• About us
  • Contact us
  • Disclaimer
Sunday, August 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವಹಾನಿಯಾದರೆ ನೀವೇ ಜವಾಬ್ದಾರರು..ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ – ಸ್ಪೀಕರ್ ಯು.ಟಿ.ಖಾದರ್

Coastal Times by Coastal Times
May 29, 2023
in ಕರಾವಳಿ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವಹಾನಿಯಾದರೆ ನೀವೇ ಜವಾಬ್ದಾರರು..ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ – ಸ್ಪೀಕರ್ ಯು.ಟಿ.ಖಾದರ್
143
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 29: ಮಂಗಳೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದ.ಕ.ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಗಾರು ಪೂರ್ವ ಸಿದ್ಧತಾ ಕ್ರಮಗಳ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿ, ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆಗೆ ಎಲ್ಲಾ ಇಲಾಖೆಗಳು ಸರ್ವ ಸನ್ನದ್ಧವಾಗಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದೇನೆಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಮುಳುಗಡೆ ಹಾಗೂ‌ಗುಡ್ಡ ಪ್ರದೇಶಗಳನ್ನು ಗುರುತಿಸಿ ಅಧಿಕಾರಿಗಳನ್ನು ಸನ್ನದ್ಧವಾರಬೇಕು. ಕಂಟ್ರೋಲ್ ರೂಂಗಳನ್ನು ತೆರೆಯಬೇಕು. ಅಲ್ಲದೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.. ಪೃಕೃತಿ ವಿಕೋಪದಿಂದ ತೊಂದರೆಯಾಗದಂತೆ ಸಭೆಯನ್ನು ಕರೆದಿದ್ದೇವೆ. ಮುಳುಗಡೆ ಪ್ರದೇಶ,ಗುಡ್ಡ ಪ್ರದೇಶವನ್ನು ಗುರುತಿಸಿ ಅಧಿಕಾರಿಗಳನ್ನು ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಕಂಟ್ರೋಲ್ ರೂಂಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲು ಸೂಚನೆ ನೀಡಲಾಗಿದೆ. ಮೀನುಗಾರರ ಜೊತೆ ಚರ್ಚೆ ಮಾಡಿ ಬೋಟ್‌ಗಳನ್ನು ಪಡೆಯಲು ಸೂಚನೆ ನೀಡಲಾಗಿದೆ. ಪಶುಸಂಗೋಪನೆ ಇಲಾಖೆಗೆ ಅಗತ್ಯ ಸಲಕರಣೆ, ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.

ಮೆಸ್ಕಾಂ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಹೆಚ್ಚುವರಿ ವಾಹನ ಮತ್ತು ಸಿಬ್ಬಂದಿಯನ್ನು ನಿಗದಿಪಡಿಸಲಾಗುತ್ತದೆ.‌ ಅಲ್ಲದೆ ಅರಣ್ಯ ಮತ್ತು ಮೆಸ್ಕಾಂ ಜಂಟಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವಹಾನಿಯಾದರೆ ಅರಣ್ಯ ಮತ್ತು ಮೆಸ್ಕಾಂ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ. ಮನೆಗಳಿಗೆ ಹಾನಿಯಾದ ಸಂದರ್ಭ ತುರ್ತು ಪರಿಹಾರ ವಾಗಿ 10,000 ರೂ. ತಕ್ಷಣ ನೀಡಬೇಕು ಎಂದು ಯುಟಿ ಖಾದರ್ ಹೇಳಿದರು.

ಇನ್ನು ಸಭಾಪತಿಯವರ ತವರು ಕ್ಷೇತ್ರದಲ್ಲಿ ಕಡಲ್ಕೊರೆತ ಸಮಸ್ಯೆಗೆ ತೀವ್ರವಾಗಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಖಾದರ್, ಕಡಲ್ಕೊರೆತ ನಿರ್ವಹಣೆ ಅಸಮರ್ಪಕವಾಗಿರೋದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಸೋಮೇಶ್ವರ ಉಚ್ಚಿಲ ಭಾಗದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಆ ಭಾಗ ಡೇಂಜರ್ ಸ್ಥಿತಿಯನ್ನು ತಲುಪಿದೆ. ಶಾಶ್ವತವಾಗಿ ಈ ಸಮಸ್ಯೆ ನಿರ್ವಹಣೆಗೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಉಪ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ದ.ಕ.ಜಿಪಂ ಸಿಇಒ ಕುಮಾರ್, ಡಿಸಿಪಿ ಅಂಶು ಕುಮಾರ್, ಕರಾವಳಿ ತಟರಕ್ಷಣಾ ಪಡೆಯ ಅಧಿಕಾರಿಗಳು, ಶಾಸಕ ಅಶೋಕ್ ರೈ, ಎಂಎಲ್‌ಸಿ ಹರೀಶ್ ಕುಮಾರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹೊಸ ಸಂಸತ್‌ ಭವನದ ಮುಂದೆ ಪ್ರತಿಭಟನೆಗೆ ಯತ್ನ ; ಕುಸ್ತಿಪಟುಗಳ ಮೇಲೆ ಪೊಲೀಸರ ಬಲಪ್ರಯೋಗ

Next Post

ಆಂಧ್ರ ಪ್ರದೇಶದಿಂದ ಕಾರಿನಲ್ಲಿ ಮಂಗಳೂರಿಗೆ 23 ಕೆಜಿ ಗಾಂಜಾ ತರುತ್ತಿದ್ದ ವ್ಯಕ್ತಿ ಅರೆಸ್ಟ್

Related Posts

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ
ಕರಾವಳಿ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
18
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ
ಕರಾವಳಿ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
8
Next Post
ಆಂಧ್ರ ಪ್ರದೇಶದಿಂದ ಕಾರಿನಲ್ಲಿ ಮಂಗಳೂರಿಗೆ 23 ಕೆಜಿ ಗಾಂಜಾ ತರುತ್ತಿದ್ದ ವ್ಯಕ್ತಿ ಅರೆಸ್ಟ್

ಆಂಧ್ರ ಪ್ರದೇಶದಿಂದ ಕಾರಿನಲ್ಲಿ ಮಂಗಳೂರಿಗೆ 23 ಕೆಜಿ ಗಾಂಜಾ ತರುತ್ತಿದ್ದ ವ್ಯಕ್ತಿ ಅರೆಸ್ಟ್

Discussion about this post

Recent News

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
18
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
ಮಂಗಳೂರು: ಮಸಾಜ್ ಪಾರ್ಲರ್ ಮಾಲೀಕನಿಂದ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ, ಅರೆನಗ್ನ ಫೋಟೋ ತೆಗೆದು ಬ್ಲಾಕ್ಮೇಲ್

ಮಂಗಳೂರು: ಮಸಾಜ್ ಪಾರ್ಲರ್ ಮಾಲೀಕನಿಂದ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ, ಅರೆನಗ್ನ ಫೋಟೋ ತೆಗೆದು ಬ್ಲಾಕ್ಮೇಲ್

August 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d