• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

Coastal Times by Coastal Times
July 29, 2021
in ಆರೋಗ್ಯ
ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ
8
VIEWS
WhatsappTelegramShare on FacebookShare on Twitter

ಮಳೆಗಾಳದಲ್ಲಿ ತಂಪಾದ ವಾತಾವರಣವನ್ನೇನೋ ಕಾಣಬಹುದು. ಆದರೆ ಜೊತೆ ಜೊತೆಗೆ ಹಲವಾರು ಆರೋಗ್ಯ ಸಮಸ್ಯೆಗಳು ಕೂಡ ಎದುರಾಗುತ್ತವೆ. ಸಾಮಾನ್ಯವಾಗಿ ನೆಗಡಿ ಮತ್ತು ಕೆಮ್ಮಿನಿಂದ ವೈರಲ್ ಜ್ವರದವರೆಗೆ ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತವೆ. ಇವು ಎಲ್ಲರ ಮೇಲೆ ಪರಿಣಾಮ ಬೀರಬಹುದು, ವಿಶೇಷವಾಗಿ ಮಧುಮೇಹ ರೋಗಿಗಳು ಈ ಋತುವಿನಲ್ಲಿ ಹೆಚ್ಚಿನ ಕಾಳಜಿ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ಅಧಿಕ ಸಕ್ಕರೆ ಪ್ರಮಾಣದಿಂದಾಗಿ ಇತರರಿಗೆ ಹೋಲಿಸಿದರೆ ಮಧುಮೇಹ ಇರುವವರಲ್ಲಿ ರೋಗನಿರೋಧಕ ಶಕ್ತಿಯು ದುರ್ಬಲಗೊಳ್ಳುವುದರಿಂದಾಗಿ ಅವರು ಹೆಚ್ಚಿನ ಆರೈಕೆ ಮಾಡಿಕೊಳ್ಳಬೇಕಾಗುತ್ತದೆ.

1. ಹೈಡ್ರೇಟ್ ಆಗಿರಿ;

ಯಾವುದೇ ಕಠಿಣ ದೈಹಿಕ ಚಟುವಟಿಕೆಯನ್ನು ಮಾಡದಿದ್ದರೂ ಕೂಡ ಸಾಕಷ್ಟು ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಸಕ್ಕರೆಯನ್ನು ಸೇರಿಸಿದ ಯಾವುದೇ ಕಾರ್ಬೊನೇಟೆಡ್ ಪಾನೀಯಗಳು ಅಥವಾ ಪ್ಯಾಕ್ ಮಾಡಿದ ಜ್ಯೂಸ್‌ ಕುಡಿಯಬಾರದು. ನೈಸರ್ಗಿಕವಾಗಿ ಮನೆಯಲ್ಲೇ ತಯಾರಿಸಿದ ಜ್ಯೂಸ್‌ಗಳನ್ನು ಆಯ್ಕೆಮಾಡಿಕೊಳ್ಳಬೇಕು. ಎಳನೀರು ಕೂಡ ತುಂಬಾ ಒಳ್ಳೆಯದು.

2. ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಿ;

ಮಾನ್ಸೂನ್ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಂತಹ ಹಲವಾರು ಸೂಕ್ಷ್ಮಜೀವಿಗಳನ್ನು ಹೊತ್ತು ತರುತ್ತದೆ. ಹೀಗಾಗಿ ನಿಯಮಿತವಾಗಿ ಸ್ವಚ್ಚಗೊಳಿಸಿಕೊಳ್ಳಬೇಕು. ಸೋಂಕನ್ನು ತಡೆಗಟ್ಟಲು ಕೈಗಳನ್ನು ಆಗಾಗ ತೊಳೆದುಕೊಳ್ಳುತ್ತಿರಬೇಕು. ಅಲ್ಲದೆ, ಉಗುರುಗಳು ಸೂಕ್ಷ್ಮಜೀವಿಗಳಿಗೆ ಹಾಟ್‌ಸ್ಪಾಟ್‌ ಆಗಿರುವುದರಿಂದ ಅವುಗಳನ್ನು ಕತ್ತರಿಸಿಕೊಳ್ಳಬೇಕು. ಬೆಚ್ಚಗಿನ ನೀರಿನಿಂದ ಮಾತ್ರ ಸ್ನಾನ ಮಾಡಬೇಕು.

3. ತೇವಾಂಶದಿಂದ ಮುಕ್ತರಾಗಿ;

ಒಂದು ವೇಳೆ ಮಳೆಯಲ್ಲಿ ನೆನೆದರೆ ಕೂಡಲೇ ಬಟ್ಟೆ ಮತ್ತು ಪಾದರಕ್ಷೆಗಳನ್ನು ಬದಲಾಯಿಸಬೇಕು. ಮಧುಮೇಹದಿಂದಾಗಿ ಪಾದಕ್ಕೆ ಸಂಬಂಧಿಸಿದ ತೊಂದರೆಗಳನ್ನು ತಪ್ಪಿಸಲು ಪಾದಗಳನ್ನು ಯಾವಾಗಲೂ ಸ್ವಚ್ಟವಾಗಿ ಮತ್ತು ಒಣಗಿಸಿಟ್ಟುಕೊಳ್ಳುವುದು ತುಂಬಾ ಮುಖ್ಯ. ಇದು ಮಧುಮೇಹಿಗಳಿಗೆ ಉಂಟಾಗುವ ಯಾವುದೇ ಆಂತರಿಕ ನರ ಹಾನಿಯನ್ನು ತಡೆಯುತ್ತದೆ.

4. ಕಚ್ಚಾ ಆಹಾರವನ್ನು ಸೇವಿಸಬೇಡಿ;

ಸೂಕ್ಷ್ಮಜೀವಿಗಳು ಕಚ್ಚಾ ಆಹಾರದ ಮೇಲೆ ಇರುವುದರಿಂದಾಗಿ ಎಲ್ಲ ಹಸಿ ತರಕಾರಿಗಳನ್ನು ತಿನ್ನುವ ಬದಲು ಬೇಯಿಸಿಕೊಂಡು ತಿನ್ನುವುದು ಒಳಿತು.

5. ಹಣ್ಣು ಮತ್ತು ತರಕಾರಿಗಳನ್ನು ತೊಳೆಯಿರಿ;

ಎಲ್ಲಾ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವ ಮೊದಲು ಅವುಗಳನ್ನು ಚೆನ್ನಾಗಿ ತೊಳೆಯಬೇಕು. ವಿನೆಗರ್ ನೀರಿನಲ್ಲಿ ಅಥವಾ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸದೊಂದಿಗೆ ನೆನೆಸಿ ತೊಳೆಯುವುದರಿಂದ ಅವುಗಳ ಮೇಲಿರುವ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ.

6. ಹೊರಗಿನ ತಿಂಡಿಯನ್ನು ನಿಲ್ಲಿಸಿ;

ಹೊರಗಿನ ಆಹಾರ ಸೇವನೆ ನಿಲ್ಲಿಸುವುದರಿಂದ ಸೋಂಕಿನ ಅಪಾಯ ಕಡಿಮೆಯಾಗುವ ಜೊತೆಗೆ ಅರ್ಧ ಬೇಯಿಸಿದ ಆಹಾರ ಸೇವನೆಯ ತೊಂದರೆ ತಪ್ಪುತ್ತದೆ. ಅದರ ಬದಲು, ಮನೆಯಲ್ಲಿ ಬೇಯಿಸಿದ ಆಹಾರ ಸೇವನೆ ಉತ್ತಮ

7. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ;

ವಿಟಮಿನ್ಸ್ ಮತ್ತು ಇತರ ಪೋಷಕಾಂಶಗಳು ಸಮೃದ್ಧವಾಗಿರುವ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಸ್ವಾಭಾವಿಕವಾಗಿ ಹೆಚ್ಚಿಸುತ್ತದೆ ಮತ್ತು ಅದನ್ನು ಬಲಪಡಿಸುತ್ತದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ.

Next Post

20 ಗಂಟೆ ಕಾಲ ಬ್ಯಾಟರಿ‌ ಇರುವ “ಲುಮಿಫೋರ್ಡ್‌” ವೈರ್‌ ಲೆಸ್‌ ಇಯರ್‌ಫೋನ್‌ ಮಾರುಕಟ್ಟೆಗೆ

Related Posts

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ
ಆರೋಗ್ಯ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
175
ಹಿಮ್ಮುಖವಾಗಿ ವಾಕಿಂಗ್​ ಮಾಡಲು ಪ್ರಯತ್ನಿಸಿದ್ದೀರಾ? ಈ ರೀತಿ ವಾಕಿಂಗ್​ ಮಾಡುವುದರಿಂದ ಕೆಲವು ವಿಶಿಷ್ಟ ಲಾಭಗಳಿವೆ!
ಆರೋಗ್ಯ

ಹಿಮ್ಮುಖವಾಗಿ ವಾಕಿಂಗ್​ ಮಾಡಲು ಪ್ರಯತ್ನಿಸಿದ್ದೀರಾ? ಈ ರೀತಿ ವಾಕಿಂಗ್​ ಮಾಡುವುದರಿಂದ ಕೆಲವು ವಿಶಿಷ್ಟ ಲಾಭಗಳಿವೆ!

March 10, 2025
54
Next Post
20 ಗಂಟೆ ಕಾಲ ಬ್ಯಾಟರಿ‌ ಇರುವ “ಲುಮಿಫೋರ್ಡ್‌” ವೈರ್‌ ಲೆಸ್‌ ಇಯರ್‌ಫೋನ್‌ ಮಾರುಕಟ್ಟೆಗೆ

20 ಗಂಟೆ ಕಾಲ ಬ್ಯಾಟರಿ‌ ಇರುವ "ಲುಮಿಫೋರ್ಡ್‌" ವೈರ್‌ ಲೆಸ್‌ ಇಯರ್‌ಫೋನ್‌ ಮಾರುಕಟ್ಟೆಗೆ

Discussion about this post

Recent News

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
15
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ದಲ್ಲಿ ನಿರಂತರ ಭಾರೀ ಮಳೆ ಜು.17ರಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

July 17, 2025
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಬೆದರಿಸಿ 61.15 ಲ.ರೂ.ಗಳನ್ನು ವರ್ಗಾಯಿಸಿ ವಂಚನೆ: ಮಂಗಳೂರು ಸೆನ್ ಠಾಣೆಗೆ ದೂರು

July 17, 2025
ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

ಮಂಗಳೂರು: ಸೈಬರ್‌ ಕ್ರೈಂ ಪೊಲೀಸ್‌ ಎಂದು ಕರೆ ಮಾಡಿ ಬೆದರಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದ ಆರೋಪಿಯ ಬಂಧನ

July 17, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d