• About us
  • Contact us
  • Disclaimer
Saturday, July 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕನ್ನಡಿಗರ ಕಣ್ಮಣಿ ‘ಅಪ್ಪು’, ‘ರಾಜಕುಮಾರ’ ಪುನೀತ್ ಇನ್ನಿಲ್ಲ ; ಹೃದಯಾಘಾತದಿಂದ ವಿಧಿವಶ

Coastal Times by Coastal Times
October 29, 2021
in ರಾಜ್ಯ, ಸಿನಿಮಾ
ಕನ್ನಡಿಗರ ಕಣ್ಮಣಿ ‘ಅಪ್ಪು’,  ‘ರಾಜಕುಮಾರ’ ಪುನೀತ್ ಇನ್ನಿಲ್ಲ ; ಹೃದಯಾಘಾತದಿಂದ ವಿಧಿವಶ
45
VIEWS
WhatsappTelegramShare on FacebookShare on Twitter

ಬೆಂಗಳೂರು: ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ (46) ಹೃದಯಾಘಾತದಿಂದ ಇಂದು ಮಧ್ಯಾಹ್ನ ನಗರದ ವಿಕ್ರಂ ಆಸ್ಪತ್ರೆಯಲ್ಲಿ  ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದು ಕುಟುಂಬಸ್ಥರು, ಅಸಂಖ್ಯಾತ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದ ಅವರನ್ನು ವಿಕ್ರಂ ಆಸ್ಪತ್ರೆಗೆ ವರ್ಗಾಯಿಸಲಾಯಿತು.
ಪುನೀತ್ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅಸುನೀಗಿದ್ದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆಘಾತವಾಗಿದೆ. ಪುನೀತ್ ಅವರ ನಿಧನ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.

ಪುನೀತ್ ನಿವಾಸಕ್ಕೆ ಬಿಗಿ ಭದ್ರತೆ: ಪುನೀತ್ ರಾಜ್ ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಂಡೋಪತಂಡವಾಗಿ ಮನೆಯತ್ತ ಲಗ್ಗೆಯಿಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುನೀತ್ ಮನೆಗೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.

ನಟ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತವಾಗಿ ಆಸ್ಪತ್ರೆಗೆ ಬಂದಿದ್ದಾರೆ, ಇಂದು ಬೆಳಗ್ಗೆ 11.30ರ ಹೊತ್ತಿಗೆ ಅವರು ಆಸ್ಪತ್ರೆಗೆ ಬರುವಾಗಲೇ ಗಂಭೀರವಾಗಿದ್ದರು. ಅದಕ್ಕೆ ಮೊದಲು ಎದೆನೋವು ಕಾಣಿಸಿಕೊಂಡು ಬೇರೆ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದರು. ಐಸಿಯುನಲ್ಲಿ ಕೂಡಲೇ ಅವರಿಗೆ ತುರ್ತು ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ ನಮ್ಮಿಂದ ಬದುಕಿಸಲು ಸಾಧ್ಯವಾಗಿಲ್ಲ ಎಂದು ಆಸ್ಪತ್ರೆಯ ತಜ್ಞ ಡಾ ರಂಗನಾಥ್ ನಾಯಕ್ ತಿಳಿಸಿದ್ದಾರೆ.
ಇಂದು ನಸುಕಿನ ಜಾವ ಜಿಮ್ ಗೆ ವರ್ಕೌಟ್ ಗೆ ಹೋಗಿದ್ದಾಗಲೇ ಪುನೀತ್ ಅವರಿಗೆ ತೀವ್ರ ಹೃದಯಾಘಾತವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

25 ದಿನಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಮುಂಬೈ ಹೈಕೋರ್ಟ್‌ ಜಾಮೀನು ಮಂಜೂರು!

Next Post

ಮಂಗಳೂರು: ಉರ್ವ ಮಾರ್ಕೆಟ್‌ ಬಳಿ ಒಳಾಂಗಣ ಕ್ರೀಡಾಂಗಣಕ್ಕೆ ಚಾಲನೆ

Related Posts

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್
ಕರಾವಳಿ

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
96
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
Next Post
ಮಂಗಳೂರು: ಉರ್ವ ಮಾರ್ಕೆಟ್‌ ಬಳಿ ಒಳಾಂಗಣ ಕ್ರೀಡಾಂಗಣಕ್ಕೆ ಚಾಲನೆ

ಮಂಗಳೂರು: ಉರ್ವ ಮಾರ್ಕೆಟ್‌ ಬಳಿ ಒಳಾಂಗಣ ಕ್ರೀಡಾಂಗಣಕ್ಕೆ ಚಾಲನೆ

Discussion about this post

Recent News

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
167
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

ಸುರತ್ಕಲ್ ಮದರಸ ಅಧ್ಯಾಪಕರಿಗೆ ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು

July 10, 2026
ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

ಬಿಜಿ ಟ್ರೇಡಿಂಗ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ 100 ದಿನದಲ್ಲಿ ಡಬಲ್ 6.42 ಲಕ್ಷ ರೂ. ಕಳೆದು ಕೊಂಡ ಯುವತಿ – ಪ್ರಕರಣ ದಾಖಲು

July 10, 2026
ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

ಮಂಗಳೂರು: ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈಕ್ ಪಲ್ಟಿ ಸವಾರ ಯೋಧ ಮೃತ್ಯು

July 9, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d