ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ದೆಹಲಿಯಲ್ಲಿ ಇಂದು ಬೆಳಿಗ್ಗೆ ಪ್ರಕಟಿಸಿದ್ದಾರೆ. ಮೇ10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ್, ಕರ್ನಾಟಕದ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಾದ್ಯಂತ ನೀತಿ ಸಂಹಿತೆಯೂ ಜಾರಿಗೆ ಬರಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.

ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.
Discover more from Coastal Times Kannada
Subscribe to get the latest posts sent to your email.








Discussion about this post