ಉಳ್ಳಾಲ, ಜೂ 29 : ಈದ್ ರಜೆ ಪ್ರಯುಕ್ತ ಬೆಂಗಳೂರಿನಿಂದ ಉಳ್ಳಾಲ ದರ್ಗಾಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ.
ಬಕ್ರೀದ್ ರಜೆಯ ನಿಮಿತ್ತ ಬೆಂಗಳೂರಿನ ಯಶವಂತಪುರದ ನಿವಾಸಿ ನಿಝಾಮ್ (35) ಸೇರಿ ಮೂವರು ಸ್ನೇಹಿತರು ದರ್ಗಾ ಸಂದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಉಳ್ಳಾಲ ಬೀಚ್ಗೆ ತೆರಳಿದ್ದರು. ಸಮುದ್ರದಲ್ಲಿ ಆಡುತ್ತಿದ್ದಾಗ ನಿಝಾಂ ಅಲೆಗಳ ನಡುವೆ ಸಿಲುಕಿ ಅಪಾಯದಲ್ಲಿದ್ದರು. ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರಾದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್, ಗೃಹರಕ್ಷಕ ಸಿಬ್ಬಂದಿ ಪ್ರಸಾದ್ ಸುವರ್ಣ ಸೇರಿ ನಿಝಾಮ್ ಅವರನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post