕ್ಷನ್ 354 ಸಿ, ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಕ್ಕಾಗಿ ಐಪಿಸಿ ಸೆಕ್ಷನ್ 376 (2) (n), ಸಂತ್ರಸ್ತೆಯ ಕೊಲ್ಲುವ ಉದ್ದೇಶಕ್ಕೆ ಸೆಕ್ಷನ್ 308, ಅಪರಾಧಿಕ ಒಳಸಂಚಿಗೆ ಸೆಕ್ಷನ್ 120 B, ಉದ್ದೇಶಪೂರ್ವಕವಾಗಿ ಅವಮಾನಕ್ಕಾಗಿ ಸೆಕ್ಷನ್ 504, ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯಕ್ಕಾಗಿ ಸೆಕ್ಷನ್ 270 ಮತ್ತು ವ್ಯಕ್ತಿಯ ಖಾಸಗಿ ಚಿತ್ರವನ್ನ ಒಪ್ಪಿಗೆಯಿಲ್ಲದೆ ಸೆರೆಹಿಡಿದಿದ್ದಕ್ಕೆ ಐಟಿ ಕಾಯ್ದೆ 2000ರ ಸೆಕ್ಷನ್ 66E ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್​ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್​ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್​ 30ರಂದು ಚಾರ್ಜ್​ಶೀಟ್ ಸಲ್ಲಿಕ್ಕೆ ಮಾಡಿತ್ತು. ಸದ್ಯ ಗುತ್ತಿಗೆದಾರನ ಬಳಿ ಲಂಚ ಕೇಳಿದ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಅನುಮತಿಗೆ ಎಸ್​ಐಟಿ ಕಾಯುತ್ತಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಡಿಸೆಂಬರ್ 28 ಮತ್ತು 29 ರಂದು ನಿಗದಿಯಾಗಿದ್ದ ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Next Post

ಆರ್‌ಪಿಸಿ ಆನ್‌ಲೈನ್ ವಂಚನೆಗೆ ಮಂಗಳೂರಿನ 24 ವರ್ಷದ ಯುವಕ ಸಾವಿಗೆ ಶರಣು

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಆರ್‌ಪಿಸಿ ಆನ್‌ಲೈನ್ ವಂಚನೆಗೆ ಮಂಗಳೂರಿನ 24 ವರ್ಷದ ಯುವಕ ಸಾವಿಗೆ ಶರಣು

ಆರ್‌ಪಿಸಿ ಆನ್‌ಲೈನ್ ವಂಚನೆಗೆ ಮಂಗಳೂರಿನ 24 ವರ್ಷದ ಯುವಕ ಸಾವಿಗೆ ಶರಣು

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d