• About us
  • Contact us
  • Disclaimer
Friday, October 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ

Coastal Times by Coastal Times
September 29, 2025
in ಕ್ರೈಮ್ ನ್ಯೂಸ್
ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ
296
VIEWS
WhatsappTelegramShare on FacebookShare on Twitter

ಮಂಗಳೂರು: ನಗರದಲ್ಲಿ ನಡೆದ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಗಳನ್ನು ಕೆ.ಸಿ.ರೋಡ್ ಕೋಟೆಕಾರು ನಿವಾಸಿ ಫಾರಿಶ್(18), ಮುಕ್ಕಚೇರಿ ನಿವಾಸಿ ಸಫ್ವಾನ್ (23), ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಅರಾಫತ್ ಆಲಿ(18), ಉಳ್ಳಾಲ ದರ್ಗಾ ಬಳಿಯ ಫರಾಝ್, (19) ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೂ ಅರೆಸ್ಟ್ ಆಗಿದ್ದಾನೆ.

ಸೆ.26 ರಂದು ಹಂಪನಕಟ್ಟೆಯ ಚಾಯ್ಸ್ ಗೋಲ್ಡ್ ಹೆಸರಿನ ಚಿನ್ನಾಭರಣದ ಅಂಗಡಿಯ ಕೆಲಸಗಾರ ಮುಸ್ತಾಫ ಎಂಬವರು ಸ್ಕೂಟರ್ ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ರಾತ್ರಿ ಸುಮಾರು 8-45 ವೇಳೆಗೆ ದರೋಡೆ ನಡೆದಿತ್ತು. ಮಂಗಳೂರು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಇಬ್ಬರು ಆರೋಪಿಗಳು ಸ್ಕೂಟರಿನಲ್ಲಿ ಬಂದು ತಡೆದು ನಿಲ್ಲಿಸಿ, ಇನ್ನಿಬ್ಬರು ಕಾರಿನಲ್ಲಿ ಬಂದು ಮುಸ್ತಾಫ ರವರನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿ ಎಕ್ಕೂರು ಎಂಬಲ್ಲಿ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ  ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 111/2025 ಕಲಂ 137(2), 310(2) BNS -2023 ರಂತೆ ಪ್ರಕರಣ ದಾಖಲಾಗಿತ್ತು. ಒಂದೂವರೆ ಕೋಟಿ ಮೌಲ್ಯದ 1650 ಗ್ರಾಮ್ ಚಿನ್ನದ ಗಟ್ಟಿಯನ್ನು ದರೋಡೆ ಮಾಡಲಾಗಿತ್ತು.

ಪ್ರಕರಣದಲ್ಲಿ ಅಪ್ರಾಪ್ತ ಬಾಲಕ ಹಂಪನಕಟ್ಟೆಯ ಚಾಯ್ಸ್ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಚಿನ್ನದ ಗಟ್ಟಿಯನ್ನು ಕೊಂಡುಹೋಗುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದರು. ಮುಸ್ತಫಾ ಚಿನ್ನದ ಗಟ್ಟಿಯೊಂದಿಗೆ ತೆರಳುವ ಚಲನವಲನದ ಮಾಹಿತಿಯನ್ನು ಆರೋಪಿ ಫಾರಿಶ್ ನಿಗೆ ನೀಡಿದ್ದು ಅದರಂತೆ ಆರೋಪಿಗಳು ಪೂರ್ವಯೋಜಿತ ಸಂಚು ರೂಪಿಸಿದ್ದರು., ಆರೋಪಿ ಸಫ್ವಾನ್ ಕಾರನ್ನು ಒದಗಿಸಿದ್ದು, ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ಆರೋಪಿಗಳಾದ ಅರಾಫತ್ ಆಲಿ ಮತ್ತು ಫರಾಝ್ ಸುಜುಕಿ ಆಕ್ಸೆಸ್ ಸ್ಕೂಟರಿನಲ್ಲಿ ಬಂದು ಅಡ್ಡಗಟ್ಟಿ, ಇದೇ ಸಮಯ ಉಳಿದ ಆರೋಪಿಗಳು ಸಫ್ವಾನ್ ಒದಗಿಸಿದ ಬಿಳಿ ಬಣ್ಣದ ಕಾರಿನಲ್ಲಿ ಬಂದು ಮುಸ್ತಾಫರವರನ್ನು ಬಲತ್ಕಾರವಾಗಿ ಕಾರಿನಲ್ಲಿ ಹಾಕಿ ಅಪಹರಿಸಿಕೊಂಡು ಹೋಗಿದ್ದರು‌.

ಈ ಪ್ರಕರಣದಲ್ಲಿ ಕೃತ್ಯಕ್ಕೆ ಉಪಯೋಗಿಸಿದ KA-19HT-8545 ನೋಂದಣಿಯ ಸುಜುಕಿ ಆಕ್ಸೆಸ್ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ ಕಾರು ಮತ್ತು ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲು ಬಾಕಿ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ಮಂಗಳೂರು ನಗರ ಮತ್ತು ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗ, ಸಹಾಯಕ ಪೊಲೀಸ್ ಆಯುಕ್ತರು, ಸಿಸಿಬಿ ಘಟಕ ಮಂಗಳೂರು ರವರ ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿ ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಭಾಗಿಯಾಗಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅ.1:ಮಿಥುನ್ ರೈ ನೇತೃತ್ವದ ಪಿಲಿನಲಿಕೆ ದಶಮ ಸಂಭ್ರಮ ‘ಪಿಲಿನಲಿಕೆ -10’, ಸಿನಿಮಾ, ಕ್ರಿಕೆಟ್ ಸೆಲೆಬ್ರಿಟಿಗಳ ದಂಡು

Next Post

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

Related Posts

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
25
ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

September 29, 2025
100
Next Post
ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

ಹೋಂ ವರ್ಕ್‌ ಮಾಡದ್ದಕ್ಕೆ ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

Discussion about this post

Recent News

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
23
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

October 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d