• About us
  • Contact us
  • Disclaimer
Friday, October 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅ.1:ಮಿಥುನ್ ರೈ ನೇತೃತ್ವದ ಪಿಲಿನಲಿಕೆ ದಶಮ ಸಂಭ್ರಮ ‘ಪಿಲಿನಲಿಕೆ -10’, ಸಿನಿಮಾ, ಕ್ರಿಕೆಟ್ ಸೆಲೆಬ್ರಿಟಿಗಳ ದಂಡು

Coastal Times by Coastal Times
September 29, 2025
in ಕರಾವಳಿ
ಅ.1:ಮಿಥುನ್ ರೈ ನೇತೃತ್ವದ ಪಿಲಿನಲಿಕೆ ದಶಮ ಸಂಭ್ರಮ ‘ಪಿಲಿನಲಿಕೆ -10’,  ಸಿನಿಮಾ, ಕ್ರಿಕೆಟ್ ಸೆಲೆಬ್ರಿಟಿಗಳ ದಂಡು
52
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.29; ಈ ಬಾರಿ ಅ.1ರಂದು ನಡೆಯಲಿರುವ ‘ಪಿಲಿನಲಿಕೆ ಪಂಥ- 10’ಕ್ಕೆ ಕರಾವಳಿ ಉತ್ಸವ ಮೈದಾನ ಸಜ್ಜುಗೊಳ್ಳುತ್ತಿದೆ ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಿಲಿನಲಿಕೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಗಳಿಗೂ 20 ನಿಮಿಷ ಕಾಲಾವಕಾಶ ನೀಡಲಾಗುವುದು.ಆ.1ರಂದು ಬೆಳಗ್ಗೆ 10ಗಂಟೆಗೆ ಆರಂಭವಾಗುವ ಸ್ಪರ್ಧೆ ರಾತ್ರಿ 10ರವರೆಗೆ ನಡೆಯಲಿದೆ. ಈ ಸ್ಪರ್ಧೆ ವಿಶ್ವಕ್ಕೆ ತುಳುನಾಡಿನ ಸಾಂಪ್ರದಾಯಿಕ ಪಿಲಿನಲಿಕೆಯನ್ನು ನವರಾತ್ರಿಯ ಶಿಷ್ಟಾಚಾರದೊಂದಿಗೆ ಪರಿಚಯಿಸುವ ಮುಖ್ಯ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆ ಆಗಿದೆ ಎಂದರು.

ಪಿಲಿನಲಿಕೆ ಸ್ಪರ್ಧೆಗೆ 10 ತಂಡಗಳು : ಪಿಲಿನಲಿಕೆ ಪಂಥ ಸ್ಪರ್ಧೆಗೆ ಅಂತಿಮವಾಗಿ ಅಗಸ್ತ್ಯ ಮಂಗಳೂರು, ಶ್ರೀ ವೈದ್ಯನಾಥೇಶ್ವರ ಫ್ರೆಂಡ್ಸ್ ಟೈಗರ್. ಮುಳಿಹಿತ್ತು ಗೇಮ್ಸ್ ಟೀಮ್, ಅನಿಲ್ ಕಡಂಬೆಟ್ಟು, ಜೂನಿಯರ್ ಬಾಯ್ಸ್ ಚಿಲಿಂಬಿ, ಎಮ್ಮೆಕೆರೆ ಫ್ರೆಂಡ್ಸ್ ಸರ್ಕಲ್, ಟ್ಯಾಲೆಂಟ್ ಟೈಗರ್ಸ್ ತುಳುನಾಡು, ಸೋಮೇಶ್ವರ ಫ್ರೆಂಡ್ಸ್,ಪೊಳಲಿ ಟೈಗರ್ಸ್, ಗೋಕರ್ಣ ನಾಥ ಹುಲಿ ತಂಡಗಳು ಭಾಗವಹಿಸಲಿವೆ ಎಂದರು.

ಈ ಬಾರಿ 10ತಂಡಗಳನ್ನು ಪಿಲಿನಲಿಕೆ -10ಕ್ಕೆ ಆಯ್ಕೆ ಮಾಡಲಾಗಿದೆ. ವಿಶೇಷವಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಉದ್ಘಾಟಿಸಲಿದ್ದಾರೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಸೇರಿದಂತೆ ಸಂಸದರು, ಶಾಸಕರು ಆಗಮಿಸಲಿದ್ದಾರೆ ಎಂದು ಮಿಥುನ್ ರೈ ತಿಳಿಸಿದ್ದಾರೆ.

26 ಲಕ್ಷರೂ, ಒಟ್ಟು ಬಹುಮಾನ: 2025ರ ‘ಪಿಲಿನಲಿಕೆ-10’ ಸ್ಪರ್ಧೆಯಲ್ಲಿ ಒಟ್ಟು 20 ಲಕ್ಷರೂ,ಬಹುಮಾನ ನಿಗದಿಪಡಿಸಲಾಗಿದೆ. ಪ್ರಥಮ ಬಹುಮಾನ 10 ಲಕ್ಷ ರೂ. ಮತ್ತು ಫಲಕ, ಪ್ರತಿ ತಂಡಕ್ಕೆ 50ಸಾವಿರ ರೂ. ಗೌರವ ಧನ ನೀಡಲಾಗುವುದು. ಕಪ್ಪುಹುಲಿ, ಮರಿಹುಲಿ, ತಾನೆ ತಂಡ, ಮುಡಿ ಬಿಸಾಡುವುದು, ಬಣ್ಣಗಾರಿಕೆ ಸೇರಿದಂತೆ 6 ವೈಯಕ್ತಿಕ ಪ್ರಶಸ್ತಿಗಳಿಗೆ 50ಸಾವಿರ ಬಹುಮಾನ ಹಾಗೂ ಫಲಕ ಸಿಗಲಿದೆ.

ಪಿಲಿನಲಿಕೆ ಪಂಥಕ್ಕೆ ಈ ಬಾರಿ ದಶಮ (ಹತ್ತು) ಸಂಭ್ರಮ ಹಿನ್ನೆಲೆಯಲ್ಲಿ ಮೂಡುಬಿದಿರೆ ಸರಕಾರಿ ತಾಲೂಕಿನ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅದರ ಅಭಿವೃದ್ಧಿಗೆ ಶ್ರಮಿಸಲು ನಿರ್ಧರಿಸಲಾಗಿದೆ. ಸಮಾರಂಭದಲ್ಲಿ ಸಹಕಾರಿ ರತ್ನ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾ‌ರ್ ಅವರಿಗೆ ಗೌರವ ಸನ್ಮಾನ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಶಿವಶರಣ್ ಶೆಟ್ಟಿ ನೇತೃತ್ವದ ನಮ್ಮ ಟಿವಿ ಸಹಭಾಗಿತ್ವ ವಹಿಸುತ್ತಿದ್ದಾರೆ. ಈ ಬಾರಿ ಸೆಲೆಬ್ರಿಟಿಗಳ ದಂಡೇ ಪಿಲಿನಲಿಕೆ ಪಂಥಕ್ಕೆ ಆಗಮಿಸಲಿದೆ. ಸಿನಿಮಾ ನಟರಾದ ಸುನೀಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ರಾಜ್ ಬಿ. ಶೆಟ್ಟಿ, ಕ್ರಿಕೆಟ್ ತಾರೆಗಳಾದ ಅಂಜಿಕ್ಯ ರಹಾನೆ, ಜಿತೇಶ್ ಶರ್ಮಾ, ಇಂಡಿಯನ್ ಬಾಕ್ಸರ್ ವಿಜೇಂದರ್ ಸಿಂಗ್, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಸಿನಿಮಾ, ಕ್ರೀಡಾ ಕ್ಷೇತ್ರದ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಕಕಾಲಕ್ಕೆ 25 ಸಾವಿರಕ್ಕೂ ಅಧಿಕ ಮಂದಿಗೆ ಕುಳಿತುಕೊಂಡು ಸ್ಪರ್ಧೆ ವೀಕ್ಷಿಸಲು ಆಸನ ವ್ಯವಸ್ಥೆ ಮಾಡಲಾಗುವುದು ಎಂದರು.

ಸುದ್ದಿ ಗೋಷ್ಠಿಯಲ್ಲಿ ಪ್ರತಿಷ್ಠಾನದಸಲಹೆ ಗಾರರಾದ ಶಿವ ಶರಣ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಪದಾಧಿ ಕಾರಿಗಳಾದ ಅನಿಲ್ ಪೂಜಾರಿ,ಆನಂದ ರಾಜ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

Next Post

ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ

Related Posts

ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ
ಕರಾವಳಿ

ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

October 2, 2025
48
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025ರ ಕಿರೀಟ ಸೀಸನ್-4
ಕರಾವಳಿ

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025ರ ಕಿರೀಟ ಸೀಸನ್-4

October 1, 2025
35
Next Post
ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ

ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ

Discussion about this post

Recent News

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
23
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

October 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d